Sunday, October 1, 2023

ಆರೋಪ ಸಾಬೀತಾದರೆ ಗೋಲಿಬಾರ್ ಮೃತರ ಕುಟುಂಬಕ್ಕೆ ಪರಿಹಾರವಿಲ್ಲ- ಸಿಎಂ

Follow Us

ಮಂಗಳೂರು: ಗಲಭೆಯಲ್ಲಿ ಭಾಗಿಯಾಗಿರುವುದು ಸಾಬೀತಾದರೆ ಗೋಲಿಬಾರ್ ನಲ್ಲಿ ಮೃತಪಟ್ಟವರ ಕುಟುಂಬಕ್ಕೆ ನಯಾಪೈಸೆ ಪರಿಹಾರವನ್ನೂ ಕೊಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಮಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರು ಗಲಭೆಯಲ್ಲಿ ಪಾಲ್ಗೊಂಡಿರುವುದು ದೃಢಪಟ್ಟರೆ ಪರಿಹಾರ ಘೋಷಣೆಯನ್ನು ಹಿಂಪಡೆಯುವುದಾಗಿ ತಿಳಿಸಿದರು.

ಗಲಭೆ ಪೂರ್ವನಿಯೋಜಿತ ಎಂಬುದಕ್ಕೆ ಸಾಕ್ಷಿಯಾಗಿ ಸಿಸಿಟಿವಿ ಕ್ಯಾಮರಾ ದೃಶ್ಯಗಳನ್ನು ಮಂಗಳೂರು ಪೊಲೀಸರು ಫೇಸ್ಬುಕ್ ಪೇಜ್ನಲ್ಲಿ ಪೋಸ್ಟ್ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಮೃತರ ವಿರುದ್ಧವೂ ಪ್ರಕರಣ ದಾಖಲಾಗಿದೆ.

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಗೋಲಿಬಾರ್ ಗೆ ಜಲೀಲ್ ಕುದ್ರೋಳಿ(49) ಮತ್ತು ನೌಶೀನ್ (23) ಎಂಬುವರು ಮೃತಪಟ್ಟಿದ್ದರು. ಬಳಿಕ ಮೃತರ ಕುಟುಂಬಕ್ಕೆ ಸರ್ಕಾರ ತಲಾ 10 ಲಕ್ಷ ರೂ. ಪರಿಹಾರ ಘೋಷಣೆ ಮಾಡಿತ್ತು.

ಮತ್ತಷ್ಟು ಸುದ್ದಿಗಳು

vertical

Latest News

ಹಳ್ಳಕ್ಕೆ ಉರುಳಿದ ಬಸ್: 8‌ ಮಂದಿ‌ ಸಾವು, 25 ಪ್ರಯಾಣಿಕರಿಗೆ ಗಾಯ

newsics.com ಚೆನ್ನೈ: ತಮಿಳುನಾಡಿನ ನೀಲಗಿರಿ ಬೆಟ್ಟದಲ್ಲಿ ಶನಿವಾರ ಪ್ರವಾಸಿ ಬಸ್ ಹಳ್ಳಕ್ಕೆ ಬಿದ್ದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, 25 ಮಂದಿ ಗಾಯಗೊಂಡಿದ್ದಾರೆ. ಮೃತರಲ್ಲಿ ನಾಲ್ವರು ಮಹಿಳೆಯರು ಮತ್ತು...

ಅಕ್ಟೋಬರ್‌ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ತಾಪಮಾನ ಸಾಧ್ಯತೆ!

newsics.com ನವದೆಹಲಿ: ದೇಶದ ಬಹುತೇಕ ಭಾಗಗಳಲ್ಲಿ ಅಕ್ಟೋಬರ್‌ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನ ಮತ್ತು ಸಾಮಾನ್ಯಕ್ಕಿಂತ ಹೆಚ್ಚು ಕನಿಷ್ಠ ತಾಪಮಾನ ದಾಖಲಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶನಿವಾರ ತಿಳಿಸಿದೆ. ತಮಿಳುನಾಡು, ಕರಾವಳಿ...

ಕರ್ನಾಟಕದಲ್ಲಿ ಈ ಬಾರಿ ಶೇ. 25ರಷ್ಟು ಮಳೆಯ ಕೊರತೆ

newsics.com ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಅವಧಿಯಲ್ಲಿ ಈ ವರ್ಷ ಶೇ 25ರಷ್ಟು ಮಳೆ ಕೊರತೆಯಾಗಿದೆ. ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗಿನ ನಾಲ್ಕು ತಿಂಗಳಲ್ಲಿ ಒಟ್ಟು 845 ಮಿ.ಮೀ ಮಳೆ ಸುರಿಯಬೇಕಿತ್ತು. ಆದರೆ, 635...
- Advertisement -
error: Content is protected !!