Sunday, October 1, 2023

ಕೆಲವೇ ಕ್ಷಣಗಳಲ್ಲಿ ಅರ್ನಾಬ್ ಗೋ ಸ್ವಾಮಿ ಜಾಮೀನು ಅರ್ಜಿ ವಿಚಾರಣೆ

Follow Us

Newsics.com

ಮುಂಬೈ:  ನ್ಯಾಯಾಂಗ ಬಂಧನದಲ್ಲಿರುವ ರಿಪಬ್ಲಿಕ್ ಸುದ್ದಿ ವಾಹಿನಿಯ ಮುಖ್ಯ ಸಂಪಾದಕ ಅರ್ನಾಬ್ ಗೋ ಸ್ವಾಮಿ ಜಾಮೀನು ಅರ್ಜಿ ವಿಚಾರಣೆ  ಕೆಲವೇ ಕ್ಷಣಗಳಲ್ಲಿ  ಹೈಕೋರ್ಟ್ ನಲ್ಲಿ ನಡೆಯಲಿದೆ.   ನ್ಯಾಯಮೂರ್ತಿಗಳಾದ ಎಸ್ ಎಸ್ ಶಿಂಧೆ ಮತ್ತು ಎಂ ಎಸ್ ಕಾರ್ನಿಕ್ ಅವರನ್ನೊಳಗೊಂಡ ಪೀಠ ಈ ಜಾಮೀನು ಅರ್ಜಿಯ ವಿಚಾರಣೆ ನಡೆಸಲಿದೆ. ಶುಕ್ರವಾರ ನಿಗದಿಯಾಗಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಶನಿವಾರಕ್ಕೆ ಮುಂದೂಡಿತ್ತು.

ಅರ್ನಾಬ್ ವಿರುದ್ಧ ದಾಖಲಾಗಿರುವ ಎಫ್ ಐ ಆರ್ ರದ್ದುಪಡಿಸಬೇಕು ಮತ್ತು ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು ಎಂದು ಅರ್ನಾಬ್ ಪರ ವಕೀಲರು  ನ್ಯಾಯಾಲಯಕ್ಕೆ ಮನವಿಮಾಡಿದ್ದಾರೆ.

ಮಹಾರಾಷ್ಟ್ರ ಸರ್ಕಾರ ಬಾಂಬೆ ಹೈಕೋರ್ಟ್ ನಲ್ಲಿ ಜಾಮೀನು ಅರ್ಜಿಯನ್ನು ಬಲವಾಗಿ ವಿರೋಧಿಸುವ ಸಾಧ್ಯತೆಯಿದೆ. ಜಾಮೀನಿನ ಮೇಲೆ ಬಿಡುಗಡೆಯಾದರೆ ತನಿಖೆಯ ಮೇಲೆ ಪ್ರಭಾವ ಬೀರಲಿದ್ದಾರೆ ಎಂಬ ವಾದವನ್ನು ಸರ್ಕಾರದ ಪರ ವಕೀಲರು   ಇಂದು ನ್ಯಾಯಾಲಯದಲ್ಲಿ ಮಂಡಿಸುವ ಸಾಧ್ಯತೆಯಿದೆ.

ನ್ಯಾಯಾಂಗ ಬಂಧನದಲ್ಲಿರುವ ಅರ್ನಾಬ್ ಅವರನ್ನು ಇದೀಗ ಅಲಿಭಾಗ್ ನಲ್ಲಿ ಇರಿಸಲಾಗಿದೆ. ಅಲಿಭಾಗ್ ನಲ್ಲಿರುವ ಶಾಲೆಯನ್ನು ತಾತ್ಕಾಲಿಕ ಜೈಲು ಆಗಿ ಪರಿವರ್ತಿಸಲಾಗಿದೆ.  ಕೊರೋನಾ ಹಿನ್ನೆಲೆಯಲ್ಲಿ ಅರ್ನಾಬ್ ಗೋ ಸ್ವಾಮಿಯನ್ನು ಈ ಜೈಲ್ಲಿನಲ್ಲಿ ಇರಿಸಲಾಗಿದೆ.

 

ಮತ್ತಷ್ಟು ಸುದ್ದಿಗಳು

vertical

Latest News

ಹಳ್ಳಕ್ಕೆ ಉರುಳಿದ ಬಸ್: 8‌ ಮಂದಿ‌ ಸಾವು, 25 ಪ್ರಯಾಣಿಕರಿಗೆ ಗಾಯ

newsics.com ಚೆನ್ನೈ: ತಮಿಳುನಾಡಿನ ನೀಲಗಿರಿ ಬೆಟ್ಟದಲ್ಲಿ ಶನಿವಾರ ಪ್ರವಾಸಿ ಬಸ್ ಹಳ್ಳಕ್ಕೆ ಬಿದ್ದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, 25 ಮಂದಿ ಗಾಯಗೊಂಡಿದ್ದಾರೆ. ಮೃತರಲ್ಲಿ ನಾಲ್ವರು ಮಹಿಳೆಯರು ಮತ್ತು...

ಅಕ್ಟೋಬರ್‌ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ತಾಪಮಾನ ಸಾಧ್ಯತೆ!

newsics.com ನವದೆಹಲಿ: ದೇಶದ ಬಹುತೇಕ ಭಾಗಗಳಲ್ಲಿ ಅಕ್ಟೋಬರ್‌ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನ ಮತ್ತು ಸಾಮಾನ್ಯಕ್ಕಿಂತ ಹೆಚ್ಚು ಕನಿಷ್ಠ ತಾಪಮಾನ ದಾಖಲಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶನಿವಾರ ತಿಳಿಸಿದೆ. ತಮಿಳುನಾಡು, ಕರಾವಳಿ...

ಕರ್ನಾಟಕದಲ್ಲಿ ಈ ಬಾರಿ ಶೇ. 25ರಷ್ಟು ಮಳೆಯ ಕೊರತೆ

newsics.com ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಅವಧಿಯಲ್ಲಿ ಈ ವರ್ಷ ಶೇ 25ರಷ್ಟು ಮಳೆ ಕೊರತೆಯಾಗಿದೆ. ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗಿನ ನಾಲ್ಕು ತಿಂಗಳಲ್ಲಿ ಒಟ್ಟು 845 ಮಿ.ಮೀ ಮಳೆ ಸುರಿಯಬೇಕಿತ್ತು. ಆದರೆ, 635...
- Advertisement -
error: Content is protected !!