Tuesday, December 5, 2023

ಪಾರ್ಕ್ ನಲ್ಲಿ ಸ್ವಚ್ಛತಾ ಕಾರ್ಯ ಮಾಡಿದ ಪ್ರಧಾನಿ ಮೋದಿ

Follow Us

newsics.com

ಗುಜರಾತ್: ಗಾಂಧೀ ಜಯಂತಿ ಅಂಗವಾಗಿ ದೇಶಾದ್ಯಂತ ನಡೆಯುತ್ತಿರುವ ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸ್ವಚ್ಛತಾ ಕಾರ್ಯ ಮಾಡಿದರು.

ದೇಶಾದ್ಯಂತ ಸ್ವಚ್ಛತ ಅಭಿಯಾನ ನಡೆಸುವಂತೆ ಕರೆ ನೀಡಿದ್ದ ಮೋದಿ, ಕುಸ್ತಿಪಟು ಅಂಕಿತ್ ಬೈಯನ್ ಪುರಿಯಾ ಜತೆ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡರು.

ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ ಕೇವಲ ನಾವು ಸ್ವಚ್ಛತೆಯ ಬಗ್ಗೆ ಮಾತ್ರ ಗಮನಹರಿಸಿಲ್ಲ, ಸ್ವಚ್ಛ ಹಾಗೂ ಸ್ವಸ್ತ್ ಭಾರತ್ ಗಮನದಲ್ಲಿಟ್ಟುಕೊಂಡು ಫಿಟ್ನೆಟ್ಗೂ ಒತ್ತು ನೀಡಿದ್ದೇವೆ ಎಂದಿದ್ದಾರೆ.

ಪ್ರಧಾನಿ ಮೋದಿಯವರ ಸ್ವಚ್ಛತಾ ಅಭಿಯಾನದಲ್ಲಿ ದೇಶಾದ್ಯಂತ ರಾಜಕೀಯ ನಾಯಕರು ಸಕ್ರಿಯವಾಗಿ ಪಾಲ್ಗೊಂಡರು. ಗುಜರಾತ್ನ ಅಹಮದಾಬಾದಿನಲ್ಲಿ ನಡೆದ ಸ್ವಚ್ಛತಾ ಹಿ ಸೇವಾ ಅಭಿಯಾನದಲ್ಲಿ ಸ್ವಚ್ಛತೆಗಾಗಿ ಶ್ರಮದಾನ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾಲ್ಗೊಂಡಿದ್ದರು.

ಕೇಂದ್ರ ಸಚಿವ ಪಿಯೂಷ್ ಗೋಯಲ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಕೂಡ ರಾಜಸ್ಥಾನದ ಕೋಟಾದಲ್ಲಿ ಸ್ವಚ್ಛತಾ ಹಿ ಸೇವಾ ಅಭಿಯಾನದಲ್ಲಿ ಭಾಗವಹಿಸಿದ್ದರು. ದೆಹಲಿಯ ಜವಾಹರಲಾಲ್ ನೆಹರು ಕ್ರೀಡಾಂಗಣದ ಬಳಿ ನಡೆದ ಸ್ವಚ್ಛತಾ ಅಭಿಯಾನದಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಸಕ್ರಿಯವಾಗಿ ಪಾಲ್ಗೊಂಡಿದ್ದರು.

ಭಾರತದಲ್ಲಿನ ರಾಯಭಾರ ಕಚೇರಿಗೆ ಬೀಗ ಜಡಿದ ಅಫ್ಘಾನಿಸ್ತಾನ

ಮತ್ತಷ್ಟು ಸುದ್ದಿಗಳು

vertical

Latest News

ತೆಲಂಗಾಣದ ನೂತನ ಸಿಎಂ ಇವರೇ : ನಾಳೆಯೇ ಪ್ರಮಾಣ ವಚನ..!!

Newsics.com ಹೈದರಾಬಾದ್ : ತೆಲಂಗಾಣದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಿದೆ. ಇದೀಗ ಬಂದ...

ವಿಜಯಪುರ ಗೋದಾಮು ದುರಂತ : ಆರು ಮೃತದೇಹಗಳು ಪತ್ತೆ

Newsics.com ವಿಜಯಪುರ : ವಿಜಯಪುರ ರಾಜಗುರು ಫುಡ್ಸ್ ಗೋದಾಮಿನಲ್ಲಿ ಸಂಭವಿಸಿದ ದುರಂತದಲ್ಲಿ 7ಕ್ಕೂ ಹೆಚ್ಚು ಕಾರ್ಮಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ಈಗಾಗಲೇ ಆರು ಕಾರ್ಮಿಕರ ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ನಿನ್ನೆ (ಡಿ.4) ರಾತ್ರಿ 11.30ರ...

ವರುಣನ ಅಬ್ಬರಕ್ಕೆ ತಮಿಳುನಾಡು ತತ್ತರ : ಐದು ಮಂದಿ ಸಾವು

Newsics.com ತಮಿಳುನಾಡು : ಮಿಚೌಂಗ್ ಚಂಡಮಾರುತದ ಅಬ್ಬರಕ್ಕೆ ತಮಿಳುನಾಡು ತತ್ತರಿಸಿ ಹೋಗಿದೆ. ಧಾರಾಕಾರ ಮಳೆಯಿಂದಾಗಿ ಇಡೀ ಚೆನ್ನೈ ಜಲಾವೃತವಾಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಮಿಚೌಂಗ್ ಚಂಡಮಾರುತದಿಂದಾಗಿ ಇಲ್ಲಿಯವರೆಗೆ ಐವರು ಪ್ರಾಣವನ್ನು ಕಳೆದುಕೊಂಡಿದ್ದಾರೆ. ಚೆನ್ನೈನಲ್ಲಿ ವೇಗವಾಗಿ ಬೀಸುತ್ತಿರುವ ಗಾಳಿ...
- Advertisement -
error: Content is protected !!