Wednesday, September 27, 2023

ದೆಹಲಿ ಚುನಾವಣೆ; ನಾಯಕನ ಕೊರತೆ ಭಾರಿಯಾಯ್ತೆ ಬಿಜೆಪಿಗೆ?

Follow Us

ನವದೆಹಲಿ: ನಿರೀಕ್ಷೆಯಂತೆ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಆಮ್ ಆದ್ಮಿ ಪಕ್ಷ ಜಯಭೇರಿ ಬಾರಿಸಿದೆ. ದೆಹಲಿಯ ಮೇಲೆ ಹತೋಟಿ ಸಾಧಿಸುವ ಬಿಜೆಪಿಯ ಮಹಾದಾಸೆಗೆ ಎಳ್ಳು ನೀರು ಬಿಟ್ಟಂತಾಗಿದೆ.

ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸದೆ ರಾಷ್ಟ್ರ ರಾಜಧಾನಿಯ ಮೇಲೆ ಹತೋಟಿ ಸಾಧಿಸಲು ಮುಂದಾದ ಬಿಜೆಪಿ ಮೊದಲ ಹಂತದಲ್ಲಿ ಎಡವಿತು. ಪ್ರಬಲ ನಾಯಕತ್ವದ ಕೊರತೆ ಪಕ್ಷಕ್ಕೆ ಮುಳುವಾಗಿ ಪರಿಣಮಿಸಿತು. ಜೊತೆಗೆ, ದೆಹಲಿ ಅಭಿವೃದ್ಧಿಯ ಚಕಾರವೆತ್ತದೆ ಕೇವಲ ಸಂವಿಧಾನದ 370 ವಿಧಿ ರದ್ದತೆ,  ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ತ್ರಿವಳಿ ತಲಾಖ್ ನಂತಹ  ಯೋಜನೆಗಳಿಗೆ ಪ್ರಚಾರವನ್ನು ಸೀಮಿತಗೊಳಿಸಿದ್ದು, ಬಿಜೆಪಿಗೆ ಹೀನಾಯ ಸೋಲು ಅನುಭವಿಸುವಂತೆ ಮಾಡಿತು ಎಂದು ರಾಜಕೀಯ ತಜ್ಞರು ವಿಶ್ಲೇಷಿಸಿದ್ದಾರೆ.

ದೆಹಲಿಯ ಜನತೆ ಉತ್ತಮ ಶಿಕ್ಷಣ ಮತ್ತು ವೈದ್ಯಕೀಯ  ಸೌಲಭ್ಯಗಳು, ಉಚಿತ ವಿದ್ಯುತ್ ಮತ್ತು ನೀರು ಪೂರೈಕೆಗೆ ಮತ ಚಲಾಯಿಸಿದ್ದಾರೆ.  ದೆಹಲಿಯಲ್ಲಿ ಗೆಲುವು ಸಾಧಿಸಲೇಬೇಕು ಎಂದು ಹಠ ತೊಟ್ಟಿದ್ದ ಶಾಹೀನ್ ಬಾಗ್ ನಲ್ಲಿ ನಡೆಯುತ್ತಿರುವ ಸಿಎಎ ವಿರೋಧದ ಪ್ರತಿಭಟನೆಯನ್ನು ಭಾವನಾತ್ಮಕ ವಿಷಯವನ್ನಾಗಿ ಬಳಸಿಕೊಳ್ಳಲು ಬಿಜೆಪಿ ವಿಫಲವಾಗಿದೆ. ಕಾಂಗ್ರೆಸ್ ಪಕ್ಷ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವಧಿಯ ಸಾಧನೆಯನ್ನೇ ಮುಂದಿಟ್ಟು ಪ್ರಚಾರ ನಡೆಸಿತಾದರೂ, ಅದು ಜನತೆಯನ್ನು ತಲುಪಲಿಲ್ಲ.

ಈಗ ಬಿಜೆಪಿ ಮತ್ತು ಕಾಂಗ್ರೆಸ್ ತಮ್ಮ ಚುನಾವಣಾ ಪ್ರಚಾರದ ತಂತ್ರಗಾರಿಕೆಯನ್ನು ಬದಲಾಯಿಸಿಕೊಳ್ಳುವು ತುರ್ತು ಅನಿವಾರ್ಯತೆ ಎದುರಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಸ್ನೇಹಿತೆ ಜತೆ ದೈಹಿಕ ಸಂಪರ್ಕಕ್ಕೆ ಪ್ರೇಯಸಿ ಒತ್ತಾಯ: ನಿರಾಕರಿಸಿದ ಪ್ರಿಯಕರನ ಮರ್ಮಾಂಗವನ್ನೇ ಕಚ್ಚಿದ ಗೆಳತಿ!

newsics.com ಕಾಸ್ಪುರ: ತನ್ನ ಸ್ನೇಹಿತೆಯೊಂದಿಗೆ ದೈಹಿಕ ಸಂಪರ್ಕ ಸಾಧಿಸಲಿಲ್ಲ ಎಂದು ಕೋಪಗೊಂಡ ಗೆಳತಿ, ಪ್ರಿಯಕರನ ಗುಪ್ತಾಂಗಕ್ಕೆ ಕಚ್ಚಿದ್ದಾಳೆ. ಇಂಥದ್ದೊಂದು ವಿಚಿತ್ರ ಮತ್ತು ಆಘಾತಕಾರಿ ಘಟನೆ ನಡೆದಿದ್ದು ಉತ್ತರಪ್ರದೇಶದಲ್ಲಿ. ಇಲ್ಲಿನ...

ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಶಾನವಾಜ್ ಹುಸೇನ್’ಗೆ ಹೃದಯಾಘಾತ!

newsics.com ಮುಂಬೈ: ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಶಾನವಾಜ್ ಹುಸೇನ್'ಗೆ ಹೃದಯ ಸ್ತಂಭನವಾಗಿದ್ದು, ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಂಜಿಯೋಪ್ಲ್ಯಾಸ್ಟಿ ಮಾಡಿಸಲಾಗಿದೆ. ಶಾನವಾಜ್ ಹುಸೇನ್ ಹೃದಯಾಘಾತದಿಂದ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಂಜಿಯೋಪ್ಲಾಸ್ಟಿ...

ಮನೆ ನೌಕರರಿಗೆ ಕಿರುಕುಳ ನೀಡುತ್ತಿದ್ದ ಸೇನಾ ಮೇಜರ್, ಆತನ ಪತ್ನಿ ಬಂಧನ!

newsics.com ಅಸ್ಸಾಂ: ಮನೆ ನೌಕರರಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಸೇನಾ ಮೇಜರ್ ಹಾಗೂ ಆತನ ಪತ್ನಿಯನ್ನು ಅಸ್ಸಾಂನಲ್ಲಿ ಬಂಧಿಸಲಾಗಿದೆ. ಅಸ್ಸಾಂನ ದಿಮಾ ಹಸಾವೋ ಜಿಲ್ಲೆಯಲ್ಲಿ ಸೇನಾ ಮೇಜರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು...
- Advertisement -
error: Content is protected !!