Wednesday, May 31, 2023

ಆಂಬುಲೆನ್ಸ್ ಏರಲು ನೆರವಾಗದ ಜನ, ರಸ್ತೆಯಲ್ಲೇ ವೃದ್ಧ ಸಾವು

Follow Us

ಕೊಲ್ಕತ್ತಾ: ಆಂಬುಲೆನ್ಸ್’ಗೆ ಹತ್ತಿಸುವಂತೆ ಗೋಗರೆದರೂ ಜನರು ಸಹಾಯಕ್ಕೆ ಬಾರದ್ದರಿಂದ ಅನಾರೋಗ್ಯಪೀಡಿತ ವೃದ್ಧರೊಬ್ಬರು ಆಂಬುಲೆನ್ಸ್ ಏರಲಾರದೆ ರಸ್ತೆಯಲ್ಲೇ ಕುಸಿದು ಮೃತಪಟ್ಟ ಘಟನೆ ಪಶ್ಚಿಮ ಬಂಗಾಳದ ಬೋಂಗೌನ್ ನಲ್ಲಿ ಭಾನುವಾರ ನಡೆದಿದೆ.
68 ವರ್ಷದ ಮಾಧವ್ ನಾರಾಯಣ್ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಇಲ್ಲಿನ ಆಸ್ಪತ್ರೆಯೊಂದಕ್ಕೆ ಭಾನುವಾರ ಸಂಜೆ ಕರೆತರಲಾಗಿತ್ತು. ಅವರನ್ನು ಅಲ್ಲಿ ಶಂಕಿತ ಕೊರೋನಾ ರೋಗಿಗಳ ವಾರ್ಡ್’ಗೆ ದಾಖಲಿಸಲಾಗಿತ್ತು. ರಾತ್ರಿ 8 ರ ಹೊತ್ತಿಗೆ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಕೊಲ್ಕತ್ತಾದ ಆಸ್ಪತ್ರೆಗೆ ದಾಖಲಿಸುವಂತೆ ವೈದ್ಯರು ಹೇಳಿದರು. ಈ ಆಸ್ಪತ್ರೆ ಸುಮಾರು 80 ಕಿ.ಮೀ. ದೂರದಲ್ಲಿತ್ತು. ಕೂಡಲೇ ಆಂಬುಲೆನ್ಸ್ ಸ್ಥಳಕ್ಕೆ ಆಗಮಿಸಿದ್ದರೂ ಅದಕ್ಕೆ ಹತ್ತಲು ಮಾಧವ್ ಆವರಿಗೆ ಸಾಧ್ಯವಾಗಲಿಲ್ಲ. ಅವರನ್ನು ಆಂಬುಲೆನ್ಸ್ ಗೆ ಹತ್ತಿಸಲು ಪತ್ನಿ ಸಾಕಷ್ಟು ಪ್ರಯತ್ನ ಮಾಡಿದರೂ ಸಾಧ್ಯವಾಗಲಿಲ್ಲ. ಅಲ್ಲೇ ಇದ್ದವರ ನೆರವು ಕೇಳಿದರೂ ಯಾರೊಬ್ಬರೂ ಸಹಾಯ ಮಾಡಲಿಲ್ಲ. ಸ್ಥಳದಲ್ಲೇ ಪಿಪಿಇ ಸೂಟು ಧರಿಸಿದ್ದ ಆಂಬುಲೆನ್ಸ್ ಚಾಲಕನ ಬಳಿಯೂ ಗೋಗರೆದರು. ಪ್ರಯೋಜನವಾಗಲಿಲ್ಲ. ಸುಮಾರು ಅರ್ಧ ಗಂಟೆ ಬಳಿಕ ವೃದ್ಧ ಅಲ್ಲೇ ಕುಸಿದು ಅಸುನೀಗಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

Weekend With Ramesh; ಸಾಧಕರ ಕುರ್ಚಿಯಲ್ಲಿ ಡಿಕೆ ಶಿವಕುಮಾರ್!

newsics.com ಬೆಂಗಳೂರು: ಖಾಸಗಿವಾಹಿನಿಯಲ್ಲಿ ವೀಕೆಂಡ್ ವಿತ್ ರಮೇಶ್ ಐದನೇ ಸೀಸನ್​ನ ಈ ವಾರದ ಅತಿಥಿಯಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಗಮಿಸಲಿದ್ದಾರೆ ಎನ್ನುವ ಗಾಳಿ ಸುದ್ದಿಯೊಂದು ಹಬ್ಬಿದೆ. ಭಾನುವಾರದ ಎಪಿಸೋಡ್...

ತರಬೇತಿ ವಿಮಾನ ತುರ್ತು ಭೂಸ್ಪರ್ಶ; ತಪ್ಪಿದ ಭಾರೀ ಅನಾಹುತ

newsics.com ಬೆಳಗಾವಿ: ತರಬೇತಿ ವಿಮಾನವೊಂದು ತಾಂತ್ರಿಕ ತೊಂದರೆಯಿಂದ  ತುರ್ತು ಭೂಸ್ಪರ್ಶ ಆಗಿದೆ. ಈ ಘಟನೆ ಬೆಳಗಾವಿ ತಾಲೂಕಿನ ಹೊನ್ನಿಹಾಳ ಹೊರವಲಯದಲ್ಲಿ ನಡೆದಿದೆ. ರೆಡ್‌ಬರ್ಡ್  ಸಂಸ್ಥೆಗೆ ಸೇರಿದ VT- RBF ತರಬೇತಿ ವಿಮಾನ ಇದಾಗಿದ್ದು, ಘಟನೆ ನಡೆದ...

ಆಪರೇಷನ್ ಪಠ್ಯ ಪುಸ್ತಕ; ಪಠ್ಯಗಳ ಪರಿಷ್ಕರಿಸ್ತೇವೆಂದ ಶಿಕ್ಷಣ ಸಚಿವ ಮಧು ಬಂಗಾರಪ್ಪ

newsics.com ಬೆಂಗಳೂರು:  ಪಠ್ಯ ಪುಸ್ತಕ  ಪರಿಷ್ಕರಣೆ ನಾವು ಮಾಡ್ತೀವಿ. ಪ್ರಣಾಳಿಕೆಯಲ್ಲಿ ಕೊಟ್ಟ ಮಾತಿನಂತೆ ಪರಿಷ್ಕರಣೆ ಮಾಡ್ತೀವಿ. ಮಕ್ಕಳ ಮನಸ್ಸಿನಲ್ಲಿ ಕಲ್ಮಶ ತುಂಬುವ ಪಠ್ಯ ಕೈ ಬಿಡ್ತೀವಿ. ಈ ಬಗ್ಗೆ ಸಿಎಂ, ಡಿಸಿಎಂ ಜೊತೆ ಚರ್ಚಿಸಿ...
- Advertisement -
error: Content is protected !!