ಬೆಂಗಳೂರು: ಚಂದನವನದಲ್ಲಿ ಮಾದಕ ದ್ರವ್ಯ ಜಾಲದ ನಂಟಿನ ತನಿಖೆ ನಡೆಸುತ್ತಿರುವ ಸಿಸಿಬಿ ಮುಂದೆ ನಟಿ ಐಂದ್ರಿತಾ ಮತ್ತು ಅವರ ಪತಿ ದಿಗಂತ್ ಹಾಜರಾಗಿದ್ದಾರೆ. ಇದೀಗ ಇಬ್ಬರನ್ನು ಪ್ರತ್ಯೇಕವಾಗಿ ವಿಚಾರಣೆಗೆ ಗುರಿಪಡಿಸಲಾಗಿದೆ. ಡಿಸಿಪಿ ರವಿಕುಮಾರ್ ವಿಚಾರಣೆಯ ನೇತೃತ್ವ ವಹಿಸಿದ್ದಾರೆ.
ಸಿಸಿಬಿ ಕಚೇರಿಯ ನೆಲ ಅಂತಸ್ತಿನಲ್ಲಿ ದಿಗಂತ್ ವಿಚಾರಣೆ ನಡೆಸಲಾಗುತ್ತಿದೆ. ಕಚೇರಿಯ ಮೊದಲ ಮಹಡಿಯಲ್ಲಿ ಐಂದ್ರಿತಾ ಅವರನ್ನು ವಿಚಾರಣೆಗೆ ಗುರಿಪಡಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಸಿಸಿಬಿ ಕಚೇರಿ ಸುತ್ತಮುತ್ತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ವಿಚಾರಣೆ ಸಂಬಂಧ ಸಿಸಿಬಿ ಪ್ರಶ್ನಾವಳಿ ಸಿದ್ದಪಡಿಸಿದ್ದು, ಅದರ ಆಧಾರದಲ್ಲಿ ವಿಚಾರಣೆ ನಡೆಯುತ್ತಿದೆ.
. ಇಬ್ಬರ ಹೇಳಿಕೆಯಲ್ಲಿನ ಸಮಾನ ಅಂಶಗಳು ಮತ್ತು ವ್ಯತಿರಿಕ್ತ ಅಂಶಗಳ ಆಧಾರದಲ್ಲಿ ತನಿಖೆ ನಡೆಯಲಿದೆ.
ಐಂದ್ರಿತಾ ವಿದೇಶಗಳಲ್ಲಿ ನಡೆಯುತ್ತಿರುವ ಪಾರ್ಟಿಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವವರ ಚಟುವಟಿಕೆ ಕುರಿತಂತೆ ಕೂಡ ಸಿಸಿಬಿ ಮಾಹಿತಿ ಸಂಗ್ರಹಿಸುವ ಸಾಧ್ಯತೆಯಿದೆ