Monday, October 2, 2023

ಜೆಎನ್ ಯು ದಾಳಿಯಲ್ಲಿ ಉಪಕುಲಪತಿಯೇ ಮಾಸ್ಟರ್ ಮೈಂಡ್!

Follow Us

ನವದೆಹಲಿ: ದೆಹಲಿಯ ಜವಹರ್ ಲಾಲ್ ನೆಹರು ವಿವಿಯ ಆವರಣದಲ್ಲಿ ನಡೆದ ಹಿಂಸಾಚಾರದ ಹಿಂದೆ ಅದರ ಉಪಕುಲಪತಿಯ ಕೈವಾಡವಿದೆ ಎಂದು ಕಾಂಗ್ರೆಸ್ ಸತ್ಯಶೋಧನಾ ಸಮಿತಿ ಅನುಮಾನ ವ್ಯಕ್ತಪಡಿಸಿದೆ.
ಜ. 5ರಂದು ವಿವಿ ಆವರಣದಲ್ಲಿ ಮುಸುಕುಧಾರಿಗಳು ವಿದ್ಯಾರ್ಥಿಗಳ ಮೇಲೆ ನಡೆಸಿದ ದಾಳಿ ಕುರಿತು ತನಿಖೆ ಕೈಗೊಂಡ ಸಮಿತಿ, ಘಟನೆಯಲ್ಲಿ ದಾಳಿ ನಡೆಸಿರುವವರೊಂದಿಗೆ ಉಪಕುಲಪತಿ ಕೈಜೋಡಿಸಿರುವುದು ಕಂಡುಬರುತ್ತಿದೆ. ಅವರೇ ಈ ಘಟನೆಯ ಮಾಸ್ಟರ್ ಮೈಂಡ್ ಎಂದು ಸಮಿತಿಯ ವರದಿ ತಿಳಿಸಿದೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಅವರು ಘಟನೆ ಕುರಿತು ತನಿಖೆ ನಡೆಸಲು ಮಹಿಳಾ ಕಾಂಗ್ರಸ್ ಮುಖ್ಯಸ್ಥೆ ಸುಷ್ಮಿತಾ ದೇವ್, ಸಂಸದ ಮತ್ತು ಎನ್ ಎಸ್ ಯುಐ ಮಾಜಿ ಅಧ್ಯಕ್ಷೆ ಹಿಬಿ ಏಡನ್, ಸಂಸದ  ಸೈಯದ್ ನಾಸೀರ್ ಹುಸೇನ್ ಮತ್ತು ಮಾಜಿ ಎನ್ ಎಸ್ ಯುಐ ಅಧ್ಯಕ್ಷೆ ಅಮೃತಾ ಧವನ್  ಅವರನ್ನೊಳಗೊಂಡ ಸಮಿತಿ ರಚಿಸಿದ್ದರು.

ಮತ್ತಷ್ಟು ಸುದ್ದಿಗಳು

vertical

Latest News

ಜಿಪಿಎಸ್ ಮ್ಯಾಪ್ ಎಡವಟ್ಟು: ಕಾರು ನದಿಯಲ್ಲಿ ಮುಳುಗಿ ಇಬ್ಬರು ವೈದ್ಯರ ಸಾವು

newsics.com ತಿರುವನಂತಪುರಂ: ಜಿಪಿಎಸ್ ಮ್ಯಾಪ್ ತೋರಿಸಿದ ದಾರಿಯಲ್ಲಿ ಹೋದ ಕಾರೊಂದು ನದಿಯಲ್ಲಿ ಮುಳುಗಿ ಇಬ್ಬರು ವೈದ್ಯರು ಮೃತಪಟ್ಟ ಘಟನೆ ಕೇರಳದ ಎರ್ನಾಕುಲಂನಲ್ಲಿ ನಡೆದಿದೆ. ತಡರಾತ್ರಿ ಭಾರಿ ಮಳೆಯ ಕಾರಣ...

ವರದಿಗಾರ್ತಿ ಮೇಲೆ ರೇಗಿದ ಅಣ್ಣಾಮಲೈ: ಖಂಡನೆ

newsics.com ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮಹಿಳಾ ವರದಿಗಾರರೊಬ್ಬರ ಮೇಲೆ ಸಿಟ್ಟಾಗುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ. ವರದಿಗಾರ್ತಿ ಜೊತೆ ಅಣ್ಣಾಮಲೈ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ...

ರಸ್ತೆ ಅಪಘಾತ: ಮಗು ಸೇರಿ ಕನಿಷ್ಠ 10 ಮಂದಿ ಸಾವು

newsics.com ಮೆಕ್ಸಿಕೊ: ಟ್ರಕ್ ವೊಂದು ಅಪಘಾತಕ್ಕೆ ಒಳಗಾದ ಪರಿಣಾಮ 10 ಜನ ವಲಸಿಗರು ಸಾವನ್ನಪಿರುವ ಘಟನೆ ದಕ್ಷಿಣ ರಾಜ್ಯ ಚೈಪಾಸ್ನಲ್ಲಿ ನಡೆದಿದೆ. ಅಪಘಾತದಲ್ಲಿ 17 ಜನ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಮತ್ತು ಗಾಯಾಳುಗಳು...
- Advertisement -
error: Content is protected !!