ಬೆಂಗಳೂರು: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನವನ್ನು ತಕ್ಷಣ ಪರಿಸರ ಸೂಕ್ಷ್ಮ ವಲಯವನ್ನಾಗಿ(ಇಎಸ್ ಝಡ್) ಘೋಷಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಕೇಂದ್ರ ಪರಿಸರ ಮತ್ತು ಅರಣ್ಯ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರಿಗೆ ಪತ್ರ ಬರೆದಿರುವ ಬಿಎಸ್ ವೈ, ಅಂತಿಮ ಅಧಿಸೂಚನೆ ಹೊರಬರದ ಕಾರಣ ಅಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳು ನಿಂತುಹೋಗಿವೆ ಎಂದಿದ್ದಾರೆ.
ಬೆಂಗಳೂರು ನಗರಕ್ಕೆ ಹತ್ತಿರದಲ್ಲೆ ಈ ಉದ್ಯಾನವನವಿರುವುದರಿಂದ ರಾಜ್ಯ ಸರ್ಕಾರ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು 100 ಮೀಟರ್ ನಿಂದ 1 ಕಿಲೋಮೀಟರ್ ಅಂತರದಲ್ಲಿ 268.96 ಚದರ ಕಿಲೋ ಮೀಟರ್ ನಿಂದ 168.84 ಚದರ ಕಿಲೋಮೀಟರ್ ಗೆ ತಗ್ಗಿಸಬೇಕೆಂದು ಸಿಎಂ ಆಗ್ರಹಿಸಿದ್ದಾರೆ.
ಬನ್ನೇರುಘಟ್ಟ ಉದ್ಯಾನ ಪರಿಸರ ಸೂಕ್ಷ್ಮ ವಲಯವಾಗಲಿ; ಕೇಂದ್ರಕ್ಕೆ ಸಿಎಂ ಪತ್ರ
Follow Us