newsics.com
ಚೆನ್ನೈ: ರಾಜ್ಯದ ರೈತರ ಹಿತಾಸಕ್ತಿಗೆ ಧಕ್ಕೆ ತರುವ ಮೇಕೆದಾಟು ಜಲಾಶಯ ನಿರ್ಮಾಣಕ್ಕೆ ಕರ್ನಾಟಕಕ್ಕೆ ಒಪ್ಪಿಗೆ ನೀಡಬಾರದೆಂದು ತಮಿಳುನಾಡಿನ ಪ್ರತಿಪಕ್ಷ ಡಿಎಂಕೆ ನಿಯೋಗ ಪ್ರಧಾನಿಗೆ ಮನವಿ ಮಾಡಿದೆ.
ಕಾವೇರಿ ನದಿಗೆ ಮೇಕೆದಾಟು ಬಳಿ ಕರ್ನಾಟಕ ನಿರ್ಮಿಸಲು ಮುಂದಾಗಿರುವ ಜಲಾಶಯಕ್ಕೆ ಅನುಮತಿ ನೀಡಬಾರದೆಂದು ಡಿಎಂಕೆ ಒತ್ತಾಯಿಸಿದೆ.
ಅಕ್ಟೋಬರ್ 17ರಂದು ಕಾವೇರಿ ತೀಥೋ೯ದ್ಭವ
ಇತ್ತೀಚೆಗೆ ಪ್ರಧಾನಿ ಮೋದಿ ಭೇಟಿ ಮಾಡಿದ್ದ ಕರ್ನಾಟಕ ಸಿಎಂ ಬಿಎಸ್ವೈ ಮೇಕೆದಾಟು ಯೋಜನೆಗೆ ಅನುಮತಿ ಕೋರಿದ್ದರು.
ಇದು ತಿಳಿಯುತ್ತಿದ್ದಂತೆ ತಮಿಳುನಾಡಿದ ಡಿಎಂಕೆ ಮುಖಂಡರಾದ ಟಿ.ಆರ್.ಬಾಲು, ದಯಾನಿಧಿ ಮಾರನ್, ಕನಿಮೊಳಿ ಅವರನ್ನು ಒಳಗೊಂಡ ತಂಡ ಪ್ರಧಾನಿಯವರನ್ನು ಭೇಟಿ ಮಾಡಿದ್ದು, ಈ ಯೋಜನೆಯಿಂದ ತಮಿಳುನಾಡಿನ ಜನರಿಗೆ ಹಾಗೂ ರೈತರಿಗೆ ಅನ್ಯಾಯವಾಗಲಿದೆ ಎಂದು ವಿವರಿಸಿದೆ.
ಅಲ್ಲದೇ ಮೇಕೆದಾಟು ಯೋಜನೆ ವಿರುದ್ಧ ಪಕ್ಷದ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಬರೆದ ಪತ್ರವನ್ನು ಪ್ರಧಾನಿಗೆ ಸಲ್ಲಿಸಿದೆ.
ಪ್ರಧಾನಿ ಮೋದಿ ಭೇಟಿ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಡಿಎಂಕೆ ಮುಖಂಡ ಟಿ.ಆರ್.ಬಾಲು, ಪ್ರಧಾನಿ ತಮಿಳುನಾಡಿನ ರೈತರ ಹಿತಾಸಕ್ತಿಗೆ ಧಕ್ಕೆ ತರುವ ಯೋಜನೆ ಅನುಷ್ಠಾನಕ್ಕೆ ಅವಕಾಶ ನೀಡುವುದಿಲ್ಲ ಎಂಬ ಭರವಸೆ ನೀಡಿದ್ದಾರೆ ಎಂದರು.
ಆರೋಗ್ಯ ಇಲಾಖೆ ದಿನಗೂಲಿ ನೌಕರರ ಕನಿಷ್ಠ ವೇತನ ಹೆಚ್ಚಳ
ಕೃಷಿ ಹೊಂಡಕ್ಕೆ ಬಿದ್ದು 3 ಮಕ್ಕಳು ಜಲಸಮಾಧಿ
ಅಗತ್ಯ ವಸ್ತು ಪಟ್ಟಿಯಿಂದ ಈರುಳ್ಳಿ, ಆಲೂ, ಖಾದ್ಯ ತೈಲ, ದ್ವಿದಳ ಧಾನ್ಯ ಹೊರಕ್ಕೆ
ಸೆ.25ರಂದು ಕರ್ನಾಟಕ ಬಂದ್ ಇಲ್ಲ, ಬದಲಿಗೆ ಹೆದ್ದಾರಿ ಬಂದ್
https://newsics.com/news/karnataka/on-september-25-there-was-no-karnataka-bandh-but-a-highway-band/32784/