ಬೆಂಗಳೂರು: ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಬ್ ಹೆಬ್ಬಾರ್ 27 ಸಾವಿರ ಮತಗಳ ಅಂತರದಿಂದ ಗೆಲುವಿನತ್ತ ಓಟ ಬೆಳೆಸಿದ್ದು, ಈ ಕುರಿತು ಅಧಿಕೃತ ಘೋಷಣೆಯಷ್ಟೇ ಬಾಕಿ ಉಳಿದಿದೆ.
ಉಳಿದಂತೆ ಮಹಾಲಕ್ಷ್ಮೀ ಲೇಔಟ್ ನಲ್ಲಿ ಬಿಜೆಪಿ ಗೋಪಾಲಯ್ಯ, ಕೆ.ಆರ್.ಪುರದಲ್ಲಿ ಭೈರತಿ ಬಸವರಾಜು, ವಿಜಯನಗರದಲ್ಲಿ ಆನಂದ್ ಸಿಂಗ್, ಗೋಕಾಕದಲ್ಲಿ ರಮೇಶ್ ಜಾರಕಿಹೊಳಿ, ಅಥಣಿಯಲ್ಲಿ ಮಹೇಶ್ ಕುಮಟಳ್ಳಿ, ಕಾಗವಾಡದಲ್ಲಿ ಶ್ರೀಮಂತ್ ಪಾಟೀಲ್, ಹಿರೇಕೇರೂರಿನಲ್ಲಿ ಬಿ.ಸಿ.ಪಾಟೀಲ್, ರಾಣೆಬೆನ್ನೂರಿನಲ್ಲಿ ಅರುಣ್ ಕುಮಾರ್ ಪೂಜಾರ, ಚಿಕ್ಕಬಳ್ಳಾಪುರದಲ್ಲಿ ಡಾ.ಸುಧಾಕರ್, ಕೆ.ಆರ್.ಪೇಟೆಯಲ್ಲಿ ನಾರಾಯಣಗೌಡ ಮುನ್ನಡೆ ಸಾಧಿಸಿದ್ದಾರೆ.
ಶಿವಾಜಿನಗರದಲ್ಲಿ ಕಾಂಗ್ರೆಸ್ ನ ರಿಜ್ವಾದ್ ಅರ್ಷದ್, ಹುಣಸೂರಿನಲ್ಲಿ ಎಸ್.ಪಿ.ಮಂಜುನಾಥ್ ಮುನ್ನಡೆಯಲ್ಲಿದ್ದಾರೆ. ಯಶವಂತಪುರದಲ್ಲಿ ಜೆಡಿಎಸ್ ನ ಜವರಾಯಿಗೌಡ ಮುನ್ನಡೆ ಸಾಧಿಸಿದ್ದಾರೆ. ಹೊಸಕೋಟೆಯ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಮುಂದಿದ್ದಾರೆ.