Thursday, March 30, 2023

ಉಪುಚುನಾವಣೆ; 10 ಕ್ಷೇತ್ರಗಳಲ್ಲಿ ಅನರ್ಹರು ಮುನ್ನಡೆ

Follow Us

ಬೆಂಗಳೂರು: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಬೆಳಗ್ಗೆ 9 ಗಂಟೆಯ ವೇಳೆಗೆ ಬಿಜೆಪಿ 10, ಕಾಂಗ್ರೆಸ್ 2 ಹಾಗೂ ಜೆಡಿಎಸ್ 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಈಗಾಗಲೇ ಕೆಲ ಕ್ಷೇತ್ರಗಳಲ್ಲಿ ಮೂರು ಸುತ್ತಿನ ಮತ ಎಣಿಕೆ ನಡೆದಿದೆ. ಮಹಾಲಕ್ಷ್ಮೀ ಲೇಔಟ್ ನಲ್ಲಿ ಬಿಜೆಪಿ ಗೋಪಾಲಯ್ಯ, ಕೆ.ಆರ್.ಪುರದಲ್ಲಿ ಭೈರತಿ ಬಸವರಾಜು, ವಿಜಯನಗರದಲ್ಲಿ ಆನಂದ್ ಸಿಂಗ್, ಗೋಕಾಕದಲ್ಲಿ ರಮೇಶ್ ಜಾರಕಿಹೊಳಿ, ಅಥಣಿಯಲ್ಲಿ ಮಹೇಶ್ ಕುಮಟಳ್ಲೀ, ಕಾಗವಾಡದಲ್ಲಿ ಶ್ರೀಮಂತ್ ಪಾಟೀಲ್, ಹಿರೇಕೇರೂರಿನಲ್ಲಿ ಬಿ.ಸಿ.ಪಾಟೀಲ್, ರಾಣೆಬೆನ್ನೂರಿನಲ್ಲಿ ಅರುಣ್ ಕುಮಾರ್ ಪೂಜಾರ, ಯಲ್ಲಾಪುರದಲ್ಲಿ ಶಿವರಾಮ್ ಹೆಬ್ಬಾರ್ , ಚಿಕ್ಕಬಳ್ಳಾಪುರಲದಲ್ಲಿ ಡಾ.ಸುಧಾಕರ್ ಮುನ್ನಡೆ ಸಾಧಿಸಿದ್ದಾರೆ.

ಶಿವಾಜಿನಗರದಲ್ಲಿ ಕಾಂಗ್ರೆಸ್ ನ ರಿಜ್ವಾದ್ ಅರ್ಷದ್, ಹುಣಸೂರಿನಲ್ಲಿ ಎಸ್.ಪಿ.ಮಂಜುನಾಥ್ ಮುನ್ನಡೆಯಲ್ಲಿದ್ದಾರೆ. ಯಶವಂತಪುರದಲ್ಲಿ ಜೆಡಿಎಸ್ ನ ಜವರಾಯಿಗೌಡ, ಕೆ.ಆರ್.ಪೇಟೆಯಲ್ಲಿ ದೇವರಾಜ್ ಮುನ್ನಡೆ ಸಾಧಿಸಿದ್ದಾರೆ. ಹೊಸಕೋಟೆಯ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ 1,700 ಮತಗಳಿಂದ ಮುಂದಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಪಾಸ್​ವರ್ಡ್​ನಿಂದ ಆನ್ ಆಗುತ್ತೆ ಈ ಗ್ಯಾಸ್ ಸ್ಟವ್!

newsics.com ಬಿಹಾರ: ಪಾಸ್​ವರ್ಡ್​ನಿಂದ ಆನ್ ಆಗುತ್ತೆ ಈ ಗ್ಯಾಸ್ ಸ್ಟವ್. ಈ ಡಿಜಿಟಲ್ ಯುಗದಲ್ಲಿ ಯಾವುದೂ ಅಸಾಧ್ಯವಲ್ಲ ಎಂದೇ ಹೇಳಬಹುದು. ಬಿಹಾರದ 13 ವರ್ಷದ ಪ್ರತ್ಯೂಷ್ ಎಂಬ...

ಸಂಸದ ಸ್ಥಾನ ಕಸಿದುಕೊಂಡ ಕೋಲಾರಕ್ಕೆ ಮತ್ತೆ ರಾಹುಲ್‌ ಗಾಂಧಿ

newsics.com ಬೆಂಗಳೂರು: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ 2019ರ ಲೋಕಸಭೆ  ಚುನಾವಣೆ ಸಂದರ್ಭದಲ್ಲಿ ಕೋಲಾರದಲ್ಲಿ ತಾವು ಮಾಡಿದ ಭಾಷಣಕ್ಕೆ ಮಾನನಷ್ಟ ಮೊಕದ್ದಮೆ ಗುರಿಯಾಗಿದ್ದು, ಸದ್ಯ ಸಂಸತ್‌ ಸದಸ್ಯತ್ವ ಸ್ಥಾನದಿಂದಲೇ ಅನರ್ಹಗೊಂಡಿದ್ದಾರೆ. ಈಗ ಕರ್ನಾಟಕ ವಿಧಾನಸಭಾ ಚುನಾವಣೆ...

ಈ ಬಾರಿ ಕಾಂಗ್ರೆಸ್​ಗೆ 115ಕ್ಕೂ ಹೆಚ್ಚು ಸ್ಥಾನ, BJPಗೆ 68 :ಎಬಿಪಿಸಿ ಓಟರ್ ಸಮೀಕ್ಷೆ

newsics.com ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ 115ಕ್ಕೂ ಹೆಚ್ಚು ಸ್ಥಾನ ಗಳಿಸಲಿದೆ. ಜೆಡಿಎಸ್ 23 ಸ್ಥಾನಗಳನ್ನು ಪಡೆಯಬಹುದು  ಎಂದು ಎಬಿಪಿ ಸಿಓಟರ್ ಸಮೀಕ್ಷೆ ಬುಧವಾರ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್...
- Advertisement -
error: Content is protected !!