Saturday, December 2, 2023

ಪ್ರತಿಭಟನೆ ಕಾವು, ರಾಜ್ಯ ಪ್ರವಾಸೋದ್ಯಮಕ್ಕೆ ನೋವು

Follow Us

ಮೈಸೂರು: ಸಿಎಎ ಹಾಗೂ ಎನ್ ಅರ್ ಸಿ ಪರ, ವಿರೋಧಿ ಪ್ರತಿಭಟನೆಗಳು ರಾಜ್ಯದ ಪ್ರವಾಸೋದ್ಯಮದ‌ ಮೇಲೆ ದುಷ್ಪರಿಣಾಮ ಬೀರಿವೆ.

ಪ್ರತಿಭಟನೆಗಳು ಆರಂಭವಾದ ಬಳಿಕ ಮೈಸೂರಿಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿದೆ ಎಂಬುದು ಮೈಸೂರು ಹೋಟೆಲ್ ಅಸೋಸಿಯೇಷನ್ ನಡೆಸಿದ ಸಮೀಕ್ಷೆಯಿಂದ ಬಹಿರಂಗವಾಗಿದೆ.
ಈ ಪ್ರತಿಭಟನೆಗಳಿಂದ ಶೇ.20ರಿಂದ 40ರಷ್ಟು ಪ್ರವಾಸಿಗರು ಭೇಟಿ ನೀಡಿಲ್ಲ. ಪ್ರತಿ ವರ್ಷ ಹೊಸ ವರ್ಷಾಚರಣೆಯ ಹತ್ತು ದಿನಗಳ ಮುಂಚೆಯೆ ಹೋಟೆಲ್ ರೆಸಾರ್ಟ್ ಗಳು ಭರ್ತಿಯಾಗುತ್ತಿದ್ದವು. ಆದರೆ ಈ ಬಾರಿ ಹೊಸ ವರ್ಷಕ್ಕೆ ಹತ್ತಿರದಲ್ಲಿದ್ದರೂ ರಾಜ್ಯದ ರೆಸಾರ್ಟ್ ಗಳು, ಹೋಟೆಲ್ ಗಳು ಪ್ರವಾಸಿಗರಿಲ್ಲದೆ ಭಣಗುಡುತ್ತಿವೆ. ಹಲವರು ಮುಂಚಿತವಾಗಿಯೇ ಕಾದಿರಿಸಿದ್ದ ಹೋಟೆಲ್, ರೆಸಾರ್ಟ್ ವಸವನ್ನು ಪ್ರತಿಭಟನೆ ಹಿನ್ನೆಲೆಯಲ್ಲಿ ರದ್ದುಗೊಳಿಸಿದ್ದಾರೆ. ಪ್ರತಿಭಟನೆಗಳಿಂದಾಗಿ ಮೈಸೂರಿಗೆ ಬರುವ ಪ್ರವಾಸಿಗರಲ್ಲಿ ಶೇ 40%ರಷ್ಟು ಕಡಿಮೆಯಾಗಿದೆ ಎಂದು ಹೋಟೆಲ್ ಅಸೋಸಿಯೇಷನ್ ಅಧ್ಯಕ್ಷ ನಾರಾಯಣ್ ಗೌಡ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಖಾಸಗಿ ಡೇರಿಗಳ ಹಾಲು ಕಲಬೆರಕೆ, ವಿಷಕಾರಿ: FSSAI ವರದಿಯಲ್ಲಿ ಬಹಿರಂಗ

newsics.com ಬೆಂಗಳೂರು: ರಾಜ್ಯದ ಮಾರುಕಟ್ಟೆಗೆ ಪೂರೈಕೆಯಾಗುವ ಬಹುತೇಕ ಖಾಸಗಿ ಬ್ರ್ಯಾಂಡ್‌'ಗಳ ಹಾಲಿನಲ್ಲಿ ವಿಷಕಾರಿ ರಾಸಾಯನಿಕಗಳಿವೆ ಮತ್ತು ಆ ಹಾಲು ಕಲಬೆರಕೆಯಾಗಿದೆ ಎಂಬ ಸಂಗತಿ FSSAI ಪರೀಕ್ಷೆಯಲ್ಲಿ ದೃಢಪಟ್ಟಿದೆ. ಜತೆಗೆ,...

ಆಸ್ಟ್ರೇಲಿಯಾದಲ್ಲಿ ಪಾಕಿಸ್ತಾನಕ್ಕೆ ಅವಮಾನ: ಟ್ರಕ್‌’ಗೆ ತಾವೇ ಲಗೇಜ್‌ ಲೋಡ್‌ ಮಾಡಿದ ಆಟಗಾರರು

newsics.com ಸಿಡ್ನಿ: ಆಸ್ಟ್ರೇಲಿಯಾ ಕ್ರಿಕೆಟ್ ಪ್ರವಾಸಕ್ಕೆ ತೆರಳಿರುವ ಪಾಕಿಸ್ತಾನ ಕ್ರಿಕೆಟ್ ತಂಡದ ಆಟಗಾರರು ವಿಮಾನ ನಿಲ್ದಾಣದಲ್ಲಿ ತಮ್ಮ ಲಗೇಜ್ ಅನ್ನು ತಾವೇ ಟ್ರಕ್ ತುಂಬುತ್ತಿರುವ ವಿಡಿಯೋವೊಂದು ವೈರಲ್ ಆಗುತ್ತಿದೆ. ಪಾಕಿಸ್ತಾನದಿಂದ ತಂದಿರುವ ತಮ್ಮ ಕಿಟ್ ಗಳು...

ರಾಜ್ಯದ 36 ಲಕ್ಷ ಮತದಾರರಿಗೆ ಚುನಾವಣಾ ಆಯೋಗ ನೋಟಿಸ್

newsics.com ಬೆಂಗಳೂರು: ಮತದಾರರ ಪಟ್ಟಿಯಲ್ಲಿ ಎರಡು ಕಡೆ ಹೆಸರಿರುವ ಅಥವಾ ಹೆಸರು ನಕಲು ಮಾಡಿರುವ 36 ಲಕ್ಷ ಮತದಾರರಿಗೆ ರಾಜ್ಯ ಚುನಾವಣಾ ಆಯೋಗವು ಭಾರತೀಯ ಅಂಚೆ ಮೂಲಕ ನೋಟಿಸ್ ನೀಡುವ ಪ್ರಕ್ರಿಯೆಯನ್ನು ಆರಂಭಿಸಿದೆ. ಹೆಚ್ಚುವರಿಯಾಗಿ, ಮುಂದಿನ...
- Advertisement -
error: Content is protected !!