Saturday, December 2, 2023

ವೆಸ್ಟ್ ಇಂಡೀಸ್ ಮಣಿಸಿದ ಭಾರತ; ಸರಣಿ ಗೆದ್ದ ಸಂಭ್ರಮ

Follow Us

ಕಟಕ್: ವೆಸ್ಟ್ ಇಂಡೀಸ್ ಜತೆಗಿನ ಅಂತಿಮ ಏಕದಿನ ಪಂದ್ಯವನ್ನು ಭಾರತ 4 ವಿಕೆಟ್ ಗಳಿಂದ ಗೆದ್ದು ಸರಣಿಯನ್ನು ತನ್ನದಾಗಿಸಿಕೊಂಡು ಸಂಭ್ರಮಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ್ದ ವೆಸ್ಟ್ ಇಂಡೀಸ್ ನಿಗದಿತ 50 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 315 ರನ್ ಗಳಿಸಿತ್ತು. ರವೀಂದ್ರ ಜಡೇಜಾ ಪಂದ್ಯವನ್ನು ಭಾರತದ ಕಡೆಗೆ ವಾಲುವಂತೆ ಮಾಡಿದರು.
ಆರಂಭಿಕರಾದ ರೋಹಿತ್ ಶರ್ಮಾ 63 ಮತ್ತು ಕೆಎಲ್ ರಾಹುಲ್ 77 ರನ್ ಸಿಡಿಸಿ ಉತ್ತಮ ಅಡಿಪಾಯ ಹಾಕಿಕೊಟ್ಟಿದ್ದರು. ನಾಯಕ ಕೊಹ್ಲಿ 85 ರನ್ ಸಿಡಿಸಿ ಔಟಾದರು. ನಂತರ ರಿಷಬ್ ಪಂತ್, ಶ್ರೇಯಸ್ ಅಯ್ಯರ್ ಮತ್ತು ಕೇದಾರ್ ಜಾಧವ್ ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸಿದಾಗ ಭಾರತ ಸಂಕಷ್ಟಕ್ಕೆ ಸಿಲುಕಿತು.
ಈ ಹಂತದಲ್ಲಿ ಜತೆಯಾದ ರವೀಂದ್ರ ಜಡೇಜಾ ಅದ್ಭುತ ಆಟವಾಡಿ 31 ಎಸೆತಗಳಲ್ಲಿ 39 ರನ್ ಗಳಿಸಿ ಕೊನೆಯವರೆಗೂ ಔಟಾಗದೇ ಉಳಿದರು. ಶ್ರಾದ್ಧೂಲ್ ಠಾಕೂರ್ 17 ರನ್ ಗಳಿಸಿ ಕೊನೆಯ ರೋಚಕ ಕ್ಷಣಗಳಲ್ಲಿ ಜಡೇಜಾಗೆ ಉತ್ತಮ ಸಾಥ್ ನೀಡಿದರು. ಶ್ರಾದ್ಧೂಲ್ ಕೊನೆಯ ಹಂತದಲ್ಲಿ ಹೊಡೆದ ಒಂದು ಸಿಕ್ಸರ್ ನಿಂದಾಗಿ ಭಾರತಕ್ಕೆ ಬಾಲ್ ಮತ್ತು ಗೆಲುವಿನ ರನ್ ಅಂತರ ಕಡಿಮೆಯಾಯಿತು. ಇದರಿಂದಾಗಿ 48.4 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು ಭಾರತ 316 ರನ್ ಗಳಿಸಿ ಗೆಲುವಿನ ಕೇಕೆ ಹಾಕಿತು.

ಮತ್ತಷ್ಟು ಸುದ್ದಿಗಳು

vertical

Latest News

ನೀವು ಭಯಗೊಂಡಾಗ ದೇಹದಲ್ಲಿ ಏನಾಗುತ್ತದೆ ಗೊತ್ತಾ?

ಭಯವು ಸಾಮಾನ್ಯ ಭಾವನೆಯಾಗಿದೆ. ಪ್ರತಿಯೊಬ್ಬರೂ ಒಂದಲ್ಲ ಒಂದು ಹಂತದಲ್ಲಿ ಹೆದರುತ್ತಾರೆ. ಆದರೆ ಕೆಲವರು ಸಣ್ಣ ವಿಷಯಗಳಿಗೂ ತುಂಬಾ ಹೆದರುತ್ತಾರೆ. ಅವರು ಯಾಕೆ ಹೆದರುತ್ತಾರೆ ಎಂದು ಅವರಿಗೆ ತಿಳಿದಿಲ್ಲ. ಕೆಲವರು ಹಾರರ್ ಸಿನಿಮಾಗಳನ್ನು...

ಹೂವು ಬಿಡಿಸಲು ಹೋಗಿದ್ದಾಗ ವಿದ್ಯುತ್ ತಂತಿ ತುಳಿದು ಮಹಿಳೆ ಸಾವು

newsics.com ದಾವಣಗೆರೆ: ಪಂಪ್​ಸೆಟ್​​ಗೆ ಅಳವಡಿಸಿದ್ದ ವಿದ್ಯುತ್ ತಂತಿ ತುಳಿದು ಮಹಿಳೆ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ  ಬಸವರಾಜಪುರದಲ್ಲಿ ನಡೆದಿದೆ. ಅಲಿಬಾಯಿ(62) ಮೃತ ರ್ದುದೈವಿ. ಹೂವು ಬಿಡಿಸಲು ಹೋಗಿದ್ದಾಗ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಬಸವಪಟ್ಟಣ...

ಜೈ ಶ್ರೀರಾಮ್‌ ಹೇಳುವಂತೆ ಗಡ್ಡಕ್ಕೆ ಬೆಂಕಿ ಹಚ್ಚಿ ವೃದ್ಧನ ಮೇಲೆ ಹಲ್ಲೆ

newsics.com ಕೊಪ್ಪಳ :  65 ವರ್ಷದ ಅಂಧ ಮುಸ್ಲಿಂ ವೃದ್ಧನಿಗೆ ಇಬ್ಬರು ಅನಾಮಿಕ ವ್ಯಕ್ತಿಗಳು ಗಂಗಾವತಿ ಟೌನ್‌ನಲ್ಲಿ ಕಿರುಕುಳ ನೀಡಿದ ಘಟನೆ ನಡೆದಿದೆ. ಗಂಗಾವತಿಯಲ್ಲಿ ಒಂದು ಕಪ್‌ ಚಹಾ ಕುಡಿದು ಆಟೋರಿಕ್ಷಾಕ್ಕೆ ಕಾಯುತ್ತಿರುವಾಗ ಬೈಕ್‌ನಲ್ಲಿ ಇಬ್ಬರು...
- Advertisement -
error: Content is protected !!