Wednesday, September 27, 2023

ಮುಂಬೈ ವಿಮಾನ ನಿಲ್ದಾಣದಲ್ಲಿ ಕೃನಾಲ್ ಪಾಂಡ್ಯ ವಿಚಾರಣೆ

Follow Us

newsics.com
ಮುಂಬೈ: ಮುಂಬೈ ವಿಮಾನ ನಿಲ್ದಾಣದಲ್ಲಿ ಕೃನಾಲ್ ಅವರ ಲಗ್ಗೇಜ್ ಪರಿಶೀಲಿಸಿದ ಅಧಿಕಾರಿಗಳು ಅವರನ್ನು ಗುರುವಾರ ವಿಚಾರಣೆಗೊಳಪಡಿಸಿದ್ದಾರೆ.
ಆದಾಯ ಗುಪ್ತಚರ ಮಹಾನಿರ್ದೇಶನಾಲಯದ (ಡಿಆರ್‌ಐ) ಅಧಿಕಾರಿಗಳು ತಡೆದು ವಿಚಾರಣೆ ನಡೆಸಿದ್ದಾರೆ. ಇದರಿಂದ ಯುಎಇಯಲ್ಲಿ ನಡೆದ ಐಪಿಎಲ್ 2020 ಟ್ರೋಫಿ ಗೆದ್ದು ಭಾರತಕ್ಕೆ ಮರಳಿದ ಮುಂಬೈ ಇಂಡಿಯನ್ಸ್ ಆಟಗಾರ ಕೃನಾಲ್ ಪಾಂಡ್ಯಗೆ ಆಘಾತ ಉಂಟಾಗಿದೆ.
ಮುಂಬೈ ತಂಡದ ಆಲ್ ರೌಂಡರ್ ಕೃನಾಲ್ ಅವರು ಅಗತ್ಯಕಿಂತ ಹೆಚ್ಚಿನ ಪ್ರಮಾಣದಲ್ಲಿ ಚಿನ್ನವನ್ನು ಹೊಂದಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ. ಆದಾಯ ಇಲಾಖೆಯ ಗುಪ್ತಚರ ನಿರ್ದೇಶನಾಲಯ(ಡಿ ಆರ್ ಐ) ದ ಅಧಿಕಾರಿಗಳು ಈ ಬಗ್ಗೆ ಮಾಹಿತಿ ಪಡೆದು, ಕೃನಾಲ್ ಅವರನ್ನು ತಡೆದಿದ್ದಾರೆ. ಚಿನ್ನ, ಆಭರಣ, ದುಬಾರಿ ವಾಚು ಇನ್ನಿತರ ಬೆಲೆ ಬಾಳುವ ವಸ್ತುಗಳನ್ನು ವಶಪಡಿಸಿಕೊಂಡಿದ್ದು, ಸುಂಕ ಪಾವತಿಸಲು ಸೂಚಿಸಲಾಗಿದೆ. ಸರ್ಕಾರದ ನಿಯಮದಂತೆ, ದುಬೈನಿಂದ ಮರಳುವ ಪುರುಷ ಪ್ರಯಾಣಿಕರು 50 ಸಾವಿರ ರೂ. ಮೊತ್ತದ ಚಿನ್ನಾಭರಣಗಳನ್ನಷ್ಟೇ ಸುಂಕರಹಿತವಾಗಿ ತರಬಹುದಾಗಿದೆ.

ಸಚಿನ್ ಪೈಲಟ್ ಗೆ ಕೊರೋನಾ ಸೋಂಕು

ಮನಿ ಲ್ಯಾಂಡರಿಂಗ್ ಪ್ರಕರಣ; ದೀಪಕ್ ಕೊಚ್ಚಾರ್ ಜಾಮೀನು ಅರ್ಜಿ ತಿರಸ್ಕೃತ

ಮತ್ತಷ್ಟು ಸುದ್ದಿಗಳು

vertical

Latest News

ಸ್ನೇಹಿತೆ ಜತೆ ದೈಹಿಕ ಸಂಪರ್ಕಕ್ಕೆ ಪ್ರೇಯಸಿ ಒತ್ತಾಯ: ನಿರಾಕರಿಸಿದ ಪ್ರಿಯಕರನ ಮರ್ಮಾಂಗವನ್ನೇ ಕಚ್ಚಿದ ಗೆಳತಿ!

newsics.com ಕಾಸ್ಪುರ: ತನ್ನ ಸ್ನೇಹಿತೆಯೊಂದಿಗೆ ದೈಹಿಕ ಸಂಪರ್ಕ ಸಾಧಿಸಲಿಲ್ಲ ಎಂದು ಕೋಪಗೊಂಡ ಗೆಳತಿ, ಪ್ರಿಯಕರನ ಗುಪ್ತಾಂಗಕ್ಕೆ ಕಚ್ಚಿದ್ದಾಳೆ. ಇಂಥದ್ದೊಂದು ವಿಚಿತ್ರ ಮತ್ತು ಆಘಾತಕಾರಿ ಘಟನೆ ನಡೆದಿದ್ದು ಉತ್ತರಪ್ರದೇಶದಲ್ಲಿ. ಇಲ್ಲಿನ...

ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಶಾನವಾಜ್ ಹುಸೇನ್’ಗೆ ಹೃದಯಾಘಾತ!

newsics.com ಮುಂಬೈ: ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಶಾನವಾಜ್ ಹುಸೇನ್'ಗೆ ಹೃದಯ ಸ್ತಂಭನವಾಗಿದ್ದು, ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಂಜಿಯೋಪ್ಲ್ಯಾಸ್ಟಿ ಮಾಡಿಸಲಾಗಿದೆ. ಶಾನವಾಜ್ ಹುಸೇನ್ ಹೃದಯಾಘಾತದಿಂದ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಂಜಿಯೋಪ್ಲಾಸ್ಟಿ...

ಮನೆ ನೌಕರರಿಗೆ ಕಿರುಕುಳ ನೀಡುತ್ತಿದ್ದ ಸೇನಾ ಮೇಜರ್, ಆತನ ಪತ್ನಿ ಬಂಧನ!

newsics.com ಅಸ್ಸಾಂ: ಮನೆ ನೌಕರರಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಸೇನಾ ಮೇಜರ್ ಹಾಗೂ ಆತನ ಪತ್ನಿಯನ್ನು ಅಸ್ಸಾಂನಲ್ಲಿ ಬಂಧಿಸಲಾಗಿದೆ. ಅಸ್ಸಾಂನ ದಿಮಾ ಹಸಾವೋ ಜಿಲ್ಲೆಯಲ್ಲಿ ಸೇನಾ ಮೇಜರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು...
- Advertisement -
error: Content is protected !!