newsics.com
ನವದೆಹಲಿ: ಕೇಂದ್ರದ ಮಾಜಿ ಸಚಿವ, ಬಿಹಾರ ನಾಯಕ ರಘುವಂಶ್ ಪ್ರಸಾದ್ ಸಿಂಗ್ (74) ಅವರು ಭಾನುವಾರ ಬೆಳಗ್ಗೆ ನಿಧನರಾದರು.
ಕೊರೋನಾ ಸೋಂಕಿನ ಬಳಿಕ ಕಾಣಿಸಿಕೊಂಡಿದ್ದ ಅನಾರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದ ಅವರು ದೆಹಲಿಯ ಏಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜೂನ್ನಲ್ಲಿ ಕೋವಿಡ್ ಪಾಸಿಟಿವ್ ಆಗಿದ್ದ ಬಿಹಾರ ಮುಖಂಡ ರಘುವಂಶ್ ಪ್ರಸಾದ್ ಅವರು ಏಮ್ಸ್ನಲ್ಲಿ ಚಿಕಿತ್ಸೆ ಪಡೆದಿದ್ದರು. ಕೋವಿಡ್ ಗುಣಮುಖರಾದ ನಂತರ ಮತ್ತೆ ಕಾಣಿಸಿಕೊಂಡಿದ್ದ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ ಕಳೆದ ಶುಕ್ರವಾರ ವೆಂಟಿಲೇಟರ್ ಸಹಕಾರದಲ್ಲಿ ಚಿಕಿತ್ಸೆ ಮುಂದುವರಿಸಲಾಗಿತ್ತು.
ನರೇಗಾ ಯೋಜನೆ ಹಿಂದಿನ ಶಕ್ತಿ ಎಂದೇ ಅವರನ್ನು ಕಾಣಲಾಗುವ ರಘುವಂಶ್ ಪ್ರಸಾದ್ ಲೋಕಸಭೆಗೆ ದಾಖಲೆಯ ಐದು ಬಾರಿ ಆಯ್ಕೆಯಾಗಿದ್ದರು. ವೈಶಾಲಿ ಕ್ಷೇತ್ರದಲ್ಲಿ ಕಳೆದ ಎರಡೂ ಚುನಾವಣೆಗಳಲ್ಲಿ (2014 ಮತ್ತು 2019) ಅವರು ಸೋಲು ಕಂಡಿದ್ದರು.
ರಘುವಂಶ್ ಪ್ರಸಾದ್ ಅವರು ಕಳೆದ ಗುರುವಾರ (ಸೆ.10) ರಾಷ್ಟ್ರೀಯ ಜನತಾದಳ (ಆರ್ಜೆಡಿ) ಪಕ್ಷ ತೊರೆದಿದ್ದರು. ಈ ಸಂಬಂಧ ಆರ್ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದರು.
ದೇಶದಲ್ಲಿ ಒಂದೇ ದಿನ 94, 372 ಮಂದಿಗೆ ಕೊರೋನಾ ಸೋಂಕು, 1114 ಬಲಿ
ನೇಪಾಳದಲ್ಲಿ ಭಾರೀ ಭೂ ಕುಸಿತ: 12 ಮಂದಿ ನಾಪತ್ತೆ
ಆಕ್ಸ್ ಫರ್ಡ್ ಕೊರೋನಾ ಲಸಿಕೆ ಪ್ರಯೋಗ ಪುನರಾರಂಭ