Saturday, April 1, 2023

ಮನೆಗೆ ತೆರಳಲೆಂದು ಬಸ್ಸನ್ನೇ ಕದ್ದ ಪಾನಮತ್ತ!

Follow Us

ವಿಕಾರಾಬಾದ್​: ಮನೆಗೆ ಹೋಗಲು ಬಸ್ಸಿಲ್ಲವೆಂಬ ಕಾರಣಕ್ಕೆ ಪಾನಮತ್ತನೊಬ್ಬ ಸರ್ಕಾರಿ ಬಸ್ಸನ್ನೇ ಕದ್ದಿದ್ದಾನೆ.
ತೆಲಂಗಾಣದ ವಿಕಾರಾಬಾದ್​ ಜಿಲ್ಲೆಯ ತಾಂಡೂರಿನಲ್ಲಿ ಈ ಘಟನೆ ನಡೆದಿದೆ.
ರಾತ್ರಿ 9 ಗಂಟೆಗೆ ತಾಂಡೂರು ಡಿಪೋದಿಂದ ಓಗಿಪುರಕ್ಕೆ ಟಿಎಸ್​ಆರ್​ಟಿಸಿ ಬಸ್​ ಹೊರಟಿತ್ತು. ಆ ಊರಿಗೆ ಕೊನೆಯ ಬಸ್​ ಆಗಿದ್ದ ಅದರಲ್ಲಿ 15 ಪ್ರಯಾಣಿಕರಿದ್ದರು. ಬಸ್ಸಿನ ಡ್ರೈವರ್, ಕಂಡಕ್ಟರ್​ ಊಟಕ್ಕೆಂದು ಹೋಗಿದ್ದರು. ಈ ವೇಳೆ ವ್ಯಕ್ತಿಯೊಬ್ಬ ಬಸ್ ಓಡಿಸಲಾರಂಭಿಸಿದ್ದಾನೆ. ಕಂಠಪೂರ್ತಿ ಕುಡಿದಿದ್ದ ಕಳ್ಳ ಬಸ್ಸನ್ನು ಹೇಗೆಂದರೇಗೆ ಓಡಿಸಲಾರಂಭಿಸಿದಾಗ ಪ್ರಯಾಣಿಕರು ಆತನನ್ನು ಕಂಡಕ್ಟರ್​ ಎಲ್ಲಿ ಎಂದು ಪ್ರಶ್ನಿಸಿದ್ದಾರೆ. ಅದಕ್ಕೆ ಆತ ಕಂಡಕ್ಟರ್​ಗೆ ಹುಷಾರಿಲ್ಲ. ನೀವು ನನಗೆ ಹಣ ಕೊಡಿ ಎಂದು ಕೇಳಿದ್ದಾನೆ. ಆಗ ಪ್ರಯಾಣಿಕರು ಡಿಪೋ ಮ್ಯಾನೇಜರ್​ಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಪೊಲೀಸರು ಬಸ್ ಓಡಿಸಿದ ವ್ಯಕ್ತಿಗಾಗಿ ಶೋಧ ಮುಂದುವರಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ್ದ ಕೇಜ್ರಿವಾಲ್‌ಗೆ 25 ಸಾವಿರ ದಂಡ

ಅಹಮದಾಬಾದ್‌: ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‍ಗೆ  ಮುಖಭಂಗ ಉಂಟಾಗಿದೆ. ಪ್ರಧಾನಿ ಮೋದಿ ಡಿಗ್ರಿ ಸರ್ಟಿಫಿಕೇಟ್‍ಗಳನ್ನು ಪ್ರದರ್ಶಿಸುವ ಅಗತ್ಯವಿಲ್ಲ ಎಂದು ಗುಜರಾತ್...

ಕೆಲಸದ ನಡುವೆ ಧಮ್ ಎಳೆಯಲು ಪದೇ ಪದೇ ಬ್ರೇಕ್, 9 ಲಕ್ಷ ರೂಪಾಯಿ ದಂಡ

newsics.com ನವದೆಹಲಿ: ಕೆಲಸದ ನಡುವೆ ಧಮ್ ಎಳೆಯಲು ಬ್ರೇಕ್ ತೆಗೆದುಕೊಳ್ಳುವುದು ಸಾಮಾನ್ಯವಾಗಿದೆ.ನೀವೂ ಹೀಗೆ ಮಾಡುತ್ತಿದ್ದರೆ ಎಚ್ಚರವಾಗಿರುವುದು ಒಳಿತು. ಕೆಲಸದ ನಡುವೆ ಧಮ್ ಎಳೆಯಲು ಪದೇ ಪದೇ ಬ್ರೇಕ್, 9 ಲಕ್ಷ ರೂಪಾಯಿ ದಂಡವನ್ನು ಕಂಪನಿ...

ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿ ಹಿನ್ನೆಲೆ ಮಧ್ಯರಾತ್ರಿ 1 ಗಂಟೆಯ ತನಕ ಮೆಟ್ರೋ ಸೇವೆ

newsics.com ಬೆಂಗಳೂರು: ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿ ಹಿನ್ನೆಲೆ ಮಧ್ಯರಾತ್ರಿ 1 ಗಂಟೆಯ ತನಕ ಮೆಟ್ರೋ ಸೇವೆ ವಿಸ್ತರಣೆ ಮಾಡಲಾಗುತ್ತಿದೆ. ರಾಜ್ಯ ರಾಜಧಾನಿಯಲ್ಲಿ ಏಪ್ರಿಲ್ 2, 10, 17, 26 ಮೇ 21 ರಂದು ಐಪಿಎಲ್ ಪಂದ್ಯವಿರುವ...
- Advertisement -
error: Content is protected !!