ನವದೆಹಲಿ: ಒಮಾನ್ ನ ದೊರೆ ಸುಲ್ತಾನ್ ಖಬೂಸ್ ಬಿನ್ ಸೈದ್ ಅವರ ನಿಧನದ ಗೌರವಾರ್ಥ ಕೇಂದ್ರ ಸರಕಾರ ಸೋಮವಾರ ಒಂದು ದಿನದ ಶೋಕಾಚರಣೆ ಘೋಷಿಸಿದೆ.
ಒಮಾನ್ ನ ದೊರೆ ಜನವರಿ 10ರಂದು ತಮ್ಮ 79ನೇ ವಯಸ್ಸಿನಲ್ಲಿ ನಿಧನ ಹೊಂದಿದ್ದರು.
ಅವರ ಗೌರವಾರ್ಥವಾಗಿ ಜ. 13ರಂದು ದೇಶಾದ್ಯಂತ ಒಂದು ದಿನದ ಶೋಕಾಚರಣೆ ಮಾಡಲಾಗುವುದು ಭಾರತದಾದ್ಯಂತ ರಾಷ್ಟ್ರಧ್ವಜ ಅರ್ಧಮಟ್ಟಕ್ಕೆ ಹಾರಿಸಲಾಗುವುದು ಆ ದಿನ ಯಾವುದೇ ಅಧಿಕೃತ ಮನರಂಜನಾ ಕಾರ್ಯಕ್ರಮಗಳು ನಡೆಯುವುದಿಲ್ಲ ಎಂದು ಗೃಹ ಸಚಿವಾಲಯ ತಿಳಿಸಿದೆ.
ಒಮಾನ್ ದೊರೆ ಗೌರವಾರ್ಥ ನಾಳೆ ದೇಶಾದ್ಯಂತ ಶೋಕಾಚರಣೆ
Follow Us