Sunday, October 1, 2023

‘ಪೌರತ್ವ’ ಪ್ರತಿಭಟನೆ: ಇಂದಿನಿಂದ ರಾಜ್ಯಾದ್ಯಂತ 3 ದಿನ ನಿಷೇಧಾಜ್ಞೆ

Follow Us

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ನಂತರ ರಾಜ್ಯದಲ್ಲೂ ಪ್ರತಿಭಟನೆ ಕಾವು ಪಡೆಯುತ್ತಿದೆ. ಮಂಗಳೂರಿನಲ್ಲಿ ಬುಧವಾರ ಕೇರಳ ಮೂಲದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ‍‍ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯವ್ಯಾಪಿ ಗುರುವಾರ(ಡಿ.19) ಬೆಳಗ್ಗೆ 6 ರಿಂದ ಡಿ.21ರ ತಡರಾತ್ರಿ 12 ವರೆಗೆ ನಿಷೇಧಾಜ್ಞೆ ವಿಧಿಸಿ ಪೊಲೀಸ್ ಇಲಾಖೆ ಆದೇಶಿಸಿದೆ.

ಶಾಲಾ-ಕಾಲೇಜುಗಳು, ಸರ್ಕಾರಿ, ಖಾಸಗಿ ಸಂಸ್ಥೆಗಳ ನೌಕರರಿಗೆ ಈ‌ ನಿಷೇಧಾಜ್ಞೆ ಅನ್ವಯವಾಗುವುದಿಲ್ಲ ಎಂದು ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಅಮರ್ ಕುಮಾರ್ ಪಾಂಡೆ ತಿಳಿಸಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸೆಕ್ಷನ್ 144 ರಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಯಾವುದೇ ಪ್ರತಿಭಟನೆಗಳಿಗೆ ಪೋಲೀಸರು ಅನುಮತಿ ನೀಡುವುದಿಲ್ಲ ಎಂದು ಪಾಂಡೆ ತಿಳಿಸಿದರು.

ರಾಜಧಾನಿಯಲ್ಲೂ ನಿಷೇಧಾಜ್ಞೆ : 

ಬುಧವಾರ ರಾತ್ರಿ ತುರ್ತು ಸುದ್ದಿಗೋಷ್ಠಿ ನಡೆಸಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು, ಶಾಂತಿ ಕಾಪಾಡುವ ಸಲುವಾಗಿ ಮೂರು ದಿನಗಳ ಕಾಲ 144 ಸೆಕ್ಷನ್ ನಿಷೇಧಾಜ್ಞೆ ಆದೇಶ ಹೊರಡಿಸಲಾಗಿದೆ ಎಂದರು.

ಮತ್ತಷ್ಟು ಸುದ್ದಿಗಳು

vertical

Latest News

ಹಳ್ಳಕ್ಕೆ ಉರುಳಿದ ಬಸ್: 8‌ ಮಂದಿ‌ ಸಾವು, 25 ಪ್ರಯಾಣಿಕರಿಗೆ ಗಾಯ

newsics.com ಚೆನ್ನೈ: ತಮಿಳುನಾಡಿನ ನೀಲಗಿರಿ ಬೆಟ್ಟದಲ್ಲಿ ಶನಿವಾರ ಪ್ರವಾಸಿ ಬಸ್ ಹಳ್ಳಕ್ಕೆ ಬಿದ್ದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, 25 ಮಂದಿ ಗಾಯಗೊಂಡಿದ್ದಾರೆ. ಮೃತರಲ್ಲಿ ನಾಲ್ವರು ಮಹಿಳೆಯರು ಮತ್ತು...

ಅಕ್ಟೋಬರ್‌ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ತಾಪಮಾನ ಸಾಧ್ಯತೆ!

newsics.com ನವದೆಹಲಿ: ದೇಶದ ಬಹುತೇಕ ಭಾಗಗಳಲ್ಲಿ ಅಕ್ಟೋಬರ್‌ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನ ಮತ್ತು ಸಾಮಾನ್ಯಕ್ಕಿಂತ ಹೆಚ್ಚು ಕನಿಷ್ಠ ತಾಪಮಾನ ದಾಖಲಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶನಿವಾರ ತಿಳಿಸಿದೆ. ತಮಿಳುನಾಡು, ಕರಾವಳಿ...

ಕರ್ನಾಟಕದಲ್ಲಿ ಈ ಬಾರಿ ಶೇ. 25ರಷ್ಟು ಮಳೆಯ ಕೊರತೆ

newsics.com ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಅವಧಿಯಲ್ಲಿ ಈ ವರ್ಷ ಶೇ 25ರಷ್ಟು ಮಳೆ ಕೊರತೆಯಾಗಿದೆ. ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗಿನ ನಾಲ್ಕು ತಿಂಗಳಲ್ಲಿ ಒಟ್ಟು 845 ಮಿ.ಮೀ ಮಳೆ ಸುರಿಯಬೇಕಿತ್ತು. ಆದರೆ, 635...
- Advertisement -
error: Content is protected !!