Thursday, March 30, 2023

ಲಸಿಕೆ ಸಿಗುವವರೆಗೆ ಕೊರೋನಾ ಭಯವಿರಲಿ

Follow Us

newsics.com
ನವದೆಹಲಿ: ಕೊರೋನಾ ಲಸಿಕೆ ಸಿಗುವವರೆಗೆ ನಿರ್ಲಕ್ಷ್ಯ ಬೇಡ ಎಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಸಲಹೆ ನೀಡಿದ್ದಾರೆ.
ಜಬ್ ತಕ್ ದವಾಯಿ ನಹಿ ತಬ್ ತಕ್ ದಿಲಾಹಿ ನಹಿ, ದೋ ಗಜ್ ದೂರಿ ಮಾಸ್ಕ್ ಹೈ ಜರೂರಿ (ಲಸಿಕೆ ಲಭಿಸುವ ತನಕ ನಿರ್ಲಕ್ಷ್ಯ ಸಲ್ಲದು, ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸುವುದು ಕಡ್ಡಾಯ) ಎಂದು ಅವರು ಪ್ರಾಸಬದ್ಧ ಘೋಷಣೆ ಮೂಲಕ ದೇಶದ ಜನರಿಗೆ ಕೊರೋನಾ ಮಹಾಮಾರಿ ಬಗ್ಗೆ ಜಾಗ್ರತೆ ವಹಿಸುವಂತೆ ಸಲಹೆ ಮಾಡಿದ್ದಾರೆ.
ಪ್ರಧಾನಮಂತ್ರಿ ಆವಾಜ್ ಯೋಜನೆ (ಪಿಎಂಎವೈ) ಅಡಿ ಮಧ್ಯಪ್ರದೇಶದ ಗ್ರಾಮಾಂತರ ಪ್ರದೇಶಗಳಲ್ಲಿ 1.8 ಲಕ್ಷ ಮನೆಗಳ ಗೃಹ ಪ್ರವೇಶ ಸಮಾರಂಭದಲ್ಲಿ ಮಾತನಾಡಿದ ಅವರು, ಕೊರೋನಾ ಪಿಡುಗು ಇನ್ನೂ ದೂರವಾಗಿಲ್ಲ. ನಮ್ಮ ವಿಜ್ಞಾನಿಗಳು ಲಸಿಕೆ ಅಭಿವೃದ್ಧಿಗಾಗಿ ಹಗಲಿರುಳೂ ಶ್ರಮಿಸುತ್ತಿದ್ದಾರೆ. ಇದು ಅಭಿವೃದ್ಧಿಯಾಗುವವರೆಗೆ ಪ್ರತಿಯೊಬ್ಬರೂ ಜಾಗ್ರತೆಯಿಂದಿರ ಬೇಕು ಎಂದು ಕರೆನೀಡಿದರು. ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಮೋದಿಯವರು ಪುನರುಚ್ಚರಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಪಾಸ್​ವರ್ಡ್​ನಿಂದ ಆನ್ ಆಗುತ್ತೆ ಈ ಗ್ಯಾಸ್ ಸ್ಟವ್!

newsics.com ಬಿಹಾರ: ಪಾಸ್​ವರ್ಡ್​ನಿಂದ ಆನ್ ಆಗುತ್ತೆ ಈ ಗ್ಯಾಸ್ ಸ್ಟವ್. ಈ ಡಿಜಿಟಲ್ ಯುಗದಲ್ಲಿ ಯಾವುದೂ ಅಸಾಧ್ಯವಲ್ಲ ಎಂದೇ ಹೇಳಬಹುದು. ಬಿಹಾರದ 13 ವರ್ಷದ ಪ್ರತ್ಯೂಷ್ ಎಂಬ...

ಸಂಸದ ಸ್ಥಾನ ಕಸಿದುಕೊಂಡ ಕೋಲಾರಕ್ಕೆ ಮತ್ತೆ ರಾಹುಲ್‌ ಗಾಂಧಿ

newsics.com ಬೆಂಗಳೂರು: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ 2019ರ ಲೋಕಸಭೆ  ಚುನಾವಣೆ ಸಂದರ್ಭದಲ್ಲಿ ಕೋಲಾರದಲ್ಲಿ ತಾವು ಮಾಡಿದ ಭಾಷಣಕ್ಕೆ ಮಾನನಷ್ಟ ಮೊಕದ್ದಮೆ ಗುರಿಯಾಗಿದ್ದು, ಸದ್ಯ ಸಂಸತ್‌ ಸದಸ್ಯತ್ವ ಸ್ಥಾನದಿಂದಲೇ ಅನರ್ಹಗೊಂಡಿದ್ದಾರೆ. ಈಗ ಕರ್ನಾಟಕ ವಿಧಾನಸಭಾ ಚುನಾವಣೆ...

ಈ ಬಾರಿ ಕಾಂಗ್ರೆಸ್​ಗೆ 115ಕ್ಕೂ ಹೆಚ್ಚು ಸ್ಥಾನ, BJPಗೆ 68 :ಎಬಿಪಿಸಿ ಓಟರ್ ಸಮೀಕ್ಷೆ

newsics.com ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ 115ಕ್ಕೂ ಹೆಚ್ಚು ಸ್ಥಾನ ಗಳಿಸಲಿದೆ. ಜೆಡಿಎಸ್ 23 ಸ್ಥಾನಗಳನ್ನು ಪಡೆಯಬಹುದು  ಎಂದು ಎಬಿಪಿ ಸಿಓಟರ್ ಸಮೀಕ್ಷೆ ಬುಧವಾರ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್...
- Advertisement -
error: Content is protected !!