newsics.com
ಬೆಂಗಳೂರು: ಉದ್ಯೋಗ ವೀಸಾ ಅವಧಿ ಮುಗಿದು ಸೌದಿ ಅರೇಬಿಯಾದಲ್ಲಿ ಸಿಕ್ಕಿಕೊಂಡು ಬಂಧನಕ್ಕೆ ಒಳಗಾಗಿದ್ದ 32 ಕನ್ನಡಿಗರನ್ನು ರಾಜ್ಯ ಸರ್ಕಾರ ಸುರಕ್ಷಿತವಾಗಿ ಕರೆಸಿಕೊಂಡಿದೆ.
ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ ಅವರ ಸೂಚನೆಯಂತೆ ಸೌದಿ ಕನ್ನಡಿಗರ ನೆರವಿಗೆ ಧಾವಿಸಿದ ಕೌಶಲ್ಯಾಭಿವೃದ್ಧಿ ನಿಗಮದ ಅಧಿಕಾರಿಗಳು, ಕಷ್ಟಕ್ಕೆ ಸಿಲುಕಿರುವ ಎಲ್ಲ ಕನ್ನಡಿಗರನ್ನು ತಾಯ್ನಾಡಿಗೆ ವಾಪಸ್ ಕರೆಸಿಕೊಂಡಿದ್ದಾರೆ. ಗುರುವಾರ ಸಂಜೆ ಎಲ್ಲರೂ ಬೆಂಗಳೂರು ತಲುಪಿದ್ದಾರೆ.
ಶ್ರೀಮಂತ ದೇಶದಲ್ಲಿ ಭಿಕ್ಷೆ ಬೇಡಿ ಜೈಲು ಸೇರಿದ ಭಾರತೀಯರು..!
ಸಚಿವರ ಸೂಚನೆ ಮೇರೆಗೆ ಕೌಶಲ್ಯಾಭಿವೃದ್ಧಿ ನಿಗಮದ ಅಧಿಕಾರಿಗಳು, ದೆಹಲಿಯ ವಿದೇಶಾಂಗ ಇಲಾಖೆ, ದುಬೈನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಅಧಿಕಾರಿಗಳ ಜತೆ ಸುದೀರ್ಘ ಮಾತುಕತೆ ನಡೆಸಿದರಲ್ಲದೆ, ಅಷ್ಟೂ ಉದ್ಯೋಗಿಗಳನ್ನು ಚೆನ್ನೈಗೆ ಕರೆಸಿಕೊಂಡು, ಅಲ್ಲಿಂದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ಸಿನಲ್ಲಿ ಬೆಂಗಳೂರಿಗೆ ಕರೆಸಿಕೊಂಡಿದ್ದಾರೆ.
ಸದ್ಯ ಎಲ್ಲರೂ ಬೆಂಗಳೂರು ವಿವಿಯ ಹಾಸ್ಟೆಲ್’ನಲ್ಲಿದ್ದು, ಅಲ್ಲಿ ಎಲ್ಲರನ್ನೂ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ.
ಸೌದಿಯಿಂದ ವಾಪಸ್ ಬಂದಿರುವ ಎಲ್ಲ ಕನ್ನಡಿರಿಗೂ ಉದ್ಯೋಗ ಕಲ್ಪಿಸಲಾಗುವುದು. ಅವರವರ ಕೌಶಲ್ಯ ಗುರುತಿಸಿ ಉದ್ಯೋಗಾವಕಾಶ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಹೇಳಿದ್ದಾರೆ.