newsics.com
ಶ್ರೀಹರಿಕೋಟಾ; ಶ್ರೀಹರಿಕೋಟಾ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಮೊದಲ ಬಾರಿ ಉಡಾವಣೆಗೊಂಡ ಸಣ್ಣ ಉಪಗ್ರಹ ಉಡಾವಣಾ ವಾಹನ(ಎಸ್ಎಸ್ಎಲ್ವಿ -ಡಿ 1) ತನ್ನ ಉದ್ದೇಶಿತ ಗುರಿಯನ್ನು ತಲುಪಲಿಲ್ಲ. ಹೀಗಾಗಿ ಉಡಾವಣೆ ವಿಫಲವಾಗಿದೆ.ಇನ್ನು ಅದರ ಬಳಕೆಗೆ ಸಾಧ್ಯವಿಲ್ಲ ಎಂದು ಇಸ್ರೋ ತಿಳಿಸಿದೆ.
ಟ್ರಿಮ್ಮಿಂಗ್ ಮಾಡ್ಯೂಲ್ ಆರಂಭದಲ್ಲಿ ಸರಿಯಾಗಿ ಉರಿಯದ ಕಾರಣ ಕಕ್ಷೆಗೆ ತಲುಪಲು ವಿಫಲವಾಗಿದೆ ಎಂದು ತಿಳಿಸಿದೆ.
ಇಸ್ರೋ ಮೊದಲಿಗೆ ಉಪಗ್ರಹ ಉಡಾವಣೆ ಹಂತ ಉತ್ತಮವಾಗಿ ಕಾರ್ಯನಿರ್ವಹಿಸಿದೆ ಎಂದು ಘೋಷಿಸಿತ್ತು. ಆದರೆ ತಾಂತ್ರಿಕ ದೋಷದಿಂದ ಕಕ್ಷೆಗೆ ತಲುಪಲಿಲ್ಲ ಎಂದು ಟ್ವೀಟ್ ಮೂಲಕ ತಿಳಿಸಿದೆ.
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಗ್ರಾಮೀಣ ಭಾಗದ 75 ಸರ್ಕಾರಿ ಶಾಲೆಗಳ 750 ವಿದ್ಯಾರ್ಥಿನಿಯರು ಸೇರಿ 8 ಕೆಜಿ ತೂಕದ ಆಜಾದಿ ಸ್ಯಾಟ್ ಉಪಗ್ರಹವನ್ನು ಹೊತ್ತ ಎಸ್ಎಸ್ಎಲ್ವಿ ಇಂದು ಬೆಳಗ್ಗೆ 9:18ರ ವೇಳೆಗೆ ಉಡಾವಣೆಗೊಂಡಿತ್ತು.