Wednesday, May 31, 2023

ಕಟೀಲು ಮೇಳದಿಂದ ಭಾಗವತ ಪಟ್ಲ ಸತೀಶ್ ಶೆಟ್ಟಿ ಹೊರಕ್ಕೆ

Follow Us

ಮಂಗಳೂರು: ಕಟೀಲು ಮೇಳದಿಂದ ಪ್ರಸಿದ್ಧ ಭಾಗವತರಾದ ಪಟ್ಲ ಸತೀಶ ಶೆಟ್ಟಿ ಅವರನ್ನು ಹೊರಹಾಕಲಾಗಿದೆ.
ಏಲಂ ಕ್ರಮದ ಬಳಿಕ ಶುಕ್ರವಾರ ರಾತ್ರಿ ಕಟೀಲು ದುರ್ಗಾಪರಮೇಶ್ವರಿ ದೇಗುಲ ಆವರಣದಲ್ಲಿ ನಡೆದ ಮೊದಲ ಸೇವೆಯಾಟದಲ್ಲಿ ಭಾಗವತಿಕೆ ಮಾಡುತ್ತಿದ್ದ ಸತೀಶ್ ಶೆಟ್ಟಿ ಅವರನ್ನು ಅವಮಾನಿಸುವ ರೀತಿಯಲ್ಲಿ ಭಾಗವತ ಸ್ಥಾನದಿಂದ ಎಬ್ಬಿಸಿ ಮೇಳದ ವ್ಯವಸ್ಥಾಪಕ ಕಲ್ಲಾಡಿ ದೇವಿ ಪ್ರಸಾದ್ ಶೆಟ್ಟಿ ಮತ್ತಿತರರು ಸೇರಿ ಹೊರಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.
ಏಲಂ ವಿಚಾರದಲ್ಲಿ ಪಟ್ಲ ಸತೀಶ ಶೆಟ್ಟಿ ಕಲಾವಿದರ ಪರ ಇದ್ದಾರೆಂಬ ಕಾರಣಕ್ಕೆ ಅವರನ್ನು ಮೇಳದಿಂದ ಹೊರಹಾಕಲಾಗಿದೆ ಎಂಬ ಅಂಶ ಚರ್ಚೆಗೊಳಗಾಗಿದೆ. ಸತೀಶ್ ಶೆಟ್ಟಿ ಅವರನ್ನು ಮೇಳದಿಂದ ಹೊರಹಾಕಿದ್ದಕ್ಕೆ ಅಸ್ರಣ್ಣ ಕುಟುಂಬಸ್ಥರು ಹಾಗೂ ಮೇಳದ ಆಡಳಿತ ವರ್ಗದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಈ ಬಗ್ಗೆ ಚರ್ಚಿಸಲು ಸತೀಶ್ ಶೆಟ್ಟಿ ಅವರಿಂದ ಸ್ಥಾಪಿತವಾದ ಯಕ್ಷಧ್ರುವ ಫೌಂಡೇಷನ್‍ನಿಂದ ಪದಾಧಿಕಾರಿಗಳ ತುರ್ತು ಸಭೆ ಕರೆಯಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

Weekend With Ramesh; ಸಾಧಕರ ಕುರ್ಚಿಯಲ್ಲಿ ಡಿಕೆ ಶಿವಕುಮಾರ್!

newsics.com ಬೆಂಗಳೂರು: ಖಾಸಗಿವಾಹಿನಿಯಲ್ಲಿ ವೀಕೆಂಡ್ ವಿತ್ ರಮೇಶ್ ಐದನೇ ಸೀಸನ್​ನ ಈ ವಾರದ ಅತಿಥಿಯಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಗಮಿಸಲಿದ್ದಾರೆ ಎನ್ನುವ ಗಾಳಿ ಸುದ್ದಿಯೊಂದು ಹಬ್ಬಿದೆ. ಭಾನುವಾರದ ಎಪಿಸೋಡ್...

ತರಬೇತಿ ವಿಮಾನ ತುರ್ತು ಭೂಸ್ಪರ್ಶ; ತಪ್ಪಿದ ಭಾರೀ ಅನಾಹುತ

newsics.com ಬೆಳಗಾವಿ: ತರಬೇತಿ ವಿಮಾನವೊಂದು ತಾಂತ್ರಿಕ ತೊಂದರೆಯಿಂದ  ತುರ್ತು ಭೂಸ್ಪರ್ಶ ಆಗಿದೆ. ಈ ಘಟನೆ ಬೆಳಗಾವಿ ತಾಲೂಕಿನ ಹೊನ್ನಿಹಾಳ ಹೊರವಲಯದಲ್ಲಿ ನಡೆದಿದೆ. ರೆಡ್‌ಬರ್ಡ್  ಸಂಸ್ಥೆಗೆ ಸೇರಿದ VT- RBF ತರಬೇತಿ ವಿಮಾನ ಇದಾಗಿದ್ದು, ಘಟನೆ ನಡೆದ...

ಆಪರೇಷನ್ ಪಠ್ಯ ಪುಸ್ತಕ; ಪಠ್ಯಗಳ ಪರಿಷ್ಕರಿಸ್ತೇವೆಂದ ಶಿಕ್ಷಣ ಸಚಿವ ಮಧು ಬಂಗಾರಪ್ಪ

newsics.com ಬೆಂಗಳೂರು:  ಪಠ್ಯ ಪುಸ್ತಕ  ಪರಿಷ್ಕರಣೆ ನಾವು ಮಾಡ್ತೀವಿ. ಪ್ರಣಾಳಿಕೆಯಲ್ಲಿ ಕೊಟ್ಟ ಮಾತಿನಂತೆ ಪರಿಷ್ಕರಣೆ ಮಾಡ್ತೀವಿ. ಮಕ್ಕಳ ಮನಸ್ಸಿನಲ್ಲಿ ಕಲ್ಮಶ ತುಂಬುವ ಪಠ್ಯ ಕೈ ಬಿಡ್ತೀವಿ. ಈ ಬಗ್ಗೆ ಸಿಎಂ, ಡಿಸಿಎಂ ಜೊತೆ ಚರ್ಚಿಸಿ...
- Advertisement -
error: Content is protected !!