Monday, October 2, 2023

‘ಸೀತಾಳೆದಂಡೆಯ ಸದ್ದಿಲ್ಲದ ಕತೆಗಳು’ ಕಥಾಸಂಕಲನ ಜ.5ಕ್ಕೆ ಬಿಡುಗಡೆ

Follow Us

ಬೆಂಗಳೂರು: ಹಿರಿಯ ಲೇಖಕಿ, ಪತ್ರಕರ್ತೆ ಭಾರತಿ ಹೆಗಡೆಯವರ ‘ಸೀತಾಳೆದಂಡೆಯ ಸದ್ದಿಲ್ಲದ ಕತೆಗಳು’ ಕಥಾಸಂಕಲನ ಭಾನುವಾರ (ಜ.5) ಬೆಳಗ್ಗೆ 10ಕ್ಕೆ ಲೋಕಾರ್ಪಣೆಗೊಳ್ಳಲಿದೆ.
ಬೆಂಗಳೂರು ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ‌ಕೃಷ್ಣರಾಜ ಪರಿಷನ್ಮಂದಿರದಲ್ಲಿ ಹಿರಿಯ ನಿರ್ದೇಶಕ ಟಿ.ಎನ್. ಸೀತಾರಾಮ್ ಕಥಾಸಂಕಲನ ಬಿಡುಗಡೆಗೊಳಿಸಲಿದ್ದಾರೆ. ಕವಿ, ಚಿಂತಕ ಸುಬ್ಬು ಹೊಲೆಯಾರ್, ಲೇಖಕಿ ಎನ್. ಸಂಧ್ಯಾರಾಣಿ, ಹಿರಿಯ ಲೇಖಕಿ, ಪ್ರಕಾಶಕಿ ಡಾ.ಆರ್. ಪೂರ್ಣಿಮಾ, ಲೇಖಕಿ ಭಾರತಿ ಹೆಗಡೆ ಉಪಸ್ಥಿತರಿರುವರು. ಈ‌ ಕಥಾ ಸಂಕಲನವನ್ನು ಬೆಂಗಳೂರಿನ ವಿಕಾಸ ಪ್ರಕಾಶನ ಹೊರತಂದಿದೆ.

ಕಥಾಸಂಕಲನ ಕುರಿತ ಕಿರು ಯಕ್ಷಗಾನ:
ಪುಸ್ತಕ ಬಿಡುಗಡೆಗೂ ಮುನ್ನ ಸೀತಾಳೆ ಮನೋವ್ಯಾಪಾರದ ಕುರಿತ ಕಿರು ಯಕ್ಷಗಾನ ಪ್ರದರ್ಶನಗೊಳ್ಳಲಿದೆ. ಎ.ಪಿ. ಪಾಠಕ್ ಅವರ ಭಾಗವತಿಕೆಯಲ್ಲಿ ಯಕ್ಷ ಕಲಾವಿದ ಶಿಶಿರ ಸುವರ್ಣ ಅಭಿನಯಿಸಲಿದ್ದಾರೆ. ಭಾರತಿ ಹೆಗಡೆಯವರ ಮೂಲ‌ ಪರಿಕಲ್ಪನೆಗೆ ಲೇಖಕ, ಚಿಂತಕ ಡಾ.ದಿವಾಕರ ಹೆಗಡೆ ಯಕ್ಷಗಾನ ರೂಪ‌ ನೀಡಿದ್ದು, ಕಲಾವಿದ ಸಂಜೀವ ಸುವರ್ಣ ನಿರ್ದೇಶಿಸಿದ್ದಾರೆ.

 

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನದಲ್ಲಿ ಉಸಿರಾಟ ಸ್ಥಗಿತವಾಗಿದ್ದ ಮಗುವಿಗೆ ಮರುಜೀವ ನೀಡಿದ ವೈದ್ಯ, ಐಎಎಸ್ ಅಧಿಕಾರಿ!

newsics.com ನವದೆಹಲಿ: ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಮಗುವಿಗೆ ವಿಮಾನದಲ್ಲಿ ಪ್ರಯಾಣಿಸುವ ವೇಳೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು, ವಿಮಾನದಲ್ಲಿದ್ದ ಐಎಎಸ್ ಅಧಿಕಾರಿ ಹಾಗೂ ವೈದ್ಯರೊಬ್ಬರು ಚಿಕಿತ್ಸೆ...

ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಅ.1 ರಿಂದ ಜಾರಿ!

newsics.com ಬೆಂಗಳೂರು: ಐದು ವರ್ಷಗಳ ಬಳಿಕ ರಾಜ್ಯದಲ್ಲಿ ಸ್ಥಿರಾಸ್ತಿಗಳ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಲಾಗಿದೆ. ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಭಾನುವಾರದಿಂದ (ಅ.1) ಜಾರಿಯಾಗಿದೆ. ಹೊಸ ದರಗಳ ಪ್ರಕಾರ ದಸ್ತಾವೇಜುಗಳ ನೋಂದಣಿಗೆ ನೋಂದಣಿ ಮತ್ತು ಮುದ್ರಾಂಕ...

ವಿದ್ಯುತ್ ಲೈನ್ ತಗುಲಿ 5 ಜಾನುವಾರು ಸ್ಥಳದಲ್ಲಿಯೇ ಸಾವು

newsics.com ಕೊಡಗು: ವಿದ್ಯುತ್ ಲೈನ್ ತುಂಡಾಗಿ ಬಿದ್ದ ಹಿನ್ನೆಲೆ ಐದು ಜಾನುವಾರುಗಳು ಸ್ಥಳದಲ್ಲಿಯೇ ಸಾವನ್ನಪ್ಪಿದೆ. ದಾರುಣ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಮತ್ತೂರಿನಲ್ಲಿ ನಡೆದಿದೆ. ಮತ್ತೂರು ಗ್ರಾಮದ ಅಲೇಮಾಡ ನಾಣಯ್ಯ ಅವರು ಶ್ರೀನಿವಾಸ್ ಎಂಬುವರ...
- Advertisement -
error: Content is protected !!