Monday, October 2, 2023

ಮರುಜನ್ಮ ನೀಡುವುದಾಗಿ ವ್ಯಕ್ತಿ ಕೊಂದ ಮಾಂತ್ರಿಕನಿಂದ ದಿನವಿಡೀ ಪೂಜೆ, ಬದುಕದ್ದಕ್ಕೆ ಪ್ರತಿಭಟನೆ

Follow Us

newsics.com

ಕರೀಂನಗರ(ತೆಲಂಗಾಣ): ಮಾಟ ಮಂತ್ರದ ಮೂಲಕ ವ್ಯಕ್ತಿಯೊಬ್ಬನನ್ನು ಕೊಂದಿದ್ದಾಗಿ ಹೇಳಿಕೊಂಡಿರುವ ಡೋಂಗಿ ಬಾಬಾನನ್ನು ಪೊಲೀಸರು ಬಂಧಿಸಿದ್ದಾರೆ.

ಕೊಂದ ವ್ಯಕ್ತಿಗೆ ಮರುಜನ್ಮ ನೀಡುವುದಾಗಿ ಹೇಳಿ ಆತನನ್ನು ಕೊಂದಿದ್ದಾಗಿ ಪೊಲೀಸ್ ವಿಚಾರಣೆ ವೇಳೆ ಬಾಬಾ ಹೇಳಿದ್ದಾನೆ. ವ್ಯಕ್ತಿ ಮೃತನಾದ ಬಳಿಕ ಆತನನ್ನು ಬದುಕಿಸಲು ಬೆಳಗ್ಗೆಯಿಂದ ಸಂಜೆವರೆಗೂ ಪೂಜೆ ಮಾಡಿದರೂ ಆತನನ್ನು ಬದುಕಿಸಲು ಸಾಧ್ಯವಾಗಲಿಲ್ಲ ಎಂದು ಬಾಬಾ ಪುಲ್ಲಯ್ಯ ಹೇಳಿದ್ದಾನೆ.

ಇಂತಹ ವಿಚಿತ್ರ ಘಟನೆ ತೆಲಂಗಾಣದ ಜಗ್ತಿಯಲ್ ಜಿಲ್ಲೆಯಲ್ಲಿ ನಡೆದಿದೆ. ಮಾಹಿತಿ ತಿಳಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಜಗ್ಟೇಲ್ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಮಂತ್ರವಾದಿ ಪುಲ್ಲಯ್ಯನನ್ನು ವಿಚಾರಣೆಗೊಳಪಡಿಸಿದಾಗ ರಮೇಶ್ ಗೆ ಮರುಜನ್ಮ ನೀಡುವ ಭರವಸೆ ನೀಡಿ, ಆತನನ್ನು ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ.
ಟಿಆರ್ ನಗರ ನಿವಾಸಿ ರಮೇಶ್ ಮಾಟ- ಮಂತ್ರಕ್ಕೆ ಬಲಿಯಾದ ವ್ಯಕ್ತಿ. ಪುಲ್ಲಯ್ಯ ಎಂಬಾತ ಮಾಟ- ಮಂತ್ರ ಮಾಡಿ ರಮೇಶ್ ನನ್ನು ಕೊಲೆ ಮಾಡಿದ್ದಾನೆ ಎಂದು ಮೃತನ ಕುಟುಂಬ ಸದಸ್ಯರು ಆರೋಪಿಸಿದ್ದಾರೆ.
ಘಟನೆಯಿಂದ ಆಕ್ರೋಶಗೊಂಡಿರುವ ರಮೇಶ್ ಕುಟುಂಬ ಸದಸ್ಯರು ಕರೀಂನಗರ ಹೆದ್ದಾರಿಯಲ್ಲಿ ಪುಲ್ಲಯ್ಯ ವಿರುದ್ಧ ಪ್ರತಿಭಟನೆ ನಡೆಸಿದ್ದಲ್ಲದೆ, ಆತನ ಮನೆಯ ಮೇಲೆ ದಾಳಿ ಮಾಡಿದ್ದಾರೆ‌.

ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಪ್ರೇಮಿಗಳು ಆತ್ಮಹತ್ಯೆ

ಆ.16ರಿಂದ ಬೆಂಗಳೂರು- ಕಾರವಾರ ರೈಲು ಸಂಚಾರ ಪುನಾರಂಭ

ಆ.19ರಿಂದ ದ್ವಿತೀಯ ಪಿಯು ಪೂರಕ ಪರೀಕ್ಷೆ : 187 ಕೇಂದ್ರಗಳಲ್ಲಿ ಸಿದ್ಧತೆ

ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳ ತಯಾರಿಕೆ, ಮಾರಾಟ ನಿಷೇಧ -ಕೇಂದ್ರ ಸರ್ಕಾರ

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನದಲ್ಲಿ ಉಸಿರಾಟ ಸ್ಥಗಿತವಾಗಿದ್ದ ಮಗುವಿಗೆ ಮರುಜೀವ ನೀಡಿದ ವೈದ್ಯ, ಐಎಎಸ್ ಅಧಿಕಾರಿ!

newsics.com ನವದೆಹಲಿ: ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಮಗುವಿಗೆ ವಿಮಾನದಲ್ಲಿ ಪ್ರಯಾಣಿಸುವ ವೇಳೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು, ವಿಮಾನದಲ್ಲಿದ್ದ ಐಎಎಸ್ ಅಧಿಕಾರಿ ಹಾಗೂ ವೈದ್ಯರೊಬ್ಬರು ಚಿಕಿತ್ಸೆ...

ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಅ.1 ರಿಂದ ಜಾರಿ!

newsics.com ಬೆಂಗಳೂರು: ಐದು ವರ್ಷಗಳ ಬಳಿಕ ರಾಜ್ಯದಲ್ಲಿ ಸ್ಥಿರಾಸ್ತಿಗಳ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಲಾಗಿದೆ. ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಭಾನುವಾರದಿಂದ (ಅ.1) ಜಾರಿಯಾಗಿದೆ. ಹೊಸ ದರಗಳ ಪ್ರಕಾರ ದಸ್ತಾವೇಜುಗಳ ನೋಂದಣಿಗೆ ನೋಂದಣಿ ಮತ್ತು ಮುದ್ರಾಂಕ...

ವಿದ್ಯುತ್ ಲೈನ್ ತಗುಲಿ 5 ಜಾನುವಾರು ಸ್ಥಳದಲ್ಲಿಯೇ ಸಾವು

newsics.com ಕೊಡಗು: ವಿದ್ಯುತ್ ಲೈನ್ ತುಂಡಾಗಿ ಬಿದ್ದ ಹಿನ್ನೆಲೆ ಐದು ಜಾನುವಾರುಗಳು ಸ್ಥಳದಲ್ಲಿಯೇ ಸಾವನ್ನಪ್ಪಿದೆ. ದಾರುಣ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಮತ್ತೂರಿನಲ್ಲಿ ನಡೆದಿದೆ. ಮತ್ತೂರು ಗ್ರಾಮದ ಅಲೇಮಾಡ ನಾಣಯ್ಯ ಅವರು ಶ್ರೀನಿವಾಸ್ ಎಂಬುವರ...
- Advertisement -
error: Content is protected !!