Saturday, April 1, 2023

ಇಪ್ಪತ್ತು ರೂಪಾಯಿಯ ಚಾಕಲೇಟ್ ಕದ್ದ ಆರೋಪ: ಮಾಲ್ ನಲ್ಲಿ ವಿದ್ಯಾರ್ಥಿಯ ಸಂಶಯಾಸ್ಪದ ಸಾವು

Follow Us

ಹೈದರಾಬಾದ್: ಇಪ್ಪತ್ತು ರೂಪಾಯಿಯ ಚಾಕಲೇಟ್ ಕದ್ದ ಆರೋಪಕ್ಕೆ ಗುರಿಯಾದ ಪಿ ಯು ಸಿ ವಿದ್ಯಾರ್ಥಿಯೊಬ್ಬ ಮಾಲ್ ನಲ್ಲಿಯೇ ಸಂಶಯಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಹೈದರಾಬಾದ್ ಹೊರವಲಯದ ಸುಷ್ಮಾ ಥಿಯೇಟರ್ ಬಳಿ ಇರುವ ಮಾಲ್ ನಲ್ಲಿ ಈ ಘಟನೆ ಸಂಭವಿಸಿದೆ. ಮೃತಪಟ್ಟವನನ್ನು ಲವೋದಯ ಸತೀಶ್ ಎಂದು ಗುರುತಿಸಲಾಗಿದೆ. ಮೂವರು ಸಹಪಾಠಿಗಳೊಂದಿಗೆ ಮಾಲ್ ಗೆ ಆಗಮಿಸಿದ್ದ ಸತೀಶ್, ಚಾಕಲೇಟ್ ಕದ್ದಿದ್ದ ಎಂದು ಹೇಳಲಾಗಿದೆ. ಇದನ್ನು ಭದ್ರತಾ ಸಿಬ್ಬಂದಿ ಪತ್ತೆ ಹಚ್ಚಿದ್ದಾಗ  ಅಸ್ವಸ್ಥಗೊಂಡ ಸತೀಶ್  ಸಾವನ್ನಪ್ಪಿದ್ದ ಎಂದು ಹೇಳಲಾಗುತ್ತಿದೆ. ಆದರೆ, ಸತೀಶ್ ಪೋಷಕರು ಮಾತ್ರ ಈ ವಾದವನ್ನು  ತಳ್ಳಿಹಾಕಿದ್ದಾರೆ. ಮಗನ ಸಾವಿಗೆ ನ್ಯಾಯ ಬೇಕು ಎಂದು ಆಗ್ರಹಿಸಿದ್ದಾರೆ. ಘಟನೆ ಖಂಡಿಸಿ ಉದ್ರಿಕ್ತ ಗುಂಪೊಂದು ಮಾಲ್ ನ  ಗಾಜುಗಳನ್ನು ಧ್ವಂಸಗೊಳಿಸಿದೆ. ಕಳೆದ ವಾರ ಕೇರಳದ ಕಲ್ಲಿಕೋಟೆಯಲ್ಲಿ ಮಹಿಳೆಯೊಬ್ಬರು ಮೆಣಸಿನ ಹುಡಿ ಕದ್ದಿದ್ದಾರೆ ಎಂದು ಆರೋಪಿಸಿ  ಅವರನ್ನು ಏಳು ಗಂಟೆಗಳ ಕಾಲ ಕೋಣೆಯೊಂದರಲ್ಲಿ ಕೂಡಿ ಹಾಕಲಾಗಿತ್ತು.

ಮತ್ತಷ್ಟು ಸುದ್ದಿಗಳು

vertical

Latest News

ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ್ದ ಕೇಜ್ರಿವಾಲ್‌ಗೆ 25 ಸಾವಿರ ದಂಡ

ಅಹಮದಾಬಾದ್‌: ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‍ಗೆ  ಮುಖಭಂಗ ಉಂಟಾಗಿದೆ. ಪ್ರಧಾನಿ ಮೋದಿ ಡಿಗ್ರಿ ಸರ್ಟಿಫಿಕೇಟ್‍ಗಳನ್ನು ಪ್ರದರ್ಶಿಸುವ ಅಗತ್ಯವಿಲ್ಲ ಎಂದು ಗುಜರಾತ್...

ಕೆಲಸದ ನಡುವೆ ಧಮ್ ಎಳೆಯಲು ಪದೇ ಪದೇ ಬ್ರೇಕ್, 9 ಲಕ್ಷ ರೂಪಾಯಿ ದಂಡ

newsics.com ನವದೆಹಲಿ: ಕೆಲಸದ ನಡುವೆ ಧಮ್ ಎಳೆಯಲು ಬ್ರೇಕ್ ತೆಗೆದುಕೊಳ್ಳುವುದು ಸಾಮಾನ್ಯವಾಗಿದೆ.ನೀವೂ ಹೀಗೆ ಮಾಡುತ್ತಿದ್ದರೆ ಎಚ್ಚರವಾಗಿರುವುದು ಒಳಿತು. ಕೆಲಸದ ನಡುವೆ ಧಮ್ ಎಳೆಯಲು ಪದೇ ಪದೇ ಬ್ರೇಕ್, 9 ಲಕ್ಷ ರೂಪಾಯಿ ದಂಡವನ್ನು ಕಂಪನಿ...

ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿ ಹಿನ್ನೆಲೆ ಮಧ್ಯರಾತ್ರಿ 1 ಗಂಟೆಯ ತನಕ ಮೆಟ್ರೋ ಸೇವೆ

newsics.com ಬೆಂಗಳೂರು: ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿ ಹಿನ್ನೆಲೆ ಮಧ್ಯರಾತ್ರಿ 1 ಗಂಟೆಯ ತನಕ ಮೆಟ್ರೋ ಸೇವೆ ವಿಸ್ತರಣೆ ಮಾಡಲಾಗುತ್ತಿದೆ. ರಾಜ್ಯ ರಾಜಧಾನಿಯಲ್ಲಿ ಏಪ್ರಿಲ್ 2, 10, 17, 26 ಮೇ 21 ರಂದು ಐಪಿಎಲ್ ಪಂದ್ಯವಿರುವ...
- Advertisement -
error: Content is protected !!