Wednesday, May 31, 2023

ಅಪಹರಣಕಾರನಿಂದ ಮಗು ಬಿಡಿಸಿಕೊಂಡ ತಾಯಿ!

Follow Us

ಶಿವಮೊಗ್ಗ: ಮಗು ಅಪಹರಿಸಲು ಯತ್ನಿಸಿದವನಿಗೆ ಆ ಮಗುವಿನ ತಾಯಿಯೇ ತಕ್ಕ ಪಾಠ ಕಲಿಸಿದ್ದಾರೆ.
ತೀರ್ಥಹಳ್ಳಿ ಹೊರವಲಯದ ಮೇಲಿನಕುರುವಳ್ಳಿಯಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ತಾಯಿ ಕೃಷ್ಣವೇಣಿ ಅಡುಗೆ ಮಾಡುತ್ತಿದ್ದಾಗ ನಾಲ್ಕು ವರ್ಷದ ಹೆಣ್ಣುಮಗು ಹಾಲ್ನಲ್ಲಿ ಆಟವಾಡುತ್ತಿತ್ತು. ಈ ವೇಳೆ ಅಪರಿಚಿತನೊಬ್ಬ ಆ ಮಗು ಅಪಹರಿಲು ಯತ್ನಿಸಿದ್ದಾನೆ. ಆಗ ಹಾಲ್ನಿಂದ ಮಗು ಕೂಗುವುದನ್ನು ಕೇಳಿ ತಾಯಿ ಓಡಿ ಬಂದಿದ್ದು, ಆತ ಮಗುವನ್ನು ಎತ್ತಿಕೊಂಡು ಓಡುತ್ತಿದ್ದ. ತಡೆಯಲು ಯತ್ನಿಸಿದ ಕೃಷ್ಣವೇಣಿ ಅವರನ್ನು ದೂಡಿದ. ಕೂಡಲೇ ಅಡುಗೆ ಮನೆಯಲ್ಲಿದ್ದ ಈಳಿಗೆ ಮಣೆಯಿಂದ ಅಪಹರಣಕಾರನ ಕೈಗೆ ಹೊಡೆದಿದ್ದಾರೆ. ಇದರಿಂದ ನೋವಾಗಿ ಮಗುವನ್ನು ಬಿಟ್ಟು ಪರಾರಿಯಾಗಿದ್ದಾನೆ.

ಮತ್ತಷ್ಟು ಸುದ್ದಿಗಳು

vertical

Latest News

ಆದಾಯ ತೆರಿಗೆ ಅಧಿಕಾರಿಗಳಂತೆ ವೇಷ ಧರಿಸಿ ಚಿನ್ನ ಕದ್ದ ಕಳ್ಳರು

newsics.com ಹೈದರಾಬಾದ್: ಆದಾಯ ತೆರಿಗೆ ಅಧಿಕಾರಿಗಳಂತೆ ವೇಷ ಧರಿಸಿ ಹೈದರಾಬಾದ್‌ನ ಅಂಗಡಿಯೊಂದರಲ್ಲಿ 60 ಲಕ್ಷ ರೂ. ಮೌಲ್ಯದ ಚಿನ್ನದ ಬಿಸ್ಕತ್‌ಗಳನ್ನು ಕದ್ದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ...

ಮಲಯಾಳಂ ಚಿತ್ರರಂಗದ ಖ್ಯಾತ ನಟ ಹರೀಶ್ ಪೆಂಗನ್ ನಿಧನ

newsics.com ಮಲಯಾಳಂ ಚಿತ್ರರಂಗದ ಖ್ಯಾತ ಕಲಾವಿದ ಹರೀಶ್ ಪೆಂಗನ್ ಅವರು ಮಂಗಳವಾರ (ಮೇ 30) ನಿಧನ ಹೊಂದಿದ್ದಾರೆ. ಅವರಿಗೆ 49 ವರ್ಷ ವಯಸ್ಸಾಗಿತ್ತು. ಹರೀಶ್ ಅವರು ಕಳೆದ ಕೆಲ ವರ್ಷಗಳಿಂದ ಯಕೃತ್ತಿನ ಸಮಸ್ಯೆಯಿಂದ ಬಳಲುತ್ತಿದ್ದರು....

ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ದುಷ್ಕೃತ್ಯ ಸಂಚು: ದಕ್ಷಿಣ ಕನ್ನಡದ 16 ಕಡೆ NIA ದಾಳಿ

newsics.com ಮಂಗಳೂರು: ಪ್ರಧಾನಿ ಮೋದಿಯವರ ಬಿಹಾರ ಕಾರ್ಯಕ್ರಮದ ವೇಳೆ ದುಷ್ಕೃತ್ಯ ಸಂಚು ರೂಪಿಸಿದ್ದ ಹಿನ್ನೆಲೆಯಲ್ಲಿ ಬುಧವಾರ ರಾಷ್ಟ್ರೀಯ ತನಿಖಾ ದಳ (ಎನ್ಐಎ) ದಕ್ಷಿಣ ಕನ್ನಡ ಜಿಲ್ಲೆಯ 16‌ ಕಡೆ ದಾಳಿ‌ ನಡೆಸಿದೆ. ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ,...
- Advertisement -
error: Content is protected !!