Wednesday, May 31, 2023

ಕೇಂದ್ರದ ಮಾಜಿ ಸಚಿವ ರಘುವಂಶ್‌ ಪ್ರಸಾದ್ ಸಿಂಗ್‌ ಇನ್ನಿಲ್ಲ

Follow Us

newsics.com
ನವದೆಹಲಿ: ಕೇಂದ್ರದ ಮಾಜಿ ಸಚಿವ, ಬಿಹಾರ ನಾಯಕ ರಘುವಂಶ್‌ ಪ್ರಸಾದ್ ಸಿಂಗ್‌ (74) ಅವರು ಭಾನುವಾರ ಬೆಳಗ್ಗೆ ನಿಧನರಾದರು.
ಕೊರೋನಾ ಸೋಂಕಿನ ಬಳಿಕ ಕಾಣಿಸಿಕೊಂಡಿದ್ದ ಅನಾರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದ ಅವರು ದೆಹಲಿಯ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜೂನ್‌ನಲ್ಲಿ ಕೋವಿಡ್‌ ಪಾಸಿಟಿವ್‌ ಆಗಿದ್ದ ಬಿಹಾರ ಮುಖಂಡ ರಘುವಂಶ್ ಪ್ರಸಾದ್‌ ಅವರು ಏಮ್ಸ್‌ನಲ್ಲಿ ಚಿಕಿತ್ಸೆ ಪಡೆದಿದ್ದರು. ಕೋವಿಡ್‌ ಗುಣಮುಖರಾದ ನಂತರ ಮತ್ತೆ ಕಾಣಿಸಿಕೊಂಡಿದ್ದ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ ಕಳೆದ ಶುಕ್ರವಾರ ವೆಂಟಿಲೇಟರ್‌ ಸಹಕಾರದಲ್ಲಿ ಚಿಕಿತ್ಸೆ ಮುಂದುವರಿಸಲಾಗಿತ್ತು.
ನರೇಗಾ ಯೋಜನೆ ಹಿಂದಿನ ಶಕ್ತಿ ಎಂದೇ ಅವರನ್ನು ಕಾಣಲಾಗುವ ರಘುವಂಶ್‌ ಪ್ರಸಾದ್ ಲೋಕಸಭೆಗೆ ದಾಖಲೆಯ ಐದು ಬಾರಿ ಆಯ್ಕೆಯಾಗಿದ್ದರು. ವೈಶಾಲಿ ಕ್ಷೇತ್ರದಲ್ಲಿ ಕಳೆದ ಎರಡೂ ಚುನಾವಣೆಗಳಲ್ಲಿ (2014 ಮತ್ತು 2019) ಅವರು ಸೋಲು ಕಂಡಿದ್ದರು.
ರಘುವಂಶ್‌ ಪ್ರಸಾದ್ ಅವರು ಕಳೆದ ಗುರುವಾರ (ಸೆ.10) ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ಪಕ್ಷ ತೊರೆದಿದ್ದರು. ಈ ಸಂಬಂಧ ಆರ್‌ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದರು.

ದೇಶದಲ್ಲಿ ಒಂದೇ ದಿನ 94, 372 ಮಂದಿಗೆ ಕೊರೋನಾ ಸೋಂಕು, 1114 ಬಲಿ

ನೇಪಾಳದಲ್ಲಿ ಭಾರೀ ಭೂ ಕುಸಿತ: 12 ಮಂದಿ ನಾಪತ್ತೆ

ಆಕ್ಸ್ ಫರ್ಡ್ ಕೊರೋನಾ ಲಸಿಕೆ ಪ್ರಯೋಗ ಪುನರಾರಂಭ

ಮತ್ತಷ್ಟು ಸುದ್ದಿಗಳು

vertical

Latest News

Weekend With Ramesh; ಸಾಧಕರ ಕುರ್ಚಿಯಲ್ಲಿ ಡಿಕೆ ಶಿವಕುಮಾರ್!

newsics.com ಬೆಂಗಳೂರು: ಖಾಸಗಿವಾಹಿನಿಯಲ್ಲಿ ವೀಕೆಂಡ್ ವಿತ್ ರಮೇಶ್ ಐದನೇ ಸೀಸನ್​ನ ಈ ವಾರದ ಅತಿಥಿಯಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಗಮಿಸಲಿದ್ದಾರೆ ಎನ್ನುವ ಗಾಳಿ ಸುದ್ದಿಯೊಂದು ಹಬ್ಬಿದೆ. ಭಾನುವಾರದ ಎಪಿಸೋಡ್...

ತರಬೇತಿ ವಿಮಾನ ತುರ್ತು ಭೂಸ್ಪರ್ಶ; ತಪ್ಪಿದ ಭಾರೀ ಅನಾಹುತ

newsics.com ಬೆಳಗಾವಿ: ತರಬೇತಿ ವಿಮಾನವೊಂದು ತಾಂತ್ರಿಕ ತೊಂದರೆಯಿಂದ  ತುರ್ತು ಭೂಸ್ಪರ್ಶ ಆಗಿದೆ. ಈ ಘಟನೆ ಬೆಳಗಾವಿ ತಾಲೂಕಿನ ಹೊನ್ನಿಹಾಳ ಹೊರವಲಯದಲ್ಲಿ ನಡೆದಿದೆ. ರೆಡ್‌ಬರ್ಡ್  ಸಂಸ್ಥೆಗೆ ಸೇರಿದ VT- RBF ತರಬೇತಿ ವಿಮಾನ ಇದಾಗಿದ್ದು, ಘಟನೆ ನಡೆದ...

ಆಪರೇಷನ್ ಪಠ್ಯ ಪುಸ್ತಕ; ಪಠ್ಯಗಳ ಪರಿಷ್ಕರಿಸ್ತೇವೆಂದ ಶಿಕ್ಷಣ ಸಚಿವ ಮಧು ಬಂಗಾರಪ್ಪ

newsics.com ಬೆಂಗಳೂರು:  ಪಠ್ಯ ಪುಸ್ತಕ  ಪರಿಷ್ಕರಣೆ ನಾವು ಮಾಡ್ತೀವಿ. ಪ್ರಣಾಳಿಕೆಯಲ್ಲಿ ಕೊಟ್ಟ ಮಾತಿನಂತೆ ಪರಿಷ್ಕರಣೆ ಮಾಡ್ತೀವಿ. ಮಕ್ಕಳ ಮನಸ್ಸಿನಲ್ಲಿ ಕಲ್ಮಶ ತುಂಬುವ ಪಠ್ಯ ಕೈ ಬಿಡ್ತೀವಿ. ಈ ಬಗ್ಗೆ ಸಿಎಂ, ಡಿಸಿಎಂ ಜೊತೆ ಚರ್ಚಿಸಿ...
- Advertisement -
error: Content is protected !!