Tuesday, March 28, 2023

ಐಪಿಎಲ್: ಮೊದಲ ಪಂದ್ಯ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್

Follow Us

newsics.com
ಅಬುದಾಬಿ: ಐಪಿಎಲ್ 13ನೇ ಅವೃತ್ತಿಯ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 5 ವಿಕೆಟ್ ಳಿಂದ ಭರ್ಜರಿ ಜಯ ಗಳಿಸಿದೆ.
ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಚೆನ್ನೈ ನಾಯಕ ಧೋನಿ ನಿರ್ಧಾರ ಫಲ ಕೊಟ್ಟಿದೆ. ಟಾಸ್‌ ಸೋತು ಮೊದಲು ಬ್ಯಾಟಿಂಗಿಗೆ ಇಳಿಸಲ್ಪಟ್ಟ ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ 9 ವಿಕೆಟಿಗೆ 162 ರನ್‌ ಗಳಿಸಿ ಚೆನ್ನೈ ಸೂಪರ್ ಕಿಂಗ್ಸ್ ಗೆ 163 ರನ್ ಗಳ ಬೃಹತ್ ಸವಾಲೊಡ್ಡಿತ್ತು. ಈ ಸವಾಲಿನ ಮೊತ್ತ ಬೆನ್ನತ್ತಿದ್ದ ಧೋನಿ ಪಡೆ ಡು ಪ್ಲೆಸಿಸ್ ಹಾಗೂ ಅಂಬಾಟಿ ರಾಯಡು ಅವರ ಅಮೋಘ 115 ರನ್ ಗಳ ಜತೆಯಾಟದೊಂದಿಗೆ 19.2 ಓವರ್’ಗಳಲ್ಲಿ ಗೆಲುವು ಸಾಧಿಸಿತು.
ಮಧ್ಯಮ ಕ್ರಮಾಂಕದ ಆಟಗಾರ ಅಂಬಟಿ ರಾಯಡು ಕೇವಲ 48 ಎಸೆತಗಳಲ್ಲಿ 71 ರನ್ ಬಾರಿಸಿ ಮುಂಬೈ ನೀಡಿದ 163 ರನ್ ಗುರಿ ತಲುಪಲು ಕಾರಣರಾದರು.ಟಾಸ್ ಗೆದ್ದು ಮೊದಲು ಸೂಪರ್ ಕಿಂಗ್ಸ್ ತಂಡ ಫೀಲ್ಡಿಂಗ್ ಅಯ್ಕೆ ಮಾಡಿಕೊಂಡಿತ್ತು. ಮೊದಲು ಬ್ಯಾಟ್ ಮಾಡಿದ ಮುಂಬೈ ತಂಡಕ್ಕೆ ರೋಹಿತ್-ಕಾಕ್ ಆರಂಭಿಕ ಜೋಡಿಯು ಪವರ್ ಪ್ಲೇಯ 4.4 ಓವರ್ ಗಳಲ್ಲಿ ಮೊದಲ ವಿಕೆಟ್ ಗೆ 44 ರನ್ ಪೇರಿಸಿ ಉತ್ತಮ ಆರಂಭ ನೀಡಿದ್ದರು.
ಆದರೆ ಮಧ್ಯಮ ಕ್ರಮಾಂಕದ ಆಟಗಾರರು ಕೈಕೊಡುವುದರೊಂದಿಗೆ ಮುಂಬೈ ತಂಡ ಅಂತಿಮವಾಗಿ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 162 ರನ್ ಪೇರಿಸಿ ಸಾಧಾರಣ ಮೊತ್ತಕ್ಕೆ ತೃಪ್ತಿಪಡಬೇಕಾಯಿತು. ಈ ಮೊತ್ತ ಬೆನ್ನತ್ತಿದ ಚೆನ್ನೈ ತಂಡ ಮೊದಲ ಎರಡು ಓವರ್‌ಗಳಲ್ಲಿ ತನ್ನ ಆರಂಭಿಕರಾದ ಶೇನ್ ವಾಟ್ಸನ್ ಮತ್ತು ಮುರಳಿ ವಿಜಯ್ ಅವರನ್ನು 6 ರನ್ನುಗಳಿಗೆ ಕಳೆದುಕೊಂಡರೂ, ರಾಯಡು ಮತ್ತು ಪಾಫ್ ಡುಪ್ಲೆಸಿಸ್ ಬರೋಬ್ಬರಿ ಶತಕದ ಜತೆಯಾಟದ ಮೂಲಕ ಅಂತಿಮವಾಗಿ 5 ವಿಕೆಟ್ ಕಳೆದುಕೊಂಡು ಜಯ ಸಾಧಿಸಿತು.

ಮತ್ತಷ್ಟು ಸುದ್ದಿಗಳು

vertical

Latest News

ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್‌) ಬಡ್ಡಿ ದರ ಶೇ.8.15 ಕ್ಕೆ ಏರಿಕೆ

newscics.com ನವದೆಹಲಿ: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಭವಿಷ್ಯ ನಿಧಿಯ ಮೇಲಿನ ಬಡ್ಡಿ ದರವನ್ನುಬ ಹೆಚ್ಚಿಸಲು ತೀರ್ಮಾನಿಸಿದೆ....

ವಾಯುಮಾಲಿನ್ಯದಿಂದ 1,220 ಜನರು ಸಾವು

newscics.com ಮುಂಬೈ: ಮುಂಬೈನಲ್ಲಿ 2016-2021 ರ ನಡುವೆ 1,220 ಜನರು ವಾಯುಮಾಲಿನ್ಯದಿಂದ ಸಾವನ್ನಪ್ಪಿದ್ದಾರೆ. ಅಂಕಿಅಂಶಗಳ ಪ್ರಕಾರ, ಮುಂಬೈನಲ್ಲಿ 2016 ಮತ್ತು 2021 ರ ನಡುವೆ 1,220...

ಭಾರತದ ಮೊದಲ ಗೀರ್ ತದ್ರೂಪಿ ತಳಿ ಆಕಳ ಕರು ಜನನ

newsics.com ನವದೆಹಲಿ: ಭಾರತದ ಮೊದಲ ತದ್ರೂಪಿ ಗಿರ್ ತಳಿಯ ಆಕಳ ಕರು ಹರಿಯಾಣದ ಕರ್ನಾಲ್‌ನಲ್ಲಿರುವ ರಾಷ್ಟ್ರೀಯ ಡೈರಿ ಸಂಶೋಧನಾ ಸಂಸ್ಥೆ (NDRI) ಯಲ್ಲಿ ಜನ್ಮ ಪಡೆದಿದೆ.ಈ...
- Advertisement -
error: Content is protected !!