Tuesday, March 28, 2023

ರಾಜ್ಯದ ಅತಿಥಿ ಉಪನ್ಯಾಸಕರಿಗೆ ಸಿಹಿಸುದ್ದಿ ನೀಡಿದ ಸಿಎಂ ಬಿಎಸ್‍ವೈ

Follow Us

ಬೆಂಗಳೂರು: ಅತಿಥಿ ಉಪನ್ಯಾಸಕರ ವೇತನಕ್ಕೆ ಆಗ್ರಹಿಸಿ ವಿಧಾನ ಪರಿಷತ್‍ನಲ್ಲಿ ಸದಸ್ಯ ಆಯನೂರು ಮಂಜುನಾಥ್ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಶೀಘ್ರದಲ್ಲೇ ರಾಜ್ಯದ ಅತಿಥಿ ಉಪನ್ಯಾಸಕರಿಗೆ ವೇತನ ಪಾವತಿಸುವುದಾಗಿ ಸಿಎಂ ಬಿಎಸ್‍ವೈ ಘೋಷಿಸಿದ್ದಾರೆ.

ಸರ್ಕಾರದ ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 14447 ಉಪನ್ಯಾಸಕರಿಗೆ ಸಧ್ಯದಲ್ಲೇ ಬಾಕಿ ಇರುವ ವೇತನವನ್ನು ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಬಿಎಸ್‍ವೈ ಮಂಗಳವಾರ ಪರಿಷತ್‍ನಲ್ಲಿ ಘೋಷಿಸಿದ್ದಾರೆ.

ಲಾಕ್‍ಡೌನ್‍ನಿಂದಾಗಿ ರಾಜ್ಯದಲ್ಲಿ ಕಾಲೇಜುಗಳ ಬಾಗಿಲು ಮುಚ್ಚಿದೆ. ಮಾರ್ಚ ತಿಂಗಳವರೆಗೆ ಅತಿಥಿ ಉಪನ್ಯಾಸಕರಿಗೆ ವೇತನ ಪಾವತಿಸಲಾಗಿದೆ. ಏಪ್ರಿಲ್‍ನಿಂದ ಅಗಸ್ಟವರೆಗಿನ ವೇತನ ಬಾಕಿ ಇದೆ. ಈಗ ಬಾಕಿ ವೇತನವನ್ನು ಬಿಡುಗಡೆಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದಿದ್ದಾರೆ. ಆರ್ಥಿಕ ಇಲಾಖೆಗೆ ಸಿಎಂ ಸೂಚನೆ ನೀಡಿರುವುದನ್ನು ಘೋಷಿಸುತ್ತಿದ್ದಂತೆ ಸದಸ್ಯ ಆಯನೂರು ಮಂಜುನಾಥ್ ಹಾಗೂ ಕಾಂಗ್ರೆಸ್,ಜೆಡಿಎಸ್ ಸದಸ್ಯರು ತಮ್ಮ ಧರಣಿ ಹಿಂಪಡೆದಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್‌) ಬಡ್ಡಿ ದರ ಶೇ.8.15 ಕ್ಕೆ ಏರಿಕೆ

newscics.com ನವದೆಹಲಿ: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಭವಿಷ್ಯ ನಿಧಿಯ ಮೇಲಿನ ಬಡ್ಡಿ ದರವನ್ನುಬ ಹೆಚ್ಚಿಸಲು ತೀರ್ಮಾನಿಸಿದೆ....

ವಾಯುಮಾಲಿನ್ಯದಿಂದ 1,220 ಜನರು ಸಾವು

newscics.com ಮುಂಬೈ: ಮುಂಬೈನಲ್ಲಿ 2016-2021 ರ ನಡುವೆ 1,220 ಜನರು ವಾಯುಮಾಲಿನ್ಯದಿಂದ ಸಾವನ್ನಪ್ಪಿದ್ದಾರೆ. ಅಂಕಿಅಂಶಗಳ ಪ್ರಕಾರ, ಮುಂಬೈನಲ್ಲಿ 2016 ಮತ್ತು 2021 ರ ನಡುವೆ 1,220...

ಭಾರತದ ಮೊದಲ ಗೀರ್ ತದ್ರೂಪಿ ತಳಿ ಆಕಳ ಕರು ಜನನ

newsics.com ನವದೆಹಲಿ: ಭಾರತದ ಮೊದಲ ತದ್ರೂಪಿ ಗಿರ್ ತಳಿಯ ಆಕಳ ಕರು ಹರಿಯಾಣದ ಕರ್ನಾಲ್‌ನಲ್ಲಿರುವ ರಾಷ್ಟ್ರೀಯ ಡೈರಿ ಸಂಶೋಧನಾ ಸಂಸ್ಥೆ (NDRI) ಯಲ್ಲಿ ಜನ್ಮ ಪಡೆದಿದೆ.ಈ...
- Advertisement -
error: Content is protected !!