Thursday, December 7, 2023

ನಮ್ಮನ್ನು ನಂಬಿದ ಅನರ್ಹರು ಹುಚ್ಚರು: ಬೇಸರ ವ್ಯಕ್ತಪಡಿಸಿದ ಸಿಎಂ ಬಿಎಸ್ ವೈ

Follow Us

ಹುಬ್ಬಳ್ಳಿ: ನಮ್ಮನ್ನು ನಂಬಿ ಅನರ್ಹ ಶಾಸಕರು ಮೂರ್ಖರು, ಹುಚ್ಚರು ಆಗಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಶುಕ್ರವಾರ ನಡೆದ ಉಪಚುನಾವಣೆಯ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷದಲ್ಲಿರಬೇಕಾಗಿದ್ದ ನಾವು ಅವರ ತ್ಯಾಗದಿಂದಾಗಿ ಆಡಳಿತ ಪಕ್ಷದಲ್ಲಿದ್ದೇವೆ. ಅವರ ಈ ತ್ಯಾಗವನ್ನೂ ಮರೆತು ಪಕ್ಷದ ಮುಖಂಡರು ಅನರ್ಹರ ಬಗ್ಗೆ ಮನಬಂದಂತೆ ಮಾತನಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅನರ್ಹರ ಪರ ಇನ್ನೆರಡು ದಿನಗಳಲ್ಲಿ ಸುಪ್ರೀಂ ತೀರ್ಪು ನೀಡುವ ಸಾಧ್ಯತೆಯಿದೆ. ಅನರ್ಹರು ಶೇ.90ರಷ್ಟು ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಾರೆ. ಆದರೆ, ಅನರ್ಹರ ಬಗ್ಗೆ ತೀರ್ಮಾನ ತೆಗೆದುಕೊಳ್ಳುವ ಸ್ಥಿತಿಯಲ್ಲಿ ನಾನಿಲ್ಲ. ಅವರನ್ನು ನಂಬಿಸಿ ರಾಜೀನಾಮೆ ಕೊಡಿಸಿ ತಪ್ಪು ಮಾಡಿದೆ ಎನಿಸುತ್ತಿದೆ ಎಂದು ನೋವು ಹೊರಹಾಕಿದರು. ನನಗೆ ಸಿಎಂಗಿರಿ ಬೇಕಾಗಿಲ್ಲ ಎಂದೂ ಬಿಎಸ್ ವೈ ಈ ಸಂದರ್ಭದಲ್ಲಿ ಹೇಳಿದರು.

ಮತ್ತಷ್ಟು ಸುದ್ದಿಗಳು

vertical

Latest News

ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಪೊಲೀಸ್ ವಶಕ್ಕೆ

Newsics.com ಕಲಬುರಗಿ : ಅಪಘಾತವನ್ನು ಕೊಲೆ ಯತ್ನ ಎಂದು ಕಥೆ ಕಟ್ಟಿದ್ದ ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ ರನ್ನ ನಗರ ಠಾಣೆಯ ಪೊಲೀಸರು ಮತ್ತೆ ವಶಕ್ಕೆ...

ನಂದಿನಿ ಹಾಲಿನ ದರ ಮತ್ತೆ ಏರಿಕೆ..!!

Newsics.com ಬೆಂಗಳೂರು :  ರಾಜ್ಯದ ಜನತೆಗೆ ಮತ್ತೊಂದು ದರ ಏರಿಕೆಯ ಬಿಸಿ ಕಾದಿದೆ. ಹೌದು, ನಂದಿನಿ ಹಾಲಿನ ದರ ಪರಿಷ್ಕರಣೆಗೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ (KMF) ಚಿಂತನೆ ನಡೆಸಿದೆ. ಈ ಕುರಿತು ಜನವರಿಯಲ್ಲಿ...

ಚಿನ್ನ, ಜಮೀನು, ಬಿಎಂಡಬ್ಲ್ಯೂ ಕಾರಿಗೆ ಬೇಡಿಕೆ : ಕೇರಳದ ವೈದ್ಯೆ ಆತ್ಮಹತ್ಯೆ

Newsics.com ಕೇರಳ : ಕೇರಳದ ತಿರುವನಂತಪುರಂ ಮೆಡಿಕಲ್ ಕಾಲೇಜಿನ ಶಸ್ತ್ರಚಿಕಿತ್ಸಾ ವಿಭಾಗದ ಸ್ನಾತಕೋತ್ತರ ವೈದ್ಯೆ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಆತ್ಮಹತ್ಯೆಗೆ ವರದಕ್ಷಿಣೆಗೆ ಬೇಡಿಕೆ ಇಟ್ಟಿದ್ದೆ ಕಾರಣ ಎಂಬ ಆರೋಪ ಕೇಳಿ ಬಂದಿದೆ. ಮೃತ ವೈದ್ಯಳನ್ನು...
- Advertisement -
error: Content is protected !!