Saturday, June 10, 2023

ಜೂನ್ 1ರಿಂದ ಬಿಸಿಯೂಟ ಬಂದ್: ಬದಲಿಗೆ ಹಣ ನೀಡಲು ನಿರ್ಧಾರ

Follow Us

newsics.com

ಬೆಂಗಳೂರು: ಜೂನ್ ಒಂದರಿಂದ ಬಿಬಿಎಂಪಿ ಪೌರ ಕಾರ್ಮಿಕರಿಗೆ ಬಿಸಿಯೂಟ ಬಂದ್ ಆಗಲಿದೆ.

ಪ್ರತಿದಿನ ಬೆಳಗ್ಗೆ, ಮಧ್ಯಾಹ್ನ ಅದಮ್ಯ ಚೇತನ, ಇಸ್ಕಾನ್ ಸಂಸ್ಥೆಗಳ ಮೂಲಕ ಪೌರ ಕಾರ್ಮಿಕರಿಗೆ ತಿಂಡಿ ಹಾಗೂ ಬಿಸಿಯೂಟ ನೀಡಲಾಗುತ್ತಿತ್ತು. ಆದರೆ, ಈ ಊಟದಲ್ಲಿ ಉಪ್ಪು ಇಲ್ಲ, ಖಾರ ಇಲ್ಲ, ರುಚಿಯಂತೊ ಮೊದ್ಲೆ ಇಲ್ಲ ಅಂತ ಪೌರಕಾರ್ಮಿಕರು ಬಿಬಿಎಂಪಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಬಿಸಿಯೂಟಕ್ಕೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ.
ಬಿಬಿಎಂಪಿಯಲ್ಲಿ ಗುತ್ತಿಗೆ ಆಧಾರದಲ್ಲಿ 15,700 ಪೌರಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದು, ಕಳೆದ 4 ವರ್ಷಗಳಿಂದ ಅದಮ್ಯ ಚೇತನ ಹಾಗೂ ಇಸ್ಕಾಂ ಸಂಸ್ಥೆಗಳ ಮೂಲಕ ಬಿಸಿಯೂಟ ಪೂರೈಕೆ ಮಾಡಲಾಗುತ್ತಿದೆ. ಆಹಾರ ಪೂರೈಕೆಯ ವೆಚ್ಚವನ್ನು ಪಾಲಿಕೆಯೇ ಭರಿಸುತ್ತಿತ್ತು. ಆದರೆ, ಶೇ.30 ರಿಂದ 4೦ ರಷ್ಟು ಪೌರಕಾರ್ಮಿಕರು ಮಾತ್ರ ಊಟ ಮಾಡುತ್ತಿದ್ದು ಉಳಿದ ಆಹಾರ ನಿತ್ಯ ವ್ಯರ್ಥವಾಗುತ್ತಿತ್ತು.

ಈಗ ಇದಕ್ಕೆ ಬ್ರೇಕ್ ಹಾಕಲು ಬಿಬಿಎಂಪಿ ಹೊಸ ಯೋಜನೆ ಜಾರಿ ಮಾಡಿದೆ. ಬಿಸಿಯೂಟದ ಮೊತ್ತವನ್ನು ಪೌರಕಾರ್ಮಿಕರ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲು‌ ಮುಂದಾಗಿದೆ. ತಿಂಡಿಯ ಹಣ ನೇರವಾಗಿ ಪೌರಕಾರ್ಮಿಕರ ಬ್ಯಾಂಕ್ ಖಾತೆಗೆ ಜಮಾ ಮಾಡಲು ಪ್ಲಾನ್ ಮಾಡಲಾಗಿದೆ. ಬಿಸಿಯೂಟ ಬದಲಿಗೆ ನೇರವಾಗಿ ಪೌರ ಕಾರ್ಮಿಕರ ಅಕೌಂಟ್‌ಗೆ 50 ರೂ ಹಣ ವರ್ಗಾವಣೆ ಮಾಡಲಾಗುತ್ತೆ. ಪ್ರತಿ ಊಟಕ್ಕೆ ಜಿಎಸ್‌ಟಿ ಸೇರಿದಂತೆ ಸುಮಾರು 5೦ ರೂ ನೀಡಲು ಇಲಾಖೆ ನಿರ್ಧರಿಸಿದೆ.

ಕಾಂಗ್ರೆಸ್ ಪಕ್ಷ ಬಹುಮತದೊಂದಿಗೆ ಆಡಳಿತಕ್ಕೆ ಬರುತ್ತಿದ್ದಂತೆ ಬಹಳಷ್ಟು ಬದಲಾವಣೆಗೆ ಮುಂದಾಗಿದೆ.

ಧಾರವಾಡದಲ್ಲಿ ತಡರಾತ್ರಿ ಡಬಲ್ ಮರ್ಡರ್

ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ

ಮತ್ತಷ್ಟು ಸುದ್ದಿಗಳು

vertical

Latest News

ಗಡಿಯಲ್ಲಿ ಪಾಕ್ ನಿಗೂಢ ಬಲೂನ್ ಪತ್ತೆ: ಸೇನೆಯಿಂದ ಶೋಧ ಕಾರ್ಯ

Newsics.com ಶ್ರೀನಗರ: ಪಾಕಿಸ್ತಾನದ ಅಂತರಾಷ್ಟ್ರೀಯ ಏರ್‌ಲೈನ್ಸ್ ಲಾಂಛನ ಇರುವ ವಿಮಾನದ ಆಕಾರದ ಅನುಮಾನಾಸ್ಪದ ಬಲೂನ್ ಜಮ್ಮು ಮತ್ತು ಕಾಶ್ಮೀರದ...

ಗ್ಯಾರಂಟಿ ಜಾರಿ ಬೆನ್ನಲ್ಲೇ ಮದ್ಯಪ್ರಿಯರಿಗೆ ಶಾಕ್

newsics.com ಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿ ಜಾರಿಗೊಳಿಸಿದ ಬೆನ್ನಲ್ಲೇ ಮದ್ಯದ ಬೆಲೆಯನ್ನು ದುಪ್ಪಟ್ಟು ಮಾಡಿ ಮದ್ಯಪ್ರಿಯರಿಗೆ ಶಾಕ್ ನೀಡಿದೆ. ಕರೆಂಟ್ ಬಿಲ್ ದರ ಏರಿಕೆ ಬಳಿಕ...

ಚಂಡಮಾರುತ: ಕರ್ನಾಟಕ ಸೇರಿ 3 ರಾಜ್ಯಗಳಿಗೆ ಅಲರ್ಟ್

Newsics.com ನವದೆಹಲಿ: ಅರಬ್ಬೀ ಸಮುದ್ರದ ಕರಾವಳಿ ಭಾಗದಲ್ಲಿ ಭಾರೀ ಆತಂಕ ಮೂಡಿಸಿರುವ ಬಿಪರ್ಜೋಯ್ ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ಇನ್ನಷ್ಟು ತೀವ್ರಗೊಳ್ಳಲಿದ್ದು ಉತ್ತರ ಈಶಾನ್ಯದೆಡೆಗೆ ಚಲಿಸಲಿದೆ...
- Advertisement -
error: Content is protected !!