ಕಾಸರಗೋಡು: ಕೇರಳದಲ್ಲಿ ಇಂದು ಹೊಸದಾಗಿ ಏಳು ಕೊರೋನಾ ಪ್ರಕರಣ ವರದಿಯಾಗಿದೆ. ಕಾಸರಗೋಡಿನಲ್ಲಿ ನಾಲ್ಕು ಮಂದಿಯಲ್ಲಿ ಕೊರೋನಾ ಸೋಂಕು ಕಂಡು ಬಂದಿದೆ. ಇವರೆಲ್ಲರೂ ಮಹಾರಾಷ್ಟ್ರದಿಂದ ಕಾಸರಗೋಡಿಗೆ ಬಂದವರಾಗಿದ್ದಾರೆ ಎಂದು ವರದಿಯಾಗಿದೆ. ಕಾಸರಗೋಡು ಜಿಲ್ಲೆ ಕೊರೋನಾ ಮುಕ್ತ ಜಿಲ್ಲೆಯಾಗಲಿದೆ ಎಂಬ ಶುಭ ಸುದ್ದಿಯ ಮಧ್ಯೆ ಈ ಆತಂಕಕಾರಿ ಬೆಳವಣಿಗೆ ನಡೆದಿದೆ.ಕಾಸರಗೋಡಿಗೆ ಹೆಚ್ಚಿನ ಸಂಖ್ಯೆಯಲ್ಲಿ ಹೊರ ರಾಜ್ಯಗಳಿಂದ ಜನರು ಬರುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಕೊರೋನಾ ವ್ಯಾಪಕವಾಗಿ ಹರಡುವ ಭೀತಿ ಕೂಡ ಎದುರಾಗಿದೆ. ಇದೇ ವೇಳೆ, ಕೇರಳಕ್ಕೆ ಪ್ರವೇಶಿಸಬೇಕಾದರೆ ರಾಜ್ಯ ಸರ್ಕಾರ ನೀಡುವ ಪಾಸ್ ಕಡ್ಡಾಯ ಎಂದು ಆರೋಗ್ಯ ಇಲಾಖೆ ಹೇಳಿದೆ. ಪಾಸ್ ಇಲ್ಲದವರಿಗೆ ಕೇರಳ ಪ್ರವೇಶಿಸಲು ಗಡಿಯಲ್ಲಿ ಅನುಮತಿ ನೀಡುವುದಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಕೇರಳ- ಕರ್ನಾಟಕ ಗಡಿ ಪ್ರದೇಶವಾಗಿರುವ ತಲಪಾಡಿಯಲ್ಲಿ 15ಕ್ಕೂ ಹೆಚ್ಚು ಮಂದಿ ಕೇರಳ ಪ್ರವೇಶಿಸಲು ಸಾಧ್ಯವಾಗದೆ ಅಲ್ಲಿ ಸಿಲುಕಿಕೊಂಡಿದ್ದಾರೆ. ಇದೇ ವೇಳೆ ಮಂಗಳೂರಿನಲ್ಲಿ ಕೆಲಸ ಮಾಡುವ ಕಾಸರಗೋಡಿನ ಹಲವು ಮಂದಿ ಅಲ್ಲಿಗೆ ತೆರಳಲು ಸಾಧ್ಯವಾಗದೆ ಕೆಲಸ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ಮಂಗಳೂರು ಮತ್ತು ಕಾಸರಗೋಡು ಮಧ್ಯೆ ಸಂಚಾರ ನಿರ್ಬಂಧಿಸಲಾಗಿದ್ದು, ಕಾಸರಗೋಡು, ಕುಂಬಳೆ , ಉಪ್ಪಳ ಸೇರಿದಂತೆ ಹಲವು ಪ್ರದೇಶಗಳ ನೌಕರರು ಮಂಗಳೂರಿಗೆ ತೆರಳಲು ಸಾಧ್ಯವಾಗದೆ ಸಂಕಷ್ಟ ಎದುರಿಸುತ್ತಿದ್ದಾರೆ
ಮತ್ತಷ್ಟು ಸುದ್ದಿಗಳು
ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ
newsics.comನವದೆಹಲಿ: ಕುರಾನ್ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...
ಮಹಾರಾಷ್ಟ್ರದಲ್ಲಿ 51,751 ಮಂದಿಗೆ ಕೊರೋನಾ ಸೋಂಕು 258 ಜನ ಸಾವು
newsics.comಮುಂಬೈ: ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಯಲ್ಲಿ 51,751 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 258 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.ಪ್ರಯೋಗಾಲಯಕ್ಕೆ ಬಂದಿದ್ದ 2,33,22,393 ಸ್ಯಾಂಪಲ್ಗಳ ಪೈಕಿ 34,58,996 ಮಂದಿಗೆ ಕೊರೋನಾ...
ಕುಂಭ ಮೇಳದ ಬಗ್ಗೆ ವಿವಾದಾತ್ಮಕ ಟ್ವೀಟ್ ಮಾಡಿದ ರಾಂ ಗೋಪಾಲ್ ವರ್ಮಾ
newsics.com
ಹೈದರಾಬಾದ್: ಖ್ಯಾತ ಚಿತ್ರ ನಿರ್ದೇಶಕ ರಾಂ ಗೋಪಾಲ್ ವರ್ಮಾ ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭ ಮೇಳದ ಕುರಿತು ವಿವಾದಾತ್ಮಕ ಟ್ವೀಟ್ ಮಾಡಿದ್ದಾರೆ.
ಭಕ್ತರಿಂದ ತುಂಬಿ ತುಳುಕುತ್ತಿರುವ ಹರಿದ್ವಾರದ ಫೋಟೋವನ್ನು ಅವರು ಶೇರ್ ಮಾಡಿದ್ದಾರೆ. 'ಗುಡ್ ಬೈ...
24 ಗಂಟೆಗಳ ಕಾಲ ಚುನಾವಣಾ ಪ್ರಚಾರ ಮಾಡದಂತೆ ಮಮತಾಗೆ ನಿರ್ಬಂಧ
newsics.com
ನವದೆಹಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಚುನಾವಣಾ ಆಯೋಗ ಒಂದು ದಿನದ ನಿರ್ಬಂಧ ವಿಧಿಸಿದೆ. 24 ಗಂಟೆಗಳ ಕಾಲ ಯಾವುದೇ ಚುನಾವಣೆ ಪ್ರಚಾರ ಮಾಡದಂತೆ ನಿರ್ಬಂಧ ಹೇರಲಾಗಿದೆ.
ಮಮತಾ ಅವರು ಚುನಾವಣಾ ನೀತಿ...
ವಿಚಾರಣೆಗೆ ಹಾಜರಾಗಲು ಅನಿಲ್ ದೇಶ್ ಮುಖ್ ಗೆ ಸಿಬಿಐ ಸೂಚನೆ
newsics.com
ಮುಂಬೈ: ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಆದೇಶ ನೀಡಿದೆ.
ಬುಧವಾರ ವಿಚಾರಣೆ ಎದುರಿಸುವಂತೆ ಸಿಬಿಐ ಸೂಚಿಸಿದೆ.
ಪ್ರತಿ ತಿಂಗಳು ನೂರು ಕೋಟಿ ರೂಪಾಯಿ...
ಎರಡು ತಾಸು ಕಡಿಮೆ ವಿಮಾನಯಾನದಲ್ಲಿ ಊಟ ಪೂರೈಕೆ ಇಲ್ಲ
newsics.com
ನವದೆಹಲಿ: ಮಾರಕ ಕೊರೋನಾ ವಿಮಾನದಲ್ಲಿ ಊಟದ ಮೇಲೆ ಕರಿ ನೆರಳು ಬೀರಿದೆ. ಎರಡು ತಾಸಿಗಿಂತ ಕಡಿಮೆ ಯಾನದ ವೇಳೆ ಊಟ ಪೂರೈಕೆ ಸ್ಥಗಿತ ಗೊಳಿಸುವಂತೆ ನಾಗರಿಕ ವಿಮಾನ ಯಾನ ಇಲಾಖೆ ಸೂಚನೆ ನೀಡಿದೆ.
ಇದಕ್ಕಿಂತ...
ಕಣಿವೆಗೆ ಬಿದ್ದ ಬಸ್, ಐವರ ಸಾವು
newsics.com
ಶ್ರೀನಗರ: ಜಮ್ಮು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಬಸ್ ವೊಂದು ಕಂದಕಕ್ಕೆ ಬಿದ್ದ ಪರಿಣಾಮ ಐವರು ಮೃತಪಟ್ಟಿದ್ದಾರೆ. ದೋಡಾದಿಂದ ಕಹಾರಕ್ಕೆ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.
ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದಾರೆ. ರಕ್ಷಣಾ...
ಸ್ಪುಟ್ನಿಕ್ ಲಸಿಕೆ ತುರ್ತು ಬಳಕೆಗೆ ಪರಿಣಿತರ ಸಮಿತಿ ಅನುಮೋದನೆ
newsics.com
ನವದೆಹಲಿ: ಮಾರಕ ಕೊರೋನಾ ನಿಯಂತ್ರಿಸುವ ಸಂಬಂಧ ರಷ್ಯಾ ಅಭಿವೃದ್ಧಿಪಡಿಸಿರುವ ಸ್ಪುಟ್ನಿಕ್ ವಿ ಲಸಿಕೆಯ ತುರ್ತು ಬಳಕೆಗೆ ಪರಿಣಿತರ ಸಮಿತಿ ಅನುಮೋದನೆ ನೀಡಿದೆ. ಇದು ಮಾರಕ ಕೊರೋನಾ ತಡೆಗೆ ಶೇಕಡ 90ರಷ್ಟು ಪರಿಣಾಮಕಾರಿಯಾಗಿದೆ ಎಂದು...
Latest News
ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ
newsics.comನವದೆಹಲಿ: ಕುರಾನ್ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50...
Home
ದೋಣಿ ಮುಳುಗಿ 34 ವಲಸಿಗರ ಸಾವು
NEWSICS -
newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
Home
ಮಹಾರಾಷ್ಟ್ರದಲ್ಲಿ 51,751 ಮಂದಿಗೆ ಕೊರೋನಾ ಸೋಂಕು 258 ಜನ ಸಾವು
NEWSICS -
newsics.comಮುಂಬೈ: ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಯಲ್ಲಿ 51,751 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 258 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.ಪ್ರಯೋಗಾಲಯಕ್ಕೆ ಬಂದಿದ್ದ 2,33,22,393 ಸ್ಯಾಂಪಲ್ಗಳ ಪೈಕಿ 34,58,996 ಮಂದಿಗೆ ಕೊರೋನಾ...