newsics.com
ನವದೆಹಲಿ: ಬಿಜೆಪಿಯ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ಸಂಸದ ತೇಜಸ್ವಿ ಸೂರ್ಯ ನೇಮಕಗೊಂಡಿದ್ದಾರೆ. ಸಚಿವ ಸಿ.ಟಿ.ರವಿ ಅವರನ್ನು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯಾದರ್ಶಿಯಾಗಿ ನೇಮಿಸಲಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಪಕ್ಷದ ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಶನಿವಾರ ಹೊಸ ತಂಡವನ್ನು ಪ್ರಕಟಿಸಿದ್ದಾರೆ.
ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನಗಳಿಗೆ ಹೊಸ ಮುಖಂಡರನ್ನು ಆಯ್ಕೆ ಮಾಡಲಾಗಿದೆ. ರಾಮ್ ಮಾಧವ್, ಪಿ.ಮುರಳೀಧರ್ ರಾವ್, ಅನಿಲ್ ಜೈನ್, ಸರೋಜ್ ಪಾಂಡೆ ಅವರ ಸ್ಥಾನಗಳಿಗೆ ಹೊಸಬರ ನೇಮಕವಾಗಿದೆ. ಡಾ.ರಮಣ್ ಸಿಂಗ್, ಮುಕುಲ್ ರಾಯ್, ಅನ್ನಪೂರ್ಣಾ ದೇವಿ, ಬೈಜ್ಯಂತ್ ಜಯ ಪಾಂಡಾ ರಾಷ್ಟ್ರೀಯ ಉಪಾಧ್ಯಕ್ಷರ ಸಾಲಿನಲ್ಲಿದ್ದಾರೆ.
ಪಕ್ಷದ ರಾಷ್ಟ್ರೀಯ ವಕ್ತಾರರ ಸಂಖ್ಯೆಯನ್ನು 23ಕ್ಕೆ ಹೆಚ್ಚಿಸಲಾಗಿದ್ದು, ರಾಜ್ಯದ ಸಂಸದ ರಾಜೀವ್ ಚಂದ್ರಶೇಖರ್ ಅವರು 23
ವಕ್ತಾರರ ಪಟ್ಟಿಯಲ್ಲಿದ್ದಾರೆ. ಸಂಸದ ಅನಿಲ್ ಬಲೂನಿ ಅವರನ್ನು ಪ್ರಧಾನ ವಕ್ತಾರರನ್ನಾಗಿ ಮಾಡಲಾಗಿದ್ದು, ಮೀಡಿಯಾ ನಿರ್ವಹಣೆ ಹೊಣೆಯೂ ಅವರ ಬಳಿಯೇ ಇದೆ.
भाजपा राष्ट्रीय अध्यक्ष श्री @JPNadda ने भाजपा केंद्रीय पदाधिकारियों के नामों की घोषणा की। pic.twitter.com/oLGRoSmbPa
— BJP (@BJP4India) September 26, 2020