Saturday, December 2, 2023

ಬಿಹಾರದಲ್ಲಿ ಕಾಂಗ್ರೆಸ್- ಆರ್’ಜೆಡಿ ಸರ್ಕಾರ; ಇಂಡಿಯಾ ಟುಡೇ ಸಮೀಕ್ಷೆ

Follow Us

newsics.com
ನವದೆಹಲಿ: ಬಿಹಾರದಲ್ಲಿ ಕಾಂಗ್ರೆಸ್- ಆರ್ ಜೆಡಿ ಸರ್ಕಾರ ಬರಲಿದೆ ಎಂದು ಇಂಡಿಯಾ ಟುಡೇ -ಆಕ್ಸಿಸ್ ಮೈ ಇಂಡಿಯಾ ಚುನಾವಣಾ ಪೂರ್ವ ಸಮೀಕ್ಷೆ ಹೇಳಿದೆ.
ಈ ಮೂಲಕ ನಾಲ್ಕನೇ ಬಾರಿಗೆ ಸಿಎಂ ಆಗುವ ಕನಸು ಕಾಣುತ್ತಿರುವ ನಿತೀಶ್ ಕುಮಾರ್ ಅವರ ಕನಸು ಭಗ್ನವಾಗಲಿದ್ದು, ಮಹಾಘಟನಂಧನ್ ಸಿಎಂ ಅಭ್ಯರ್ಥಿ ತೇಜಸ್ವಿ ಯಾದವ್ ಅವರು ಸಿಎಂ ಆಗುವ ಸಾಧ್ಯತೆಯಿದೆ ಎಂದು ಸಮೀಕ್ಷೆ ಹೇಳಿದೆ.
ಕೊರೊನಾ ಸೋಂಕು ಹರಡುವಿಕೆ ಆತಂಕದ ನಡುವೆಯೂ ಬಿಹಾರದಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಸಲಾಗಿದ್ದು, ನ.7 ರಂದು ಮೂರನೇ ಹಾಗೂ ಅಂತಿಮ ಹಂತದ ಮತದಾನ ಮುಕ್ತಾಯವಾಗಿದೆ.
243 ಸ್ಥಾನ (122 ಮ್ಯಾಜಿಕ್ ನಂಬರ್)
ಮಹಾಘಟಬಂಧನ್: 139 ರಿಂದ 161, 39% ಮತ ಗಳಿಕೆ
ಎನ್ಡಿಎ: 69 ರಿಂದ 61, 44%
ಎಲ್ ಜೆಪಿ: 3 ರಿಂದ 5, 7%
ಜಿಡಿಎಸ್ ಎಫ್: 3 ರಿಂದ 5, 4%
243 ಸದಸ್ಯ ಬಲ ಹೊಂದಿರುವ ಬಿಹಾರ ವಿಧಾನಸಭೆ ಅವಧಿಯು ನವೆಂಬರ್ 29 ರಂದು ಕೊನೆಗೊಳ್ಳಲಿದೆ. ಅಕ್ಟೋಬರ್ 28ರಂದು 16 ಜಿಲ್ಲೆಗಳ 71 ಕ್ಷೇತ್ರಗಳಿಗೆ 31,000 ಮತಗಟ್ಟೆಗಳಲ್ಲಿ ಮೊದಲ ಹಂತದಲ್ಲಿ ಚುನಾವಣೆ, ನವೆಂಬರ್ 3ರಂದು ಎರಡನೆಯ ಹಂತದಲ್ಲಿ 17 ಜಿಲ್ಲೆಗಳಲ್ಲಿ 94 ಕ್ಷೇತ್ರಗಳಿಗೆ 42,000 ಮತಗಟ್ಟೆಗಳಲ್ಲಿ ಚುನಾವಣೆ, ನವೆಂಬರ್ 7ರಂದು ಮೂರನೇ ಹಂತದಲ್ಲಿ 78 ಕ್ಷೇತ್ರಗಳಿಗೆ 1 ಜಿಲ್ಲೆಗಳಲ್ಲಿ ಅಂದಾಜು 33,500 ಮತಗಟ್ಟೆಗಳಲ್ಲಿ ಚುನಾವಣೆ ನಡೆಸಲಾಯಿತು. ಅಂತಿಮವಾಗಿ ನವೆಂಬರ್10ರಂದು ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬೀಳಲಿದೆ.
2015ರಲ್ಲಿ ರಾಷ್ಟ್ರೀಯ ಜನತಾ ದಳ 80 ಸ್ಥಾನ, ಜನತಾ ದಳ ಯುನೈಟೆಡ್ 71, ಕಾಂಗ್ರೆಸ್ 27 ಗಳಿಸಿದ್ದವು. ಬಿಜೆಪಿ 53 ಸ್ಥಾನ, ಎಲ್ ಜೆಪಿ 2 ಹಾಗೂ ಹಿಂದೂಸ್ತಾನಿ ಅವಾಮ್ ಮೋರ್ಚಾ ಸೆಕ್ಯುಲರ್ 1, ಇತರೆ 10 ಸ್ಥಾನ ಗಳಿಸಿದ್ದವು.

ನಾಲ್ಕು ಚಕ್ರ ವಾಹನಗಳಿಗೆ ಇನ್ನು ಫಾಸ್ಟ್ ಟ್ಯಾಗ್ ಕಡ್ಡಾಯ

ಒಂದೇ ದಿನ ರಾಜ್ಯದಲ್ಲಿ 2258 ಮಂದಿಗೆ ಸೋಂಕು, 22 ಜನ ಬಲಿ

ಮತ್ತಷ್ಟು ಸುದ್ದಿಗಳು

vertical

Latest News

ಆಸ್ಟ್ರೇಲಿಯಾದಲ್ಲಿ ಪಾಕಿಸ್ತಾನಕ್ಕೆ ಅವಮಾನ: ಟ್ರಕ್‌’ಗೆ ತಾವೇ ಲಗೇಜ್‌ ಲೋಡ್‌ ಮಾಡಿದ ಆಟಗಾರರು

newsics.com ಸಿಡ್ನಿ: ಆಸ್ಟ್ರೇಲಿಯಾ ಕ್ರಿಕೆಟ್ ಪ್ರವಾಸಕ್ಕೆ ತೆರಳಿರುವ ಪಾಕಿಸ್ತಾನ ಕ್ರಿಕೆಟ್ ತಂಡದ ಆಟಗಾರರು ವಿಮಾನ ನಿಲ್ದಾಣದಲ್ಲಿ ತಮ್ಮ ಲಗೇಜ್ ಅನ್ನು ತಾವೇ ಟ್ರಕ್ ತುಂಬುತ್ತಿರುವ ವಿಡಿಯೋವೊಂದು ವೈರಲ್...

ರಾಜ್ಯದ 36 ಲಕ್ಷ ಮತದಾರರಿಗೆ ಚುನಾವಣಾ ಆಯೋಗ ನೋಟಿಸ್

newsics.com ಬೆಂಗಳೂರು: ಮತದಾರರ ಪಟ್ಟಿಯಲ್ಲಿ ಎರಡು ಕಡೆ ಹೆಸರಿರುವ ಅಥವಾ ಹೆಸರು ನಕಲು ಮಾಡಿರುವ 36 ಲಕ್ಷ ಮತದಾರರಿಗೆ ರಾಜ್ಯ ಚುನಾವಣಾ ಆಯೋಗವು ಭಾರತೀಯ ಅಂಚೆ ಮೂಲಕ ನೋಟಿಸ್ ನೀಡುವ ಪ್ರಕ್ರಿಯೆಯನ್ನು ಆರಂಭಿಸಿದೆ. ಹೆಚ್ಚುವರಿಯಾಗಿ, ಮುಂದಿನ...

ಅಸಲಿ ಚಿನ್ನದ ಜಾಗದಲ್ಲಿ ನಕಲಿ ಬಂಗಾರವಿಟ್ಟು ಗ್ರಾಹಕರಿಗೆ ವಂಚಸಿದ ಬ್ಯಾಂಕ್ ಸಿಬ್ಬಂದಿ

newsics.com ಚಿಕ್ಕಮಗಳೂರು: ಗ್ರಾಹಕರಿಗೆ ಬ್ಯಾಂಕ್‌ ಸಿಬ್ಬಂದಿ ಕೋಟ್ಯಂತರ ರೂಪಾಯಿ ವಂಚಿಸಿರುವ ಘಟನೆ ಚಿಕ್ಕಮಗಳೂರು ನಗರದ ಐ.ಜಿ. ರಸ್ತೆಯಲ್ಲಿರುವ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ನಡೆದಿದೆ. 6 ಕೋಟಿಗೂ ಅಧಿಕ ಹಣ ದುರುಪಯೋಗದ ಆರೋಪ...
- Advertisement -
error: Content is protected !!