Monday, October 2, 2023

2022ರ ಅಕ್ಟೋಬರ್ ವೇಳೆಗೆ ಬೆಂಗಳೂರು-ಮೈಸೂರು ನಡುವಿನ ರಾಷ್ಟ್ರೀಯ ಹೆದ್ದಾರಿ ಸಂಚಾರಕ್ಕೆ ಮುಕ್ತ

Follow Us

newsics.com
ಬೆಂಗಳೂರು: ಬೆಂಗಳೂರು-ಮೈಸೂರು ನಡುವಿನ ರಾಷ್ಟ್ರೀಯ ಹೆದ್ದಾರಿ ಮುಂದಿನ ದಸರಾ ವೇಳೆಗೆ ‌ಪ್ರಯಾಣಕ್ಕೆ‌ ಮುಕ್ತವಾಗಲಿದೆ ಎಂದು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಈ ಹೆದ್ದಾರಿಯ ಬಳಕೆಯಿಂದ ಬೆಂಗಳೂರು -ಮೈಸೂರಿಗೆ ಒಂದೂವರೆ ಗಂಟೆಯಲ್ಲಿ ಪ್ರಯಾಣಿಸಬಹುದು. 8172ಕೋಟಿ ರೂ. ವೆಚ್ಚದಲ್ಲಿ ಹೆದ್ದಾರಿ ನಿರ್ಮಾಣವಾಗುತ್ತಿದೆ. 10 ಪಥದ ಹೆದ್ದಾರಿ ನಿರ್ಮಾಣ ಕಾರ್ಯ 2022ರ ಅಕ್ಟೋಬರ್ ವೇಳೆಗೆ ಮುಕ್ತಾಯವಾಗಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಪಟ್ಟಣದ ಹೊರವಲಯದಲ್ಲಿ ಸಾಗುವ ರಸ್ತೆ 9 ಬೃಹತ್‌ ಸೇತುವೆ, 44 ಸಣ್ಣ ಸೇತುವೆ , 4 ಓವರ್ ಬ್ರಿಡ್ಜ್ ಒಂದು ಅಂಡರ್ ಬ್ರಿಡ್ಜ್ ಒಳಗೊಂಡಿದೆ.
ಇದರೊಂದಿಗೆ ಟೋಲ್ ಗೇಟ್ ಅನ್ನು ಕೂಡ ನಿರ್ಮಾಣವಾಗಲಿದ್ದು, ಟೋಲ್ ದರ ನಿರ್ಧಾರವಾಗಬೇಕಿದೆ ಎಂದು ನಿತಿನ್ ಗಡ್ಕರಿ ತಿಳಿಸಿದ್ದಾರೆ.

 

ಈಜುಕೊಳದಲ್ಲಿನ ಫೋಟೋ ಹಂಚಿಕೊಂಡ ನಟಿ ರುಬಿನಾ ಡಿಲೈಕ್

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನದಲ್ಲಿ ಉಸಿರಾಟ ಸ್ಥಗಿತವಾಗಿದ್ದ ಮಗುವಿಗೆ ಮರುಜೀವ ನೀಡಿದ ವೈದ್ಯ, ಐಎಎಸ್ ಅಧಿಕಾರಿ!

newsics.com ನವದೆಹಲಿ: ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಮಗುವಿಗೆ ವಿಮಾನದಲ್ಲಿ ಪ್ರಯಾಣಿಸುವ ವೇಳೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು, ವಿಮಾನದಲ್ಲಿದ್ದ ಐಎಎಸ್ ಅಧಿಕಾರಿ ಹಾಗೂ ವೈದ್ಯರೊಬ್ಬರು ಚಿಕಿತ್ಸೆ...

ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಅ.1 ರಿಂದ ಜಾರಿ!

newsics.com ಬೆಂಗಳೂರು: ಐದು ವರ್ಷಗಳ ಬಳಿಕ ರಾಜ್ಯದಲ್ಲಿ ಸ್ಥಿರಾಸ್ತಿಗಳ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಲಾಗಿದೆ. ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಭಾನುವಾರದಿಂದ (ಅ.1) ಜಾರಿಯಾಗಿದೆ. ಹೊಸ ದರಗಳ ಪ್ರಕಾರ ದಸ್ತಾವೇಜುಗಳ ನೋಂದಣಿಗೆ ನೋಂದಣಿ ಮತ್ತು ಮುದ್ರಾಂಕ...

ವಿದ್ಯುತ್ ಲೈನ್ ತಗುಲಿ 5 ಜಾನುವಾರು ಸ್ಥಳದಲ್ಲಿಯೇ ಸಾವು

newsics.com ಕೊಡಗು: ವಿದ್ಯುತ್ ಲೈನ್ ತುಂಡಾಗಿ ಬಿದ್ದ ಹಿನ್ನೆಲೆ ಐದು ಜಾನುವಾರುಗಳು ಸ್ಥಳದಲ್ಲಿಯೇ ಸಾವನ್ನಪ್ಪಿದೆ. ದಾರುಣ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಮತ್ತೂರಿನಲ್ಲಿ ನಡೆದಿದೆ. ಮತ್ತೂರು ಗ್ರಾಮದ ಅಲೇಮಾಡ ನಾಣಯ್ಯ ಅವರು ಶ್ರೀನಿವಾಸ್ ಎಂಬುವರ...
- Advertisement -
error: Content is protected !!