newsics.com
ಶಿಲ್ಲಾಂಗ್(ಮೇಘಾಲಯ): ಶಿಲ್ಲಾಂಗ್ನಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಹಿಂಸಾಚಾರ ನಡೆದಿದೆ.
ಮೇಘಾಲಯದ ಗೃಹ ಸಚಿವರು ರಾಜೀನಾಮೆ ನೀಡಿದ್ದು, ಶಿಲ್ಲಾಂಗ್ನಲ್ಲಿ ಎರಡು ದಿನಗಳ ಕಾಲ ಕರ್ಫ್ಯೂ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ.
ಭಾನುವಾರ ಮೇಘಾಲಯ ಮುಖ್ಯಮಂತ್ರಿ ಕೊನ್ರಾಡ್ ಸಂಗ್ಮಾ ಅವರ ವೈಯಕ್ತಿಕ ನಿವಾಸದ ಮೇಲೆ ಪ್ರತಿಭಟನಾಕಾರರು ಪೆಟ್ರೋಲ್ ಬಾಂಬ್ ಎಸೆದಿದ್ದು, ಪರಿಸ್ಥಿತಿ ಮತ್ತಷ್ಟು ಪ್ರಕ್ಷುಬ್ಧಗೊಂಡಿದೆ.
ಶಿಲ್ಲಾಂಗ್ನ ಹಲವು ಪ್ರದೇಶಗಳಲ್ಲಿ ಕಲ್ಲು ತೂರಾಟ ನಡೆದಿದೆ. ಪೊಲೀಸ್ ಚೌಕಿಯನ್ನು ಧ್ವಂಸ ಮಾಡಲಾಗಿದ್ದು, ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಮಂಗಳವಾರ ಸಂಜೆ 5 ಗಂಟೆಯವರೆಗೆ ಶಿಲ್ಲಾಂಗ್ನಲ್ಲಿ ಕರ್ಫ್ಯೂ ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಮುಖ್ಯಮಂತ್ರಿ ಕೊನ್ರಾಡ್ ಸಂಗ್ಮಾಗೆ ಗೃಹ ಸಚಿವರು ರಾಜೀನಾಮೆ ಪತ್ರವನ್ನು ಭಾನುವಾರ ಸಲ್ಲಿಸಿದ್ದಾರೆ. ಶುಕ್ರವಾರ ಹತ್ಯೆಯಾದ ಚೆಸ್ಟರ್ ಫೀಲ್ಡ್ ತಂಗ್ಖಿವ್ (54) ಹತ್ಯೆ ಬಗ್ಗೆ ನ್ಯಾಯಾಂಗ ತನಿಖೆ ನಡೆಯಬೇಕು ಎಂದು ಪತ್ರದಲ್ಲಿ ಮನವಿಯನ್ನು ಮಾಡಿದ್ದಾರೆ.
ನಿಷೇಧಿತ ಹೈನ್ನಿವ್ಟ್ರೆಪ್ ನ್ಯಾಷನಲ್ ಲಿಬರೇಷನ್ ಕೌನ್ಸಿಲ್ ಬಂಡುಕೋರ ಸಂಘಟನೆಯ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಚೆಸ್ಟರ್ ಫೀಲ್ಡ್ ತಂಗ್ಖಿವ್ ಅಂತ್ಯಕ್ರಿಯೆ ಭಾನುವಾರ ನಡೆಯಿತು. ಸಾವಿರಾರು ಜನರು ಕಪ್ಪುಪಟ್ಟಿ ಧರಿಸಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.
ಪೊಲೀಸರ ಎನ್ಕೌಂಟರ್ ವೇಳೆ ಚೆಸ್ಟರ್ ಫೀಲ್ಡ್ ತಂಗ್ಖಿವ್ ಗಂಭೀರವಾಗಿ ಗಾಯಗೊಂಡಿದ್ದ. ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದ. ಚೆಸ್ಟರ್ ಫೀಲ್ಡ್ ತಂಗ್ಖಿವ್ ಹತ್ಯೆ ಖಂಡಿಸಿ ಶಿಲ್ಲಾಂಗ್ನಲ್ಲಿ ಪ್ರತಿಭಟನೆ ನಡೆಯುತ್ತಿದೆ. ಈ ಪ್ರತಿಭಟನೆ ಭಾನುವಾರ ಹಿಂಸಾರೂಪಕ್ಕೆ ತಿರುಗಿದೆ.