Thursday, December 7, 2023

ಎಪಿಎಂಸಿ ಬಂದ್ ಮಾಡಲ್ಲ: ರೈತರಿಗೆ ಪ್ರಧಾನಿ ಮೋದಿ ಅಭಯ

Follow Us

ನವದೆಹಲಿ: ಉತ್ತರ ಭಾರತದಲ್ಲಿ ಅದರಲ್ಲೂ ಮುಖ್ಯವಾಗಿ ಪಂಜಾಬ್ ಮತ್ತು ಹರ್ಯಾಣದಲ್ಲಿ ರೈತರ ಪ್ರತಿಭಟನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅನ್ನದಾತರ ಮನವೊಲಿಕೆ ಕಸರತ್ತು ಆರಂಭಿಸಿದೆ. ಇಂದು ಬಿಹಾರದ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ  ಪ್ರಧಾನಿ ಮೋದಿ ಮುಖ್ಯವಾಗಿ ಕೃಷಿ ಕ್ಷೇತ್ರದ ಬಗ್ಗೆ ಪ್ರಸ್ತಾಪಿಸಿದರು.

ರೈತರಿಗೆ ಮಾರಕವಾಗುವಂತಹ ಯಾವುದೇ ನಿರ್ಧಾರ ಸರ್ಕಾರ ತೆಗೆದುಕೊಂಡಿಲ್ಲ ಎಂದು ಪ್ರಧಾನಿ ಸ್ಪಷ್ಟಪಡಿಸಿದರು. ರಾಜ್ಯಸಭೆಯಲ್ಲಿ ಅಂಗೀಕರಿಸಲಾದ ಕೃಷಿ ಮಸೂದೆ ರೈತರ ಕಲ್ಯಾಣಕ್ಕೆ ಪೂರಕವಾಗಿದೆ ಎಂದು ಪ್ರಧಾನಿ ಹೇಳಿದರು. ಕೃಷಿ ಉತ್ಪನ್ನ ಮಾರುಕಟ್ಟೆ ಎಂದಿನಂತೆ ಮುಂದುವರಿಯಲಿದೆ. ಕೃಷಿ ಉತ್ಪನ್ನಗಳ ಕನಿಷ್ಟ ಬೆಂಬಲ ಬೆಲೆ ಪದ್ದತಿ ಕೂಡ ಇರಲಿದೆ ಎಂದು ಪ್ರಧಾನಿ ಹೇಳಿದರು.

ಕೃಷಿ ಕ್ಷೇತ್ರದಲ್ಲಿ ಬದಲಾವಣೆ ಕಾಲದ ಅಗತ್ಯವಾಗಿದ್ದು ಇದಕ್ಕೆ ತಕ್ಕಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಧಾನಿ  ವಿವರಿಸಿದರು. ರೈತರು ತಮ್ಮ ಉತ್ಪನ್ನಗಳನ್ನು ಯಾರಿಗೂ ಬೇಕಾದರೂ ಮಾರಾಟ ಮಾಡಲು ಇದೀಗ ಶಕ್ತರಾಗಿದ್ದಾರೆ. ಇದರಿಂದ  ಆದಾಯ ಹೆಚ್ಚಾಗಲಿದೆ ಹೊರತೂ ಕಡಿಮೆಯಾಗದು ಎಂದು ಪ್ರಧಾನಿ ಭರವಸೆ ನೀಡಿದರು.

ಮತ್ತಷ್ಟು ಸುದ್ದಿಗಳು

vertical

Latest News

ಚಿನ್ನ, ಜಮೀನು, ಬಿಎಂಡಬ್ಲ್ಯೂ ಕಾರಿಗೆ ಬೇಡಿಕೆ : ಕೇರಳದ ವೈದ್ಯೆ ಆತ್ಮಹತ್ಯೆ

Newsics.com ಕೇರಳ : ಕೇರಳದ ತಿರುವನಂತಪುರಂ ಮೆಡಿಕಲ್ ಕಾಲೇಜಿನ ಶಸ್ತ್ರಚಿಕಿತ್ಸಾ ವಿಭಾಗದ ಸ್ನಾತಕೋತ್ತರ ವೈದ್ಯೆ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಆತ್ಮಹತ್ಯೆಗೆ ವರದಕ್ಷಿಣೆಗೆ ಬೇಡಿಕೆ ಇಟ್ಟಿದ್ದೆ ಕಾರಣ...

ಊಟ ಕೇಳಿದ್ದಕ್ಕೆ ವಿದ್ಯಾರ್ಥಿಗಳಿಗೆ ಬಿತ್ತು ಚಾಟಿ ಏಟು

newsics.com ಹಾವೇರಿ : ಊಟ ಕೇಳಿದ ವಿಧ್ಯಾರ್ಥಿಗಳಿಗೆ ವಾರ್ಡನ್ ಚಾಟಿ ಏಟು ಕೊಟ್ಟಿರುವಂತಹ ಅಮಾನವೀಯ ಘಟನೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆಯಾದ ಹಾವೇರಿಯಲ್ಲಿ ನಡೆದಿದೆ. ರಾಣೇಬೆನ್ನೂರು ನಗರದ ಅಂಬೇಡ್ಕರ್ ವಸತಿ...

ಹೊತ್ತಿ ಉರಿದ ಕಾರು – ಟಿಪ್ಪರ್ : ಇಬ್ಬರು ಸಜೀವ ದಹನ

Newsics.com ಬೆಳಗಾವಿ : ಕಾರು ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿ, ಬಾಲಕಿ ಸೇರಿ ಇಬ್ಬರು ಸಜೀವ ದಹನವಾದರೆ ಮತ್ತಿಬ್ಬರಿಗೆ ಗಂಭೀರ ಗಾಯವಾಗಿರುವಂತಹ ಘಟನೆ ಬೆಳಗಾವಿ ತಾಲೂಕಿನ ದೇವಗಿರಿ ಬಂಬರಗಾ ಕ್ರಾಸ್ ಬಳಿ...
- Advertisement -
error: Content is protected !!