Tuesday, December 5, 2023

ಇನ್ಫೋಸಿಸ್ ಸುಧಾಮೂರ್ತಿಗೆ ಒಲಿದ ಬಾಲ ಸಾಹಿತ್ಯ ಪುರಸ್ಕಾರ

Follow Us

newsics.com

ಬೆಂಗಳೂರು: ಕೇಂದ್ರ ಸಾಹಿತ್ಯ ಅಕಾಡೆಮಿಯು ಈ ವರ್ಷದ ಬಾಲ ಸಾಹಿತ್ಯ ಪುರಸ್ಕಾರ ಹಾಗೂ ಯುವ ಪುರಸ್ಕಾರ ವಿಜೇತರ ಪಟ್ಟಿಯನ್ನು ಪ್ರಕಟಿಸಿದೆ.

ಬಾಲ ಸಾಹಿತ್ಯ ಪುರಸ್ಕಾರಕ್ಕೆ ಕನ್ನಡದ ಪ್ರಸಿದ್ಧ ಲೇಖಕಿಯೂ ಆಗಿರುವ ಇನ್ಫೋಸಿಸ್ ಸಂಸ್ಥಾಪಕಿ ಸುಧಾ ಮೂರ್ತಿ ಅವರನ್ನು ಆಯ್ಕೆ ಮಾಡಲಾಗಿದೆ. ಅಲ್ಲಿಯೇ ವಿಜಯಶ್ರೀ ಹಾಲಾಡಿ ಸೇರಿ 22 ಜನರನ್ನು ಆಯ್ಕೆ ಮಾಡಲಾಗಿದೆ. ಯುವ ಪುರಸ್ಕಾರಕ್ಕೆ ಮಂಜುನಾಯಕ್ ಚಳ್ಳೂರು ಸೇರಿ 20 ಲೇಖಕರು ಭಾಜನರಾಗಿದ್ದಾರೆ.

ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಮಾಧವ್ ಕೌಶಿಕ್ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಕಾರ್ಯಕಾರಿ ಸಮಿತಿಯ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಬಾಲ ಸಾಹಿತ್ಯ ಪುರಸ್ಕಾರ ಮಕ್ಕಳ ಲೇಖಕಿ ಸುಧಾ ಮೂರ್ತಿ ಅವರ ‘ಗ್ರ್ಯಾಂಡ್ ಪೇರೆಂಟ್ಸ್ ಬ್ಯಾಗ್ ಆಫ್ ಸ್ಟೋರೀಸ್’ ಎಂಬ ಕಥಾ ಸಂಕಲನಕ್ಕೆ ಪ್ರಶಸ್ತಿ ನೀಡಲಾಗುತ್ತದೆ. ಮತ್ತೊಬ್ಬ ಕನ್ನಡತಿ ವಿಜಯಶ್ರೀ ಹಾಲಾಡಿ ಅವರ ‘ಸೂರಕ್ಕಿ ಗೇಟ್’ ಮಕ್ಕಳ ಕಾದಂಬರಿಗೆ ಬಾಲ ಸಾಹಿತ್ಯ ಪುರಸ್ಕಾರ ಲಭಿಸಿದೆ.

ಕನ್ನಡದ ಯುವ ಕತೆಗಾರ ಮಂಜುನಾಯಕ್ ಚಳ್ಳೂರು ಅವರ ‘ಫೂ ಮತ್ತು ಇತರ ಕತೆಗಳು’ ಕಥಾ ಸಂಕಲನಕ್ಕೆ ಯುವ ಪುರಸ್ಕಾರ ದೊರೆತಿದೆ. ಎರಡೂ ಪ್ರಶಸ್ತಿಗಳ ವಿಜೇತರಿಗೆ ತಾಮ್ರದ ಫಲಕ ಮತ್ತು ತಲಾ 50,000 ರೂ.ಗಳ ಬಹುಮಾನ.

ಬೆಂಗಳೂರಿನ ಐಐಎಸ್ಸಿ ಏಷ್ಯಾದ ನಂ.1 ಶಿಕ್ಷಣ ಸಂಸ್ಥೆ

ಮತ್ತಷ್ಟು ಸುದ್ದಿಗಳು

vertical

Latest News

ವಿಜಯೇಂದ್ರ ಪತ್ನಿ ಸಹೋದರನ ಮನೆ ಮೇಲೆ ಲೋಕಾಯುಕ್ತ ದಾಳಿ

Newsics.com ಕಲಬುರಗಿ : ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ ಮಾಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪತ್ನಿ ಸಹೋದರ ಡಾ ಪ್ರಭುಲಿಂಗ ಮಾನ್ಕರ್ ಅವರ ಮನೆ...

ಭಾರತದಲ್ಲಿ 75 ಲಕ್ಷಕ್ಕೂ ಅಧಿಕ ವಾಟ್ಸ್ ​ಆ್ಯಪ್ ಅಕೌಂಟ್ ಬ್ಯಾನ್

Newsics.com ನವದೆಹಲಿ : ಮೆಟಾದ ತ್ವರಿತ ಮೆಸೇಜಿಂಗ್ ಪ್ಲಾಟ್​ಫಾರ್ಮ್ ವಾಟ್ಸ್​ಆ್ಯಪ್ ಭಾರತದಲ್ಲಿ ಕಳೆದ ಅಕ್ಟೋಬರ್ ತಿಂಗಳಲ್ಲಿ ಬರೋಬ್ಬರಿ 75 ಲಕ್ಷಕ್ಕೂ ಅಧಿಕ ವಾಟ್ಸ್​ ಆ್ಯಪ್ ಖಾತೆಗಳನ್ನು ರದ್ದುಗೊಳಿಸಿದೆ ಎಂದು ವರದಿಯಾಗಿದೆ. 2021 ಬಳಕೆದಾರರ ಸುರಕ್ಷತ...

ತೆಲಂಗಾಣದ ನೂತನ ಸಿಎಂ ಇವರೇ : ನಾಳೆಯೇ ಪ್ರಮಾಣ ವಚನ..!!

Newsics.com ಹೈದರಾಬಾದ್ : ತೆಲಂಗಾಣದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಿದೆ. ಇದೀಗ ಬಂದ ಮಾಹಿತಿ ಪ್ರಕಾರ, ರೇವಂತ್ ರೆಡ್ಡಿ ಅವರನ್ನೇ...
- Advertisement -
error: Content is protected !!