Monday, December 11, 2023

ಮಾರ್ಗದರ್ಶಿಯನ್ನು ಕಳೆದುಕೊಂಡಂತಾಗಿದೆ- ಸಿಎಂ

Follow Us

* ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ

ಬೆಂಗಳೂರು: ಪೇಜಾವರ ಶ್ರೀಗಳ ದೇಹಾಂತ್ಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ‌ ಮೂರು ದಿನ ಶೋಕಾಚರಣೆಗೆ ಸರ್ಕಾರ ಆದೇಶಿಸಿದೆ.

ಸಂತಾಪ ನುಡಿಗಳನ್ನಾಡುವ ವೇಳೆ‌ ಮುಖ್ಯಮಂತ್ರಿ‌ ಬಿ.ಎಸ್.ಯಡಿಯೂರಪ್ಪ ಈ ಮಾಹಿತಿ‌ ನೀಡಿದರು.

ಶ್ರೀಗಳ ದೇಹಾಂತ್ಯದಿಂದ ಹಿಂದೂ ಧರ್ಮದ ಪ್ರಮುಖ ಮಾರ್ಗದರ್ಶಿಯೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ವಿಷಾದಿಸಿದ್ದಾರೆ.

ಶ್ರೀಗಳು ಎಳವೆಯಲ್ಲಿಯೇ ಸನ್ಯಾಸ ದೀಕ್ಷೆಯನ್ನು ಸ್ವೀಕರಿಸಿ, ಪೇಜಾವರ ಮಠಾಧೀಶರಾದವರು. ಅಷ್ಟಮಠಗಳ ಪರಂಪರೆಯಲ್ಲಿ ಅತಿ ಹೆಚ್ಚು ಬಾರಿ ಉಡುಪಿ ಪರ್ಯಾಯದ ನೇತೃತ್ವ ವಹಿಸಿದ ಹೆಗ್ಗಳಿಕೆ ಶ್ರೀಗಳದ್ದು. ಆಧ್ಯಾತ್ಮಿಕ ಸಾಧನೆಯೊಂದಿಗೆ ಸಮಾಜ ಸೇವೆಯನ್ನು ಉಸಿರಾಗಿಸಿಕೊಂಡಿದ್ದರು ಎಂದು ಬಿಎಸ್ ವೈ ಎಂದು ಹೇಳಿದರು.

ದಲಿತರೊಂದಿಗೆ ಸಹಭೋಜನದಂತಹ ಕ್ರಮಗಳಿಂದ ಹಿಂದೂ ಧರ್ಮದಲ್ಲಿ ಅಸಮಾನತೆಯ ಕೂಗು ಕ್ಷೀಣಿಸುವಂತೆ ಮಾಡಲು ಪ್ರಯತ್ನಿಸಿದವರು ಎಂದು ಯಡಿಯೂರಪ್ಪ ಸ್ಮರಿಸಿದರು.

ಶ್ರೀಕೃಷ್ಣನು ಅವರ ಆತ್ಮಕ್ಕೆ ಮೋಕ್ಷ ಕರುಣಿಸಲಿ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಕ್ತಾದಿಗಳಿಗೆ ನೀಡಲಿ ಎಂದು ಪ್ರಾರ್ಥಿಸುವುದಾಗಿ ಯಡಿಯೂರಪ್ಪ ತಿಳಿಸಿದ್ದಾರೆ..

ಮತ್ತಷ್ಟು ಸುದ್ದಿಗಳು

vertical

Latest News

ನಿನ್ಗೆ ಹುಚ್ಚು ನಾಯಿ ಕಚ್ಚಿದ್ಯಾ? ; ಬಿಜೆಪಿ ವಿರುದ್ಧ ಲಕ್ಷ್ಮಣ್‌ ಸವದಿ ಕೆಂಡಾಮಂಡಲ

  newsics.com ಬೆಳಗಾವಿ: ರೈತರು  ದೇವರ ಸಮಾನ,  ರೈತರ ಹಣ ತಿಂದ ಮಾಲೀಕರು ಉದ್ಧಾರ ಆಗಲ್ಲ. ಅವರಿಗೆ ಮೋಸ ಮಾಡಬೇಡಿ ಎಂದು  ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಕಲಾಪದ ವೇಳೆ...

ಹಸುಗಳ ಮೇಲೆ ಆ್ಯಸಿಡ್‌ ಎರಚಿದ ಬೆಂಗಳೂರಿನ ವೃದ್ಧೆ

newsics.com ನೆಲಮಂಗಲ:  ಮನೆ ಬಳಿ ಮೇಯಲು ಬಂದ ಹಸುಗಳ ಮೇಲೆ ಆ್ಯಸಿಡ್ ಎರಚಿ ವಿಕೃತಿ ಮೆರೆದಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಗುಣಿ ಅಗ್ರಹಾರ ಗ್ರಾಮದಲ್ಲಿ ನಡೆದಿದೆ. ಜೋಸೆಫ್ ಗ್ರೇಸ್ (76 ವರ್ಷ)  ಎನ್ನುವ ಮಹಿಳೆ ಮನೆ...

ಆಸ್ತಿಗಾಗಿ ತಂದೆ-ತಾಯಿಯನ್ನೇ ಕೊಲೆಗೈದಿದ್ದ ಮಗ ಅರೆಸ್ಟ್​

newsics.com ದೇವನಹಳ್ಳಿ:  ಆಸ್ತಿಗಾಗಿ ಹೆತ್ತ ತಂದೆ-ತಾಯಿಯನ್ನೇ ಕೊಲೆಗೈದಿರುವುದಾಗಿ ಪೊಲೀಸರ ವಿಚಾರಣೆ ವೇಳೆ ಮಗ ನರಸಿಂಹಮೂರ್ತಿ ತಪ್ಪೊಪ್ಪಿಕೊಂಡಿದ್ದಾನೆ.  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆ ಗ್ರಾಮದಲ್ಲಿ ವೃದ್ಧ ದಂಪತಿ ಯನ್ನು ಕೊಲೆಗೈದಿದ್ದ ಮಗನನ್ನು ಪೊಲೀಸರು...
- Advertisement -
error: Content is protected !!