NEWSICS.COM
ಬೆಂಗಳೂರು: ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಮೂರು ಪ್ರಕರಣಗಳನ್ನು ವಾಪಸ್ ಪಡೆಯಲಾಗಿದೆ.
ಶಿವಮೊಗ್ಗ ಮೂಲದ ವಕೀಲ ಬಿ. ವಿನೋದ್ ಯಡಿಯೂರಪ್ಪ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ದಾಖಲು ಮಾಡಿದ್ದ ಪ್ರಕರಣದ ಕುರಿತು ಬುಧವಾರ (ನ.4) ಅರ್ಜಿಯ ವಿಚಾರಣೆ ಕರ್ನಾಟಕ ಹೈಕೋರ್ಟ್ನಲ್ಲಿ ನಡೆಯಬೇಕಿತ್ತು ಆದರೆ.ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಪೀಠದ ಮುಂದೆ ಆರೋಪ ಮಾಡಿದ್ದ ವಿನೋದ್ ಮೂರು ಪ್ರಕರಣಗಳನ್ನು ವಾಪಸ್ ಪಡೆಯುವುದಾಗಿ ಹೇಳಿದ್ದಾರೆ. ಇದಕ್ಕೆ ನ್ಯಾಯಾಲಯ ಕೂಡ ಇದಕ್ಕೆ ಒಪ್ಪಿಗೆ ನೀಡಿದೆ. ಇದರಿಂದ ಬಿ ಎಸ್ ವೈ ನಿರಾಳರಾಗಿದ್ದಾರೆ.