Wednesday, May 31, 2023

ವಿಧಾನಸಭೆ ಫಲಿತಾಂಶ: ಉಡುಗೊರೆ ನಿರೀಕ್ಷೆಯಲ್ಲಿ ಬಿಎಸ್ ವೈ

Follow Us

ನವದೆಹಲಿ: ರಾಜಕೀಯ ಕುರುಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿರುವ ಮುಖ್ಯಮಂತ್ರಿ ಯಡಿಯೂರಪ್ಪ ಮುಖದಲ್ಲಿ ಮಂದಹಾಸ ಮನೆ ಮಾಡಿದೆ. ಉಪ ಚುನಾವಣೆ ಘೋಷಣೆಯಾದ ದಿನದಿಂದಲೂ ಅಹರ್ನಿಶಿ ದುಡಿದ ಯಡಿಯೂರಪ್ಪ ಗುರಿ ತಲುಪಿದ್ದಾರೆ. ಬಿಜೆಪಿ ಸರ್ಕಾರವನ್ನು ಪತನದಿಂದ ಪಾರು ಮಾಡಿದ್ದಾರೆ. ಹೆಚ್ಚು ಕಡಿಮೆ ಸೇನಾಧಿಪತಿಯಂತೆ ಕರ್ತವ್ಯ ನಿರ್ವಹಿಸಿದ್ದ ಯಡಿಯೂರಪ್ಪ ವಿಜಯದ ಶಂಖನಾದ ಮೊಳಗಿಸಿ ರಥದಿಂದ ಇಳಿದಿದ್ದಾರೆ.

ಇಷ್ಟು ಅಭೂತಪೂರ್ವ ಗೆಲುವಿಗೆ ಕಾರಣರಾದ ಬಿಎಸ್ ವೈಗೆ ಬಿಜೆಪಿ ಹೈಕಮಾಂಡ್ ಯಾವ ಉಡುಗೊರೆ ನೀಡಲಿದೆ ಎಂಬುದೇ ಮಿಲಿಯನ್ ಡಾಲರ್ ಪ್ರಶ್ನೆ. ಮುಖ್ಯಮಂತ್ರಿಯಾಗಿ  ಅಧಿಕಾರ ವಹಿಸಿಕೊಂಡ ಆರಂಭದ ದಿನಗಳಲ್ಲಿ ಯಡಿಯೂರಪ್ಪ ತುಂಬಾ ವಿಚಲಿತರಾಗಿದ್ದರು. ಹಲವು ನಿರ್ಬಂಧಗಳಿಂದಾಗಿ ಅವರು ಹೆಚ್ಚು ಕಡಿಮೆ ರೋಸಿ ಹೋಗಿದ್ದರು. ಬಹಿರಂಗವಾಗಿಯೇ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು.  ತಂತಿಯ ಮೇಲಿನ ನಡಿಗೆಯ ಉದಾಹರಣೆಯನ್ನು ಕೂಡ ನೀಡಿದ್ದರು.

ಆದರೆ ಮಹಾರಾಷ್ಟ್ರ ವಿಧಾನಸಭೆ ಚುನಾವಣಾ ಫಲಿತಾಂಶದ ಬಳಿಕ ಬಿಜೆಪಿ ಹೈ ಕಮಾಂಡ್ ಗೆ ಯಡಿಯೂರಪ್ಪ ಅವರ ನಿಜವಾದ ಶಕ್ತಿಯ ಅರಿವಾಯಿತು. ಯಡಿಯೂರಪ್ಪ ಬಿಜೆಪಿ ಹೈ ಕಮಾಂಡ್ ಬಳಿ ಕೇಳಿದ್ದು ಒಂದೇ ಒಂದು  ಬೇಡಿಕೆ. ಸ್ವಲ್ಪ ಸ್ವಾತಂತ್ರ್ಯ ಕೊಡಿ. ಚಿಕ್ಕಪುಟ್ಟ ವಿಷಯಗಳಲ್ಲಿ ಹಸ್ತಕ್ಷೇಪ ಬೇಡ. ರಾಷ್ಟ್ರೀಯ ವಿಷಯದಲ್ಲಿ ಸಮಾಲೋಚನೆ ಇರಲಿ. ಬೇಡ ಎಂದು ಹೇಳಲ್ಲ. ಉಳಿದಂತೆ ರಾಜ್ಯಕ್ಕೆ ಸಂಬಂಧಿಸಿದ ವಿಷಯದಲ್ಲಿ ಮುಕ್ತವಾಗಿ ವ್ಯವಹರಿಸಲು ಸ್ವಾತಂತ್ರ್ಯ ಕೊಡಿ..

ಇದೀಗ ವಿಧಾನಸಭೆ ಫಲಿತಾಂಶ ಹೊರಹೊಮ್ಮಿದೆ.  ಸ್ಥಿರ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿದೆ. ಇದರ ಹಿಂದೆ ಅಡಗಿರುವುದು ಯಡಿಯೂರಪ್ಪ ಅವರ ನಿರಂತರ ಪ್ರಯತ್ನ. ಇದನ್ನು ಪುರಸ್ಕರಿಸಿ ಹೈ ಕಮಾಂಡ್

ಯಡಿಯೂರಪ್ಪ ಅವರಿಗೆ ಭರ್ಜರಿ ಉಡುಗೊರೆ ನೀಡಲಿದೆಯೇ.. ಇದು ಸದ್ಯಕ್ಕೆ ಎಲ್ಲರ ಮುಂದಿರುವ ಪ್ರಶ್ನೆ. ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಹಲವು ವಿಷಯಗಳಲ್ಲಿ ಬಿಎಸ್ ವೈ ಸ್ವಾತಂತ್ರ್ಯ ಬಯಸುತ್ತಿದ್ದಾರೆ. ಇದು ಗುಟ್ಟಾಗಿ ಉಳಿದಿರುವ ವಿಷಯವಲ್ಲ.. ಮುಂದಿನ  ಬೆಳವಣಿಗೆ ಯಡಿಯೂರಪ್ಪ ಅವರ ರಾಜಕೀಯ ಸ್ವಾತಂತ್ರ್ಯದ ಗುರಿಗಳನ್ನು ನಿರ್ಧರಿಸಲಿವೆ.

ಮತ್ತಷ್ಟು ಸುದ್ದಿಗಳು

vertical

Latest News

Weekend With Ramesh; ಸಾಧಕರ ಕುರ್ಚಿಯಲ್ಲಿ ಡಿಕೆ ಶಿವಕುಮಾರ್!

newsics.com ಬೆಂಗಳೂರು: ಖಾಸಗಿವಾಹಿನಿಯಲ್ಲಿ ವೀಕೆಂಡ್ ವಿತ್ ರಮೇಶ್ ಐದನೇ ಸೀಸನ್​ನ ಈ ವಾರದ ಅತಿಥಿಯಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಗಮಿಸಲಿದ್ದಾರೆ ಎನ್ನುವ ಗಾಳಿ ಸುದ್ದಿಯೊಂದು ಹಬ್ಬಿದೆ. ಭಾನುವಾರದ ಎಪಿಸೋಡ್...

ತರಬೇತಿ ವಿಮಾನ ತುರ್ತು ಭೂಸ್ಪರ್ಶ; ತಪ್ಪಿದ ಭಾರೀ ಅನಾಹುತ

newsics.com ಬೆಳಗಾವಿ: ತರಬೇತಿ ವಿಮಾನವೊಂದು ತಾಂತ್ರಿಕ ತೊಂದರೆಯಿಂದ  ತುರ್ತು ಭೂಸ್ಪರ್ಶ ಆಗಿದೆ. ಈ ಘಟನೆ ಬೆಳಗಾವಿ ತಾಲೂಕಿನ ಹೊನ್ನಿಹಾಳ ಹೊರವಲಯದಲ್ಲಿ ನಡೆದಿದೆ. ರೆಡ್‌ಬರ್ಡ್  ಸಂಸ್ಥೆಗೆ ಸೇರಿದ VT- RBF ತರಬೇತಿ ವಿಮಾನ ಇದಾಗಿದ್ದು, ಘಟನೆ ನಡೆದ...

ಆಪರೇಷನ್ ಪಠ್ಯ ಪುಸ್ತಕ; ಪಠ್ಯಗಳ ಪರಿಷ್ಕರಿಸ್ತೇವೆಂದ ಶಿಕ್ಷಣ ಸಚಿವ ಮಧು ಬಂಗಾರಪ್ಪ

newsics.com ಬೆಂಗಳೂರು:  ಪಠ್ಯ ಪುಸ್ತಕ  ಪರಿಷ್ಕರಣೆ ನಾವು ಮಾಡ್ತೀವಿ. ಪ್ರಣಾಳಿಕೆಯಲ್ಲಿ ಕೊಟ್ಟ ಮಾತಿನಂತೆ ಪರಿಷ್ಕರಣೆ ಮಾಡ್ತೀವಿ. ಮಕ್ಕಳ ಮನಸ್ಸಿನಲ್ಲಿ ಕಲ್ಮಶ ತುಂಬುವ ಪಠ್ಯ ಕೈ ಬಿಡ್ತೀವಿ. ಈ ಬಗ್ಗೆ ಸಿಎಂ, ಡಿಸಿಎಂ ಜೊತೆ ಚರ್ಚಿಸಿ...
- Advertisement -
error: Content is protected !!