Saturday, December 2, 2023

ಉಪಚುನಾವಣೆ; ಬಿಜೆಪಿಗೆ ಮೂರು, ಕಾಂಗ್ರೆಸ್ ಗೆ 1 ಗೆಲುವು

Follow Us

ಬೆಂಗಳೂರು; ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಯಲ್ಲಾಪುರದಲ್ಲಿ ಶಿವರಾಮ್ ಹೆಬ್ಬಾರ್ , ಕೆ.ಆರ್.ಪೇಟೆಯಲ್ಲಿ ಬಿಜೆಪಿಯ ನಾರಾಯಣಗೌಡ , ಚಿಕ್ಕಬಳ್ಳಾಪುರದಲ್ಲಿ ಡಾ.ಕೆ.ಸುಧಾಕರ್ ಗೆಲುವಿನ ನಗೆ ಬೀರಿದ್ದಾರೆ.

ಈ ಕುರಿತು ರಾಜ್ಯ ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಹೊರಬೀಳಬೇಕಿದೆ. ಚಿಕ್ಕಬಳ್ಳಾಪುರದಲ್ಲಿ ಇದೇ ಮೊದಲ ಬಾರಿಗೆ ಕಮಲ ಅರಳಿದಂತಾಗಿದೆ.

ಹುಣಸೂರು ಕಾಂಗ್ರೆಸ್ ನ ಎಸ್.ಪಿ.ಮಂಜುನಾಥ್ 25,147 ಮತಗಳ ಅಂತರದಿಂದ ಭಾರಿ ಗೆಲುವು ದಾಖಲಿಸಿದ್ದು, ಅನರ್ಹ ಶಾಸಕ ಎಚ್. ವಿಶ್ವನಾಥ್ ಗೆ ಹೀನಾಯ ಸೋಲು ಎದುರಾಗಿದೆ.

ಯಶವಂತಪುರದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮತ್ತೆ ಹಣಾಹಣಿ ಏರ್ಪಟ್ಟಿದ್ದು, ಬಿಜೆಪಿ ಸುಮಾರು 2 ಸಾವಿರ ಮತಗಳಿಂದ ಮುನ್ನಡೆ ಸಾಧಿಸಿದೆ.

ಉಳಿದಂತೆ ಮಹಾಲಕ್ಷ್ಮೀ ಲೇಔಟ್ ನಲ್ಲಿ ಬಿಜೆಪಿ ಗೋಪಾಲಯ್ಯ, ಕೆ.ಆರ್.ಪುರದಲ್ಲಿ ಭೈರತಿ ಬಸವರಾಜು, ವಿಜಯನಗರದಲ್ಲಿ ಆನಂದ್ ಸಿಂಗ್, ಗೋಕಾಕದಲ್ಲಿ ರಮೇಶ್ ಜಾರಕಿಹೊಳಿ, ಅಥಣಿಯಲ್ಲಿ ಮಹೇಶ್ ಕುಮಟಳ್ಳಿ, ಕಾಗವಾಡದಲ್ಲಿ ಶ್ರೀಮಂತ್ ಪಾಟೀಲ್, ಹಿರೇಕೇರೂರಿನಲ್ಲಿ ಬಿ.ಸಿ.ಪಾಟೀಲ್, ರಾಣೆಬೆನ್ನೂರಿನಲ್ಲಿ ಅರುಣ್ ಕುಮಾರ್ ಪೂಜಾರ ಮುನ್ನಡೆ ಸಾಧಿಸಿದ್ದಾರೆ.

ಶಿವಾಜಿನಗರದಲ್ಲಿ ಕಾಂಗ್ರೆಸ್ ನ ರಿಜ್ವಾದ್ ಅರ್ಷದ್,ಮುನ್ನಡೆಯಲ್ಲಿದ್ದಾರೆ. ಹೊಸಕೋಟೆಯ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಮುಂದಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಆಸ್ಟ್ರೇಲಿಯಾದಲ್ಲಿ ಪಾಕಿಸ್ತಾನಕ್ಕೆ ಅವಮಾನ: ಟ್ರಕ್‌’ಗೆ ತಾವೇ ಲಗೇಜ್‌ ಲೋಡ್‌ ಮಾಡಿದ ಆಟಗಾರರು

newsics.com ಸಿಡ್ನಿ: ಆಸ್ಟ್ರೇಲಿಯಾ ಕ್ರಿಕೆಟ್ ಪ್ರವಾಸಕ್ಕೆ ತೆರಳಿರುವ ಪಾಕಿಸ್ತಾನ ಕ್ರಿಕೆಟ್ ತಂಡದ ಆಟಗಾರರು ವಿಮಾನ ನಿಲ್ದಾಣದಲ್ಲಿ ತಮ್ಮ ಲಗೇಜ್ ಅನ್ನು ತಾವೇ ಟ್ರಕ್ ತುಂಬುತ್ತಿರುವ ವಿಡಿಯೋವೊಂದು ವೈರಲ್...

ರಾಜ್ಯದ 36 ಲಕ್ಷ ಮತದಾರರಿಗೆ ಚುನಾವಣಾ ಆಯೋಗ ನೋಟಿಸ್

newsics.com ಬೆಂಗಳೂರು: ಮತದಾರರ ಪಟ್ಟಿಯಲ್ಲಿ ಎರಡು ಕಡೆ ಹೆಸರಿರುವ ಅಥವಾ ಹೆಸರು ನಕಲು ಮಾಡಿರುವ 36 ಲಕ್ಷ ಮತದಾರರಿಗೆ ರಾಜ್ಯ ಚುನಾವಣಾ ಆಯೋಗವು ಭಾರತೀಯ ಅಂಚೆ ಮೂಲಕ ನೋಟಿಸ್ ನೀಡುವ ಪ್ರಕ್ರಿಯೆಯನ್ನು ಆರಂಭಿಸಿದೆ. ಹೆಚ್ಚುವರಿಯಾಗಿ, ಮುಂದಿನ...

ಅಸಲಿ ಚಿನ್ನದ ಜಾಗದಲ್ಲಿ ನಕಲಿ ಬಂಗಾರವಿಟ್ಟು ಗ್ರಾಹಕರಿಗೆ ವಂಚಸಿದ ಬ್ಯಾಂಕ್ ಸಿಬ್ಬಂದಿ

newsics.com ಚಿಕ್ಕಮಗಳೂರು: ಗ್ರಾಹಕರಿಗೆ ಬ್ಯಾಂಕ್‌ ಸಿಬ್ಬಂದಿ ಕೋಟ್ಯಂತರ ರೂಪಾಯಿ ವಂಚಿಸಿರುವ ಘಟನೆ ಚಿಕ್ಕಮಗಳೂರು ನಗರದ ಐ.ಜಿ. ರಸ್ತೆಯಲ್ಲಿರುವ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ನಡೆದಿದೆ. 6 ಕೋಟಿಗೂ ಅಧಿಕ ಹಣ ದುರುಪಯೋಗದ ಆರೋಪ...
- Advertisement -
error: Content is protected !!