Tuesday, December 5, 2023

ವಿಶಾಖಪಟ್ಟಣ ಕಡಲ ತೀರಕ್ಕೆ ಕೊಚ್ಚಿಕೊಂಡು ಬಂದ ಪುರಾತನ ಬೃಹತ್ ಪೆಟ್ಟಿಗೆ!

Follow Us

newsics.com

ವಿಶಾಖಪಟ್ಟಣ: 100 ಟನ್ ದೈತ್ಯನ ಪ್ರಾಚೀನ ಪೆಟ್ಟಿಗೆಯೊಂದು ಕಡಲತೀರಕ್ಕೆ ತೇಲಿಬಂದ ಘಟನೆ ವಿಶಾಖಪಟ್ಟಣಂನಲ್ಲಿ ನಡೆದಿದೆ. ಸೆಪ್ಟೆಂಬರ್ 29 ರಂದು ದೊಡ್ಡ ಪುರಾತನ ಪೆಟ್ಟಿಗೆಯೊಂದು ದಡಕ್ಕೆ ಕೊಚ್ಚಿ ಬಂದಿದೆ ಎಂಬ ಸುದ್ದಿ ಸ್ಥಳೀಯವಾಗಿ ವೈರಲ್ ಆಗಿದೆ.

ಇದನ್ನು ನೋಡಲು ನೂರಾರು ಜನರು ನೆರೆದಿದ್ದರು. ಆ ಪೆಟ್ಟಿಗೆಯಲ್ಲಿ ಏನಾದರೂ ಬೆಲೆಬಾಳುವ ನಿಧಿ ಇರಬಹುದೇ ಎಂಬ ಚರ್ಚೆಯೂ ಪ್ರಬಲವಾಗಿ ಕೇಳಿಬಂದಿದೆ. ಮತ್ತೊಂದೆಡೆ, ಹಡಗುಗಳನ್ನು ಆಂಕರ್ ಮಾಡುವಾಗ, ಅವು ಜೆಟ್ಟಿಗಳಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಬಳಸುವ ಮರದ ದಿಮ್ಮಿ ತರಹದ್ದೇನಾದರೂ ಆಗಿರಬಹುದಾ? ಎಂದೂ ಕೆಲವರು ಹೇಳಿದ್ದಾರೆ.

ದೊಡ್ಡ ಪೆಟ್ಟಿಗೆಯೊಂದು ದಡದಲ್ಲಿ ಬಿದ್ದಿರುವ ಮಾಹಿತಿ ಮೇರೆಗೆ ಪೊಲೀಸರು ವೈಎಂಸಿಎ ಬೀಚ್‌ ಗೆ ಬಂದು ಕಾವಲು ಕಾಯುತ್ತಿದ್ದಾರೆ. ಯಾರೂ ಬಾಕ್ಸ್ ಮುಟ್ಟದಂತೆ ಎಚ್ಚರಿಕೆ ವಹಿಸಲಾಗಿದೆ. ಪುರಾತತ್ವ ಇಲಾಖೆ ಅಧಿಕಾರಿಗಳು ಬಂದು ಬಾಕ್ಸ್ ತೆರೆಯುವ ಸಾಧ್ಯತೆ ಇದ್ದು, ಈಗಾಗಲೇ ಅವರಿಗೆ ಮಾಹಿತಿ ನೀಡಲಾಗಿದೆ ಎಂದಿದ್ದಾರೆ.

ಇಷ್ಟೊಂದು ಬೃಹತ್ ಪೆಟ್ಟಿಗೆ ದಡಕ್ಕೆ ಕೊಚ್ಚಿ ಬಂದಿರುವುದು ಇದೇ ಮೊದಲು ಎಂದು ಸ್ಥಳೀಯರು ಹೇಳುತ್ತಾರೆ. ಅಲ್ಲದೆ, ಆ ಪೆಟ್ಟಿಗೆಯ ಬಳಿ ಶ್ವಾನದಳ ಮತ್ತು ಬಾಂಬ್ ಸ್ಕ್ವಾಡ್ ಕೂಡ ಬಂದಿವೆ. ಅದನ್ನು ಕೂಲಂಕಷವಾಗಿ ಪರಿಶೀಲಿಸಲಾಗುತ್ತಿದೆ. ಆದರೆ, ಇದು ಎಲ್ಲಿಂದ ಬಂತು ಎಂಬುದು ಅಧಿಕಾರಿಗಳಿಗೆ ಯಕ್ಷಪ್ರಶ್ನೆಯಾಗಿದೆ.

ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಮುಸ್ಲಿಂ ಯುವಕ ಅರೆಸ್ಟ್

ಮತ್ತಷ್ಟು ಸುದ್ದಿಗಳು

vertical

Latest News

ವಿಜಯೇಂದ್ರ ಪತ್ನಿ ಸಹೋದರನ ಮನೆ ಮೇಲೆ ಲೋಕಾಯುಕ್ತ ದಾಳಿ

Newsics.com ಕಲಬುರಗಿ : ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ ಮಾಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪತ್ನಿ ಸಹೋದರ ಡಾ ಪ್ರಭುಲಿಂಗ ಮಾನ್ಕರ್ ಅವರ ಮನೆ...

ಭಾರತದಲ್ಲಿ 75 ಲಕ್ಷಕ್ಕೂ ಅಧಿಕ ವಾಟ್ಸ್ ​ಆ್ಯಪ್ ಅಕೌಂಟ್ ಬ್ಯಾನ್

Newsics.com ನವದೆಹಲಿ : ಮೆಟಾದ ತ್ವರಿತ ಮೆಸೇಜಿಂಗ್ ಪ್ಲಾಟ್​ಫಾರ್ಮ್ ವಾಟ್ಸ್​ಆ್ಯಪ್ ಭಾರತದಲ್ಲಿ ಕಳೆದ ಅಕ್ಟೋಬರ್ ತಿಂಗಳಲ್ಲಿ ಬರೋಬ್ಬರಿ 75 ಲಕ್ಷಕ್ಕೂ ಅಧಿಕ ವಾಟ್ಸ್​ ಆ್ಯಪ್ ಖಾತೆಗಳನ್ನು ರದ್ದುಗೊಳಿಸಿದೆ ಎಂದು ವರದಿಯಾಗಿದೆ. 2021 ಬಳಕೆದಾರರ ಸುರಕ್ಷತ...

ತೆಲಂಗಾಣದ ನೂತನ ಸಿಎಂ ಇವರೇ : ನಾಳೆಯೇ ಪ್ರಮಾಣ ವಚನ..!!

Newsics.com ಹೈದರಾಬಾದ್ : ತೆಲಂಗಾಣದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಿದೆ. ಇದೀಗ ಬಂದ ಮಾಹಿತಿ ಪ್ರಕಾರ, ರೇವಂತ್ ರೆಡ್ಡಿ ಅವರನ್ನೇ...
- Advertisement -
error: Content is protected !!