ಬೆಂಗಳೂರು: ಏಳನೇ ತರಗತಿಗೆ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಪಬ್ಲಿಕ್ ಪರೀಕ್ಷೆಯ ಬದಲಿಗೆ ಸಾಮಾನ್ಯ ಮೌಲ್ಯಮಾಪನ ಪರೀಕ್ಷೆ ನಡೆಸಲಾಗುವುದು ಎಂದು ಎಳೆದಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಸಾಮಾನ್ಯ ಮೌಲ್ಯಮಾಪನ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆಗಳನ್ನು ರಾಜ್ಯಮಟ್ಟದಲ್ಲಿಯೇ ತಯಾರಿಸಲಾಗುತ್ತದೆ. ಜಿಲ್ಲಾ ಮಟ್ಟದಲ್ಲಿ ಇತರ ಶಾಲೆಗಳ ಶಿಕ್ಷಕರು ಮೌಲ್ಯಮಾಪನ ನಡೆಸಲಿದ್ದಾರೆ. ಆದರೆ, ಇಲ್ಲಿ ಯಾರನ್ನೂ ಅನುತ್ತೀರ್ಣಗೊಳಿಸುವುದಿಲ್ಲ. ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯದ ಮೇಲೆ ಪ್ರಮಾಣಪತ್ರ ನೀಡಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.