Thursday, March 30, 2023

ಬಜೆಟ್ ನಲ್ಲಿ ಸಾವಯವ ಕೃಷಿಕರಿಗೆ ಉತ್ತೇಜನ: ಸಿಎಂ

Follow Us

ಶಿವಮೊಗ್ಗ: ಸಾವಯವ ಕೃಷಿಕರಿಗೆ ಅನುಕೂಲವಾಗುವಂತೆ ಬಜೆಟ್ ರೂಪಿಸುವೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಸೋಮವಾರ ಸುಭಿಕ್ಷಾ ಸಾವಯವ ಕೃಷಿಕರ ಬಹುರಾಜ್ಯ ಸಹಕಾರ ಸಂಘಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಾವಯವ ಕೃಷಿಕರ ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವೆ ಎಂದರು.
ಬಜೆಟ್ ಬಳಿಕ ತಿಂಗಳಲ್ಲಿ ಒಂದು ದಿನ ಜಿಲ್ಲೆ ಅಥವಾ ತಾಲೂಕು ಕೇಂದ್ರಗಳಲ್ಲಿ ಸಾವಯವ ಕೃಷಿಕರನ್ನು ಭೇಟಿಯಾಗುತ್ತೇನೆ. ಕನಿಷ್ಠ 50 ಸಾವಿರ ರೈತರು, ಕೃಷಿ ವಲಯದ ಪರಿಣಿತರು, ಸಂಶೋಧಕರ ಸಭೆ ನಡೆಸುತ್ತೇನೆ ಎಂದು ಯಡಿಯೂರಪ್ಪ ತಿಳಿಸಿದರು.
ರಾಜ್ಯದಲ್ಲಿರುವ 50 ಸಾವಿರ ಸಾವಯವ ಕೃಷಿಕರು 10 ಮಂದಿಗೆ ಪ್ರೇರಣೆ ನೀಡಿದರೆ ಇನ್ನೊಂದು ವರ್ಷದಲ್ಲಿ ಸಾವಯವ ಕೃಷಿಕರ ಸಂಖ್ಯೆ ಐದು ಲಕ್ಷವಾಗುತ್ತದೆ. ಈ ನಿಟ್ಟಿನಲ್ಲಿ ಸಾವಯವ ಕೃಷಿ ಮಿಷನ್ ಕೂಡ ಕಾರ್ಯಕ್ರಮ ರೂಪಿಸಬೇಕೆಂದರು.
ರೈತರೊಂದಿಗೆ ಮೋದಿ ಮಾತು:
ಪ್ರಧಾನಿ ನರೇಂದ್ರ ಮೋದಿ ಜ.3ರಂದು ರಾಜ್ಯಕ್ಕೆ ಆಗಮಿಸಲಿದ್ದು, ತುಮಕೂರಿನಲ್ಲಿ ಅಂದು ಮಧ್ಯಾಹ್ನ 12ಕ್ಕೆ ರೈತರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಯಡಿಯೂರಪ್ಪ ತಿಳಿಸಿದರು.

ಮತ್ತಷ್ಟು ಸುದ್ದಿಗಳು

vertical

Latest News

ಪಾಸ್​ವರ್ಡ್​ನಿಂದ ಆನ್ ಆಗುತ್ತೆ ಈ ಗ್ಯಾಸ್ ಸ್ಟವ್!

newsics.com ಬಿಹಾರ: ಪಾಸ್​ವರ್ಡ್​ನಿಂದ ಆನ್ ಆಗುತ್ತೆ ಈ ಗ್ಯಾಸ್ ಸ್ಟವ್. ಈ ಡಿಜಿಟಲ್ ಯುಗದಲ್ಲಿ ಯಾವುದೂ ಅಸಾಧ್ಯವಲ್ಲ ಎಂದೇ ಹೇಳಬಹುದು. ಬಿಹಾರದ 13 ವರ್ಷದ ಪ್ರತ್ಯೂಷ್ ಎಂಬ...

ಸಂಸದ ಸ್ಥಾನ ಕಸಿದುಕೊಂಡ ಕೋಲಾರಕ್ಕೆ ಮತ್ತೆ ರಾಹುಲ್‌ ಗಾಂಧಿ

newsics.com ಬೆಂಗಳೂರು: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ 2019ರ ಲೋಕಸಭೆ  ಚುನಾವಣೆ ಸಂದರ್ಭದಲ್ಲಿ ಕೋಲಾರದಲ್ಲಿ ತಾವು ಮಾಡಿದ ಭಾಷಣಕ್ಕೆ ಮಾನನಷ್ಟ ಮೊಕದ್ದಮೆ ಗುರಿಯಾಗಿದ್ದು, ಸದ್ಯ ಸಂಸತ್‌ ಸದಸ್ಯತ್ವ ಸ್ಥಾನದಿಂದಲೇ ಅನರ್ಹಗೊಂಡಿದ್ದಾರೆ. ಈಗ ಕರ್ನಾಟಕ ವಿಧಾನಸಭಾ ಚುನಾವಣೆ...

ಈ ಬಾರಿ ಕಾಂಗ್ರೆಸ್​ಗೆ 115ಕ್ಕೂ ಹೆಚ್ಚು ಸ್ಥಾನ, BJPಗೆ 68 :ಎಬಿಪಿಸಿ ಓಟರ್ ಸಮೀಕ್ಷೆ

newsics.com ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ 115ಕ್ಕೂ ಹೆಚ್ಚು ಸ್ಥಾನ ಗಳಿಸಲಿದೆ. ಜೆಡಿಎಸ್ 23 ಸ್ಥಾನಗಳನ್ನು ಪಡೆಯಬಹುದು  ಎಂದು ಎಬಿಪಿ ಸಿಓಟರ್ ಸಮೀಕ್ಷೆ ಬುಧವಾರ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್...
- Advertisement -
error: Content is protected !!