Wednesday, November 29, 2023

ಚಿನ್ನ ಕಳ್ಳ ಸಾಗಾಟ: ಎನ್ ಐ ಎ ಯಿಂದ ಶಿವಶಂಕರ್, ಸ್ವಪ್ನಾ ಜಂಟಿ ವಿಚಾರಣೆ

Follow Us

ಕೊಚ್ಚಿ: ಮೂವತ್ತು ಕಿಲೋ ಚಿನ್ನ ಕಳ್ಳ ಸಾಗಾಟದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾದಳ ಎನ್ ಐ ಎ ಇಂದು ಹಿರಿಯ ಐಎಎಸ್ ಅಧಿಕಾರಿ ಶಿವಶಂಕರ್ ಅವರನ್ನು ಮತ್ತೆ ವಿಚಾರಣೆಗೆ ಗುರಿಪಡಿಸಿದೆ. ಇದೀಗ ಮೂರನೆ ಬಾರಿ ಶಿವಶಂಕರ್ ಎನ್ ಐ ಎ ವಿಚಾರಣೆ ಎದುರಿಸುತ್ತಿದ್ದಾರೆ.

ಚಿನ್ನ ಕಳ್ಳ ಸಾಗಾಟದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಮತ್ತು ಶಿವಶಂಕರ್ ಅವರನ್ನು ಎನ್ ಐ ಎ ಜತೆಯಲ್ಲಿ ವಿಚಾರಣೆ ನಡೆಸುತ್ತಿದೆ. ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯ ಸ್ವಪ್ನಾ ಸುರೇಶ್ ಅವರನ್ನು  ಎನ್ ಐ ಎ ಕಸ್ಟಡಿಗೆ ನೀಡಿದೆ.

ವಿಚಾರಣೆ ಸಂದರ್ಭದಲ್ಲಿ ಸ್ವಪ್ನಾ ಸುರೇಶ್ ನೀಡಿದ ಮಾಹಿತಿ  ಆಧಾರದಲ್ಲಿ ಈ ವಿಚಾರಣೆ ನ಼ಡೆಸಲಾಗುತ್ತಿದೆ ಎಂದು ವರದಿಯಾಗಿದೆ

ಶಿವಶಂಕರ್ ಕೇರಳದ ಮಾಹಿತಿ ತಂತ್ರಜ್ಞಾನ ಕಾರ್ಯದರ್ಶಿ ಮತ್ತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಪ್ರಿನ್ಸಿಪಾಲ್ ಸೆಕ್ರಟರಿಯಾಗಿದ್ದರು. ಹಗರಣ ಬೆಳಕಿಗೆ ಬಂದ ಬಳಿಕ ಅವರನ್ನು ಅಮಾನತು ಮಾಡಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಮೈಸೂರು ವಿವಿ ಪ್ರೊಫೆಸರ್ ವಿರುದ್ಧ ಪಿಎಚ್ಡಿ ವಿದ್ಯಾರ್ಥಿನಿಯಿಂದ ಪೊಲೀಸರಿಗೆ ದೂರು: FIR ದಾಖಲು

newsics.com ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಪ್ರೊಫೆಸರ್ ಶುಭ ಗೋಪಾಲ್ ವಿರುದ್ಧ ಪಿಎಚ್.ಡಿ. ವಿದ್ಯಾರ್ಥಿನಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಮೈಸೂರು ವಿವಿಯ ಮೈಕ್ರೋ ಬಯಾಲಜಿ ವಿಭಾಗದ ಪ್ರೊ.ಶುಭ ಗೋಪಾಲ್ ವಿರುದ್ಧ...

ಮುಂದಿನ ವರ್ಷದಿಂದ 500 ರಿಂದ 600 ಕರ್ನಾಟಕ ಪಬ್ಲಿಕ್ ಸ್ಕೂಲ್ ಆರಂಭ: ಮಧು ಬಂಗಾರಪ್ಪ

newsics.com ಹಾಸನ: ಮುಂದಿನ ಶೈಕ್ಷಣಿಕ ವರ್ಷದಲ್ಲಿ 500 ರಿಂದ 600 ಪಬ್ಲಿಕ್ ಶಾಲೆಗಳನ್ನು ಸ್ಥಾಪನೆ ಮಾಡಲಾಗುವುದು. ಚುನಾವಣೆ ಸಂದರ್ಭದಲ್ಲಿ ನೀಡಿದ 5 ಗ್ಯಾರಂಟಿಗಳನ್ನು ಈಡೇರಿಸಿದ್ದು, ಶಾಲೆಗಳ ಅಭಿವೃದ್ಧಿಗೂ ಹಾಗೂ ಗ್ಯಾರಂಟಿಗೂ ಯಾವ ಸಂಬಂಧವಿಲ್ಲ ಎಂದು...

2024ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಬಿಡುಗಡೆ

newsics.com ಬೆಂಗಳೂರು: 2024ಕ್ಕೆ ಮುಂಜೂರಾದ ಸಾರ್ವತ್ರಿಕ ರಜೆಗಳ ಪಟ್ಟಿಯನ್ನು ಕರ್ನಾಟಕ ಸರ್ಕಾರವು ಬಿಡುಗಡೆ ಮಾಡಿದೆ. ಎಲ್ಲಾ ಎರಡನೇ ಶನಿವಾರ, ನಾಲ್ಕನೇ ಶನಿವಾರ ಮತ್ತು ಭಾನುವಾರಗಳು ಸೇರಿದಂತೆ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಹೀಗಿದೆ. ಜನವರಿ 15,...
- Advertisement -
error: Content is protected !!