Sunday, October 1, 2023

ಶಿಕ್ಷಕಿಯ ಕೈಕಾಲು ಕಟ್ಟಿ ರಸ್ತೆಯಲ್ಲೇ ಎಳೆದೊಯ್ದರು…!

Follow Us

ಕೋಲ್ಕತಾ: ತನಗೆ ಸೇರಿದ ಭೂಮಿಯಲ್ಲಿ ರಸ್ತೆ ನಿರ್ಮಿಸಲು ಮುಂದಾದ ಪಂಚಾಯತ್ ಮುಖಂಡರ ವಿರುದ್ಧ ಪ್ರತಿಭಟನೆ ನಡೆಸಿದ್ದ ಶಿಕ್ಷಕಿಯ ಕೈಕಾಲುಗಳನ್ನು ಹಗ್ಗದಿಂದ ಕಟ್ಟಿ ನಂತರ ರಸ್ತೆಯ ಮೇಲೆ ಎಳೆದೊಯ್ದು ಹಲ್ಲೆ ನಡೆಸಿರುವ ಘಟನೆ ಪಶ್ಚಿಮ ಬಂಗಾಳದ ದಕ್ಷಿಣ ದಿನಾಜ್ ಪುರ್ ನ ಗಂಗ್ರಾಮ್ ಪುರ್ ಎಂಬಲ್ಲಿ ನಡೆದಿದೆ.
ಗಂಗ್ರಾಮ್ ಪುರ್ ಪಂಚಾಯತ್ ನ ತೃಣಮೂಲ ಕಾಂಗ್ರೆಸ್ ಮುಖಂಡ ಅಮಲ್ ಸರ್ಕಾರ್ ಸೇರಿ ಹಲವರ ಗುಂಪು ಶಿಕ್ಷಕಿಯ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿರುವುದಾಗಿ ವರದಿಯಾಗಿದೆ.
ಶಿಕ್ಷಕಿಯ ಸಹೋದರಿಯ ಮೇಲೂ ಹಲ್ಲೆ ನಡೆಸಲಾಗಿದೆ. ಮನೆ ಮುಂಭಾಗದಲ್ಲಿ ರಸ್ತೆ ನಿರ್ಮಾಣಕ್ಕಾಗಿ 12 ಅಡಿ ಅಗಲ ಜಾಗ ನೀಡುವುದಾಗಿ ಶಿಕ್ಷಕಿ ತಿಳಿಸಿದ್ದರು. ಆದರೆ ಪಂಚಾಯತ್ ಮುಖಂಡ ಮತ್ತು ಸದಸ್ಯರು ರಸ್ತೆಗೆ 24 ಅಡಿ ಜಾಗ ನೀಡಬೇಕೆಂದು ನಿರ್ಣಯ ಕೈಗೊಂಡಿದ್ದರು. ಘಟನೆ ಬಗ್ಗೆ ಶಿಕ್ಷಕಿ ಐವರ ವಿರುದ್ಧ ದೂರು ದಾಖಲಿಸಿದ್ದು, ಈವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಹಳ್ಳಕ್ಕೆ ಉರುಳಿದ ಬಸ್: 8‌ ಮಂದಿ‌ ಸಾವು, 25 ಪ್ರಯಾಣಿಕರಿಗೆ ಗಾಯ

newsics.com ಚೆನ್ನೈ: ತಮಿಳುನಾಡಿನ ನೀಲಗಿರಿ ಬೆಟ್ಟದಲ್ಲಿ ಶನಿವಾರ ಪ್ರವಾಸಿ ಬಸ್ ಹಳ್ಳಕ್ಕೆ ಬಿದ್ದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, 25 ಮಂದಿ ಗಾಯಗೊಂಡಿದ್ದಾರೆ. ಮೃತರಲ್ಲಿ ನಾಲ್ವರು ಮಹಿಳೆಯರು ಮತ್ತು...

ಅಕ್ಟೋಬರ್‌ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ತಾಪಮಾನ ಸಾಧ್ಯತೆ!

newsics.com ನವದೆಹಲಿ: ದೇಶದ ಬಹುತೇಕ ಭಾಗಗಳಲ್ಲಿ ಅಕ್ಟೋಬರ್‌ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನ ಮತ್ತು ಸಾಮಾನ್ಯಕ್ಕಿಂತ ಹೆಚ್ಚು ಕನಿಷ್ಠ ತಾಪಮಾನ ದಾಖಲಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶನಿವಾರ ತಿಳಿಸಿದೆ. ತಮಿಳುನಾಡು, ಕರಾವಳಿ...

ಕರ್ನಾಟಕದಲ್ಲಿ ಈ ಬಾರಿ ಶೇ. 25ರಷ್ಟು ಮಳೆಯ ಕೊರತೆ

newsics.com ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಅವಧಿಯಲ್ಲಿ ಈ ವರ್ಷ ಶೇ 25ರಷ್ಟು ಮಳೆ ಕೊರತೆಯಾಗಿದೆ. ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗಿನ ನಾಲ್ಕು ತಿಂಗಳಲ್ಲಿ ಒಟ್ಟು 845 ಮಿ.ಮೀ ಮಳೆ ಸುರಿಯಬೇಕಿತ್ತು. ಆದರೆ, 635...
- Advertisement -
error: Content is protected !!