Monday, October 2, 2023

ಹತ್ರಾಸ್ ಅತ್ಯಾಚಾರ ಪ್ರಕರಣ: ಸಿಬಿಐ ತನಿಖೆ ಸಾಧ್ಯತೆ

Follow Us

ನವದೆಹಲಿ: ಉತ್ತರಪ್ರದೇಶದ ಹತ್ರಾಸ್ ನಲ್ಲಿ  ನಡೆದ ಯುವತಿಯ ಸಾಮೂಹಿಕ ಅತ್ಯಾಚಾರ ಕುರಿತಂತೆ ಸಿಬಿಐ ತನಿಖೆ ನಡೆಯುವ ಸಾಧ್ಯತೆ ಹೆಚ್ಚಾಗಿದೆ. ರಾಜ್ಯ ಪೊಲೀಸ್ ಇಲಾಖೆಯ ಮೇಲೆ ತನಗೆ ವಿಶ್ವಾಸ ಇಲ್ಲ ಯುವತಿಯ ತಂದೆ ಹೇಳಿರುವ ಹಿನ್ನೆಲೆಯಲ್ಲಿ ತನಿಖೆಯನ್ನು ಸಿಬಿಐ ಗೆ ಹಸ್ತಾಂತರಿಸುವ ಸಾಧ್ಯತೆ ಹೆಚ್ಚಾಗಿದೆ.

ಇದೀಗ ಇಡೀ ಹತ್ರಾಸ್ ಗ್ರಾಮದಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಎರಡು ಕಿಲೋ ಮೀಟರ್ ದೂರದಲ್ಲಿ ವಾಹನಗಳನ್ನು ತಡೆಹಿಡಿಯಲಾಗುತ್ತಿದೆ. ಇದೇ ವೇಳೆ ಪ್ರಕರಣ ಸಂಬಂಧ ಅಲಹಾಬಾದ್ ಹೈಕೋರ್ಟ್ ಕೂಡ ಕಳವಳ ವ್ಯಕ್ತಪಡಿಸಿದೆ. ತರಾತುರಿಯಲ್ಲಿ ಮೃತದೇಹ ಅಂತ್ಯ ಸಂಸ್ಕಾರ ಯಾಕೆ ನಡೆಸಲಾಯಿತು ಎಂಬ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ಪೊಲೀಸ್ ಅಧಿಕಾರಿಗಳಿಗೆ ನ್ಯಾಯಾಲಯ ಆದೇಶ ನೀಡಿದೆ.

ಇನ್ನೊಂದೆಡೆ ಕೃತ್ಯ ಖಂಡಿಸಿ ನವದೆಹಲಿಯಲ್ಲಿ ಭಾರೀ ಪ್ರತಿಭಟನೆ ನಡೆಸಲು ವಿವಿಧ ರಾಜಕೀಯ ಪಕ್ಷಗಳು ಸಿದ್ಧತೆ ನಡೆಸಿವೆ. ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ದೆಹಲಿಯ ವಾಲ್ಮೀಕಿ ನಗರದಲ್ಲಿ ಆಯೋಜಿಸಲಾಗಿರುವ ಪ್ರತಿಭಟನೆಯಲ್ಲಿ ಭಾಗವಹಿಸುವುದಾಗಿ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ವಿದ್ಯುತ್ ಲೈನ್ ತಗುಲಿ 5 ಜಾನುವಾರು ಸ್ಥಳದಲ್ಲಿಯೇ ಸಾವು

newsics.com ಕೊಡಗು: ವಿದ್ಯುತ್ ಲೈನ್ ತುಂಡಾಗಿ ಬಿದ್ದ ಹಿನ್ನೆಲೆ ಐದು ಜಾನುವಾರುಗಳು ಸ್ಥಳದಲ್ಲಿಯೇ ಸಾವನ್ನಪ್ಪಿದೆ. ದಾರುಣ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಮತ್ತೂರಿನಲ್ಲಿ ನಡೆದಿದೆ. ಮತ್ತೂರು ಗ್ರಾಮದ...

Asian Games; ಭಾರತಕ್ಕೆ ಒಂದೇ ದಿನ 15 ಪದಕ

newsics.com ಹ್ಯಾಂಗ್‌ಝೌ: ಏಷ್ಯನ್‌ ಗೇಮ್ಸ್‌ನಲ್ಲಿ ಭಾರತ 8ನೇ ದಿನವಾದ ಭಾನುವಾರ ಒಂದೇ ದಿನ 15 ಪದಕ ಬಾಚಿಕೊಂಡಿದೆ. 7ನೇ ದಿನವಾದ ಶನಿವಾರ 10 ಚಿನ್ನ, 14 ಬೆಳ್ಳಿ ಮತ್ತು 14 ಕಂಚಿನೊಂದಿಗೆ 38 ಪದಕಗಳನ್ನು ಭಾರತ...

ಬೆಂಗಳೂರು ಕಂಬಳ: ಕೋಣಗಳಿಗೆ ಮಂಗಳೂರಿಂದಲೇ ಬರುತ್ತೆ ಕುಡಿಯುವ ನೀರು!

newsics.com ಬೆಂಗಳೂರು: ನವೆಂಬರ್ ತಿಂಗಳ 25 ಮತ್ತು 26ನೇ ತಾರೀಕಿನಂದು ಮೊದಲ ಬಾರಿಗೆ ತುಳುನಾಡಿನ ಗಡಿಯನ್ನು ದಾಟಿ ಬೆಂಗಳೂರಿನಲ್ಲಿ ಕರಾವಳಿಯ ಸಾಂಸ್ಕೃತಿಕ ಕ್ರೀಡೆ ಕಂಬಳ ನಡೆಯುತ್ತಿದೆ. ಪುತ್ತೂರು ಶಾಸಕ ಅಶೋಕ್‌ ಕುಮಾರ್ ರೈ ನೇತೃತ್ವದಲ್ಲಿ ಕಂಬಳ...
- Advertisement -
error: Content is protected !!