Wednesday, May 31, 2023

ಮಾರ್ಗದರ್ಶಿಯನ್ನು ಕಳೆದುಕೊಂಡಂತಾಗಿದೆ- ಸಿಎಂ

Follow Us

* ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ

ಬೆಂಗಳೂರು: ಪೇಜಾವರ ಶ್ರೀಗಳ ದೇಹಾಂತ್ಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ‌ ಮೂರು ದಿನ ಶೋಕಾಚರಣೆಗೆ ಸರ್ಕಾರ ಆದೇಶಿಸಿದೆ.

ಸಂತಾಪ ನುಡಿಗಳನ್ನಾಡುವ ವೇಳೆ‌ ಮುಖ್ಯಮಂತ್ರಿ‌ ಬಿ.ಎಸ್.ಯಡಿಯೂರಪ್ಪ ಈ ಮಾಹಿತಿ‌ ನೀಡಿದರು.

ಶ್ರೀಗಳ ದೇಹಾಂತ್ಯದಿಂದ ಹಿಂದೂ ಧರ್ಮದ ಪ್ರಮುಖ ಮಾರ್ಗದರ್ಶಿಯೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ವಿಷಾದಿಸಿದ್ದಾರೆ.

ಶ್ರೀಗಳು ಎಳವೆಯಲ್ಲಿಯೇ ಸನ್ಯಾಸ ದೀಕ್ಷೆಯನ್ನು ಸ್ವೀಕರಿಸಿ, ಪೇಜಾವರ ಮಠಾಧೀಶರಾದವರು. ಅಷ್ಟಮಠಗಳ ಪರಂಪರೆಯಲ್ಲಿ ಅತಿ ಹೆಚ್ಚು ಬಾರಿ ಉಡುಪಿ ಪರ್ಯಾಯದ ನೇತೃತ್ವ ವಹಿಸಿದ ಹೆಗ್ಗಳಿಕೆ ಶ್ರೀಗಳದ್ದು. ಆಧ್ಯಾತ್ಮಿಕ ಸಾಧನೆಯೊಂದಿಗೆ ಸಮಾಜ ಸೇವೆಯನ್ನು ಉಸಿರಾಗಿಸಿಕೊಂಡಿದ್ದರು ಎಂದು ಬಿಎಸ್ ವೈ ಎಂದು ಹೇಳಿದರು.

ದಲಿತರೊಂದಿಗೆ ಸಹಭೋಜನದಂತಹ ಕ್ರಮಗಳಿಂದ ಹಿಂದೂ ಧರ್ಮದಲ್ಲಿ ಅಸಮಾನತೆಯ ಕೂಗು ಕ್ಷೀಣಿಸುವಂತೆ ಮಾಡಲು ಪ್ರಯತ್ನಿಸಿದವರು ಎಂದು ಯಡಿಯೂರಪ್ಪ ಸ್ಮರಿಸಿದರು.

ಶ್ರೀಕೃಷ್ಣನು ಅವರ ಆತ್ಮಕ್ಕೆ ಮೋಕ್ಷ ಕರುಣಿಸಲಿ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಕ್ತಾದಿಗಳಿಗೆ ನೀಡಲಿ ಎಂದು ಪ್ರಾರ್ಥಿಸುವುದಾಗಿ ಯಡಿಯೂರಪ್ಪ ತಿಳಿಸಿದ್ದಾರೆ..

ಮತ್ತಷ್ಟು ಸುದ್ದಿಗಳು

vertical

Latest News

Weekend With Ramesh; ಸಾಧಕರ ಕುರ್ಚಿಯಲ್ಲಿ ಡಿಕೆ ಶಿವಕುಮಾರ್!

newsics.com ಬೆಂಗಳೂರು: ಖಾಸಗಿವಾಹಿನಿಯಲ್ಲಿ ವೀಕೆಂಡ್ ವಿತ್ ರಮೇಶ್ ಐದನೇ ಸೀಸನ್​ನ ಈ ವಾರದ ಅತಿಥಿಯಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಗಮಿಸಲಿದ್ದಾರೆ ಎನ್ನುವ ಗಾಳಿ ಸುದ್ದಿಯೊಂದು ಹಬ್ಬಿದೆ. ಭಾನುವಾರದ ಎಪಿಸೋಡ್...

ತರಬೇತಿ ವಿಮಾನ ತುರ್ತು ಭೂಸ್ಪರ್ಶ; ತಪ್ಪಿದ ಭಾರೀ ಅನಾಹುತ

newsics.com ಬೆಳಗಾವಿ: ತರಬೇತಿ ವಿಮಾನವೊಂದು ತಾಂತ್ರಿಕ ತೊಂದರೆಯಿಂದ  ತುರ್ತು ಭೂಸ್ಪರ್ಶ ಆಗಿದೆ. ಈ ಘಟನೆ ಬೆಳಗಾವಿ ತಾಲೂಕಿನ ಹೊನ್ನಿಹಾಳ ಹೊರವಲಯದಲ್ಲಿ ನಡೆದಿದೆ. ರೆಡ್‌ಬರ್ಡ್  ಸಂಸ್ಥೆಗೆ ಸೇರಿದ VT- RBF ತರಬೇತಿ ವಿಮಾನ ಇದಾಗಿದ್ದು, ಘಟನೆ ನಡೆದ...

ಆಪರೇಷನ್ ಪಠ್ಯ ಪುಸ್ತಕ; ಪಠ್ಯಗಳ ಪರಿಷ್ಕರಿಸ್ತೇವೆಂದ ಶಿಕ್ಷಣ ಸಚಿವ ಮಧು ಬಂಗಾರಪ್ಪ

newsics.com ಬೆಂಗಳೂರು:  ಪಠ್ಯ ಪುಸ್ತಕ  ಪರಿಷ್ಕರಣೆ ನಾವು ಮಾಡ್ತೀವಿ. ಪ್ರಣಾಳಿಕೆಯಲ್ಲಿ ಕೊಟ್ಟ ಮಾತಿನಂತೆ ಪರಿಷ್ಕರಣೆ ಮಾಡ್ತೀವಿ. ಮಕ್ಕಳ ಮನಸ್ಸಿನಲ್ಲಿ ಕಲ್ಮಶ ತುಂಬುವ ಪಠ್ಯ ಕೈ ಬಿಡ್ತೀವಿ. ಈ ಬಗ್ಗೆ ಸಿಎಂ, ಡಿಸಿಎಂ ಜೊತೆ ಚರ್ಚಿಸಿ...
- Advertisement -
error: Content is protected !!