Thursday, December 7, 2023

ಬೆಂಗಳೂರು ಹಿಂಸಾಚಾರ : ನಗರದ ವಿವಿಧೆಡೆ ಎನ್ ಐ ಎ ದಾಳಿ

Follow Us

ಬೆಂಗಳೂರು: ನಗರದ ಕೆ ಜಿ. ಹಳ್ಳಿ ಮತ್ತು ಡಿ . ಜೆ. ಹಳ್ಳಿಯಲ್ಲಿ ನಡೆದ  ಹಿಂಸಾಚಾರ ಕುರಿತ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ ಎರಡು ಪೊಲೀಸ್ ಠಾಣಾ ವ್ಯಾಪ್ತಿಯ 12 ಪ್ರದೇಶಗಳಲ್ಲಿ ಏಕ ಕಾಲಕ್ಕೆ ದಾಳಿ ನಡೆಸಿದೆ.

ತನಿಖೆಯ ನಿಟ್ಟಿನಲ್ಲಿ ಮಹತ್ವದ ದಾಖಲೆ ಸಂಗ್ರಹಿಸಲು ಎನ್ ಐ ಎ ಈ ದಾಳಿ ನಡೆಸಿದೆ.  ಡಿಐಜಿ ದರ್ಜೆಯ ಅಧಿಕಾರಿಗಳೇ ಈ ದಾಳಿಗೆ ನೇತೃತ್ವ ನೀಡಿದ್ದಾರೆ ಎಂದು ವರದಿಯಾಗಿದೆ.

ಬೆಂಗಳೂರು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎರಡು ಎಫ್  ಐ ಆರ್ ಗಳ ಬಗ್ಗೆ ಮಾತ್ರ ಎನ್ ಐ ಎ ತನಿಖೆ ನಡೆಸುತ್ತಿದೆ. ಈ ಗಲಭೆ ಒಂದು ವ್ಯವಸ್ಥಿತ ಸಂಚಿನ ಭಾಗವಾಗಿತ್ತೆ ಮತ್ತು ಇದಕ್ಕೆ ಆರ್ಥಿಕ ಮೂಲ ಯಾವುದು ಎಂಬ ಬಗ್ಗೆ ಎನ್ ಐ ಎ ಗಮನ ಕೇಂದ್ರೀಕರಿಸಲಿದೆ.

ರಾಜ್ಯದ ಹೊರಗಿನ ಕೆಲವು ಶಕ್ತಿಗಳು ರಿಮೋಟ್ ಕಂಟ್ರೋಲ್ ಮಾದರಿಯಲ್ಲಿ ಈ ಗಲಭೆ ಹುಟ್ಟು ಹಾಕಿರುವ  ಶಂಕೆ ಕೂಡ ವ್ಯಕ್ತವಾಗಿದೆ. ರಾಜ್ಯ ಪೊಲೀಸರ ನಿಕಟ ಸಹಕಾರದೊಂದಿಗೆ ಎನ್ ಐ ಎ ತನಿಖೆ ಮುಂದುವರಿಸಲಿದೆ

ಮತ್ತಷ್ಟು ಸುದ್ದಿಗಳು

vertical

Latest News

ನಂದಿನಿ ಹಾಲಿನ ದರ ಮತ್ತೆ ಏರಿಕೆ..!!

Newsics.com ಬೆಂಗಳೂರು :  ರಾಜ್ಯದ ಜನತೆಗೆ ಮತ್ತೊಂದು ದರ ಏರಿಕೆಯ ಬಿಸಿ ಕಾದಿದೆ. ಹೌದು, ನಂದಿನಿ ಹಾಲಿನ ದರ ಪರಿಷ್ಕರಣೆಗೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ (KMF)...

ಚಿನ್ನ, ಜಮೀನು, ಬಿಎಂಡಬ್ಲ್ಯೂ ಕಾರಿಗೆ ಬೇಡಿಕೆ : ಕೇರಳದ ವೈದ್ಯೆ ಆತ್ಮಹತ್ಯೆ

Newsics.com ಕೇರಳ : ಕೇರಳದ ತಿರುವನಂತಪುರಂ ಮೆಡಿಕಲ್ ಕಾಲೇಜಿನ ಶಸ್ತ್ರಚಿಕಿತ್ಸಾ ವಿಭಾಗದ ಸ್ನಾತಕೋತ್ತರ ವೈದ್ಯೆ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಆತ್ಮಹತ್ಯೆಗೆ ವರದಕ್ಷಿಣೆಗೆ ಬೇಡಿಕೆ ಇಟ್ಟಿದ್ದೆ ಕಾರಣ ಎಂಬ ಆರೋಪ ಕೇಳಿ ಬಂದಿದೆ. ಮೃತ ವೈದ್ಯಳನ್ನು...

ಊಟ ಕೇಳಿದ್ದಕ್ಕೆ ವಿದ್ಯಾರ್ಥಿಗಳಿಗೆ ಬಿತ್ತು ಚಾಟಿ ಏಟು

newsics.com ಹಾವೇರಿ : ಊಟ ಕೇಳಿದ ವಿಧ್ಯಾರ್ಥಿಗಳಿಗೆ ವಾರ್ಡನ್ ಚಾಟಿ ಏಟು ಕೊಟ್ಟಿರುವಂತಹ ಅಮಾನವೀಯ ಘಟನೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆಯಾದ ಹಾವೇರಿಯಲ್ಲಿ ನಡೆದಿದೆ. ರಾಣೇಬೆನ್ನೂರು ನಗರದ ಅಂಬೇಡ್ಕರ್ ವಸತಿ...
- Advertisement -
error: Content is protected !!